ಮೇಲ್ಮನೆಯಲ್ಲಿ ಸಚಿವರ ಅಸಹಾಯಕತೆ: ಸಚಿವ ಮುರುಗೇಶ್‌ ನಿರಾಣಿ ಸಮಾಧಾನ


Team Udayavani, Sep 20, 2022, 11:00 PM IST

ಮೇಲ್ಮನೆಯಲ್ಲಿ ಸಚಿವರ ಅಸಹಾಯಕತೆ: ಸಚಿವ ಮುರುಗೇಶ್‌ ನಿರಾಣಿ ಸಮಾಧಾನ

ವಿಧಾನ ಪರಿಷತ್ತು: ಕಡತ ವಿಲೇವಾರಿಗೆ ಸಂಬಂಧಿಸಿದಂತೆ ಸರ್ಕಾರದಲ್ಲಿ ಆಗುತ್ತಿರುವ ವಿಳಂಬ ಧೋರಣೆ ಬಗ್ಗೆ ಸ್ವತಃ ಬೃಹತ್‌ ಕೈಗಾರಿಕೆಗಳ ಸಚಿವ ಮುರುಗೇಶ್‌ ನಿರಾಣಿ, ಮೇಲ್ಮನೆಯಲ್ಲಿ ಬಹಿರಂಗವಾಗಿ ಅಸಹಾಯಕತೆ ವ್ಯಕ್ತಪಡಿಸಿದ ಪ್ರಸಂಗ ಮಂಗಳವಾರ ನಡೆಯಿತು. ಸಚಿವರ ಈ “ಅಸಮಾಧಾನ’ ಕೋಲಾಹಲ ಸೃಷ್ಟಿಸಿತು.

“ನನ್ನದೇ ಕಾರ್ಖಾನೆಯೊಂದರ ಲೀಸ್‌ಗೆ ಸಂಬಂಧಿಸಿದ ಫೈಲ್‌ (ಕಡತ) ಎರಡು ವರ್ಷಗಳಾದರೂ ವಿಲೇವಾರಿ ಮಾಡಿಲ್ಲ. ಆ ಇಲಾಖೆ ಅಧಿಕಾರಿ ಪಂಕಜ್‌ ಕುಮಾರ್‌ ಪಾಂಡೆ ಕೂಡ ಇದೇ ಅಧಿಕಾರಿಗಳ ಗ್ಯಾಲರಿಯಲ್ಲಿ ಕುಳಿತಿದ್ದಾರೆ’ ಎಂದು ಅಸಹಾಯಕತೆ ತೋಡಿಕೊಂಡರು.

ಮಂಗಳವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಸುನೀಲ್‌ ವಲ್ಯಾಪುರ, ಸಕ್ಕರೆ ಕಾರ್ಖಾನೆಗಳು ಕಬ್ಬಿನ ಉಪ ಉತ್ಪನ್ನಗಳಿಂದ ತಯಾರಿಸುವ ವಿದ್ಯುತ್‌, ಎಥೆನಾಲ್‌ ಇತ್ಯಾದಿಗಳಿಂದ ಗಳಿಸುವ ಲಾಭಾಂಶವನ್ನು ರೈತರಿಗೆ ನೀಡುತ್ತಿಲ್ಲ ಎಂದು ಹೇಳಿದರು. ಇದಕ್ಕೆ ಪೂರಕವಾಗಿ ಮಾಜಿ ಸಚಿವ ಲಕ್ಷ್ಮಣ ಸವದಿ, “ಎಥೆನಾಲ್‌ ಉತ್ಪಾದಿಸಿ ಮೂರು ತಿಂಗಳಾದರೂ ಸರ್ಕಾರ ಮತ್ತು ಸರ್ಕಾರಿ ಸ್ವಾಮ್ಯದ ಕಂಟನಿಗಳು ಒಡಂಬಡಿಕೆ ಮಾಡಿಕೊಳ್ಳುತ್ತಿಲ್ಲ’ ಎಂದು ಗಮನ ಸೆಳೆದರು.

ಈ ವೇಳೆ ದನಿಗೂಡಿಸಿದ ಸಚಿವ ಮುರುಗೇಶ್‌ ನಿರಾಣಿ, “ನನ್ನದೇ ಕಾರ್ಖಾನೆಯ ಲೀಸ್‌ಗೆ ಸಂಬಂಧಿಸಿದ ಫೈಲ್‌ ಎರಡು ವರ್ಷಗಳಾದರೂ ವಿಲೇವಾರಿ ಆಗಿಲ್ಲ. ಆ ಅಧಿಕಾರಿಯೂ ಇಲ್ಲಿಯೇ ಇದ್ದಾರೆ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಆಗ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ಮೇಲೆ ಮುಗಿಬಿದ್ದರು. ಮುಖ್ಯ ಸಚೇತಕ ಪ್ರಕಾಶ್‌ ರಾಠೊಡ್‌ ಮಾತನಾಡಿ, “ಸರ್ಕಾರದಲ್ಲಿ ಸಚಿವರ ಸ್ಥಿತಿಯೇ ಹೀಗಿರುವಾಗ, ಸಾಮಾನ್ಯರ ಗತಿ ಏನು? ಸರ್ಕಾರ ನಡೆಯುತ್ತಲೇ ಇಲ್ಲ ಎನ್ನುವುದಕ್ಕೆ ಇದೇ ಉದಾಹರಣೆಯಾಗಿದೆ. ಕೂಡಲೇ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಅಥವಾ ಸಂಬಂಧಪಟ್ಟ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು. ಜೆಡಿಎಸ್‌ನ ಭೋಜೇಗೌಡ ಮಾತನಾಡಿ, “ಇದೊಂದು ಗಂಭೀರ ಸಮಸ್ಯೆ. ಇಲ್ಲಿ ಸಚಿವರು ಸುಳ್ಳಾಗಿರಬೇಕು ಅಥವಾ ಅಧಿಕಾರಿ ತಪ್ಪಾಗಿರಬೇಕು. ಸರ್ಕಾರದ ಮೌನ ಏನು ಸೂಚಿಸುತ್ತಿದೆ? ಕೂಡಲೇ ಪೀಠವು ಮಧ್ಯಪ್ರವೇಶಿಸಬೇಕು’ ಎಂದು ಮನವಿ ಮಾಡಿದರು.

ಮಧ್ಯಪ್ರವೇಶಿಸಿದ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, “ಕಾರ್ಯಾಂಗದಲ್ಲಿನ ಲೋಪಗಳನ್ನು ಉಲ್ಲೇಖೀಸಿ ಸಚಿವರು ಹಾಗೆ ಹೇಳಿದ್ದಾರೆ. ಈ ಹಿಂದೆಯೂ ಸೇರಿ ಕಾರ್ಯಾಂಗದಲ್ಲಿ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಅದನ್ನು ಸರಿಪಡಿಸಿಕೊಂಡು ಮುಂದೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂಬುದು ಸಚಿವರ ಹೇಳಿಕೆಯ ಒಟ್ಟು ತಾತ್ಪರ್ಯ’ ಎಂದು ಸಮಜಾಯಿಷಿ ನೀಡಲು ಯತ್ನಿಸಿದರು.

ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, “ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸಚಿವ ಮುರುಗೇಶ್‌ ನಿರಾಣಿ ಅವರ ಮಾಲೀಕತ್ವದ ನಿರಾಣಿ ಉದ್ಯಮ ಸಮೂಹ ಗುತ್ತಿಗೆ ಪಡೆದಿದೆ. ಲೀಸ್‌ ಒಡಂಬಡಿಕೆಗೆ ಸಚಿವರು ಮುದ್ರಾಂಕ ಶುಲ್ಕ ವಿನಾಯ್ತಿ ಕೇಳಿದ್ದಾರೆ. ಆದರೆ, ಈ ಬಗ್ಗೆ ಆರ್ಥಿಕ ಇಲಾಖೆ ಹಲವು ಮಾಹಿತಿಗಳನ್ನು ಕೇಳಿದೆ. ಜತೆಗೆ ಮುಖ್ಯಮಂತ್ರಿಗಳ ಜತೆಗೂ ಚರ್ಚೆ ನಡೆದಿದೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡು ಹೋಗಬೇಕಿದೆ. ಈ ಎಲ್ಲ ಕಾರಣಗಳಿಂದ ತುಸು ವಿಳಂಬವಾಗಿದೆ. ಆದರೆ, ಅಧಿಕಾರಿಗಳು ನೀತಿ-ನಿಯಮ ಪಾಲನೆ ಮಾಡಬೇಕಾಗುತ್ತದೆ’ ಎಂದು ಸೂಚ್ಯವಾಗಿ ಹೇಳಿದರು.

“ಲೀಸ್‌ನಲ್ಲಿ ವಿಳಂಬವಾಗಿದ್ದರೂ ಕ್ರಷಿಂಗ್‌ಗೆ ಅವಕಾಶ ಮಾಡಿಕೊಡಲಾಗಿದೆ. ಬಿಲ್‌ ಕೂಡ ಪಾವತಿಸಲಾಗುತ್ತಿದೆ. ಇದು ಸೇರಿದಂತೆ ಯಾವುದಕ್ಕೂ ಅಡತಡೆ ಉಂಟುಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.