ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪುನರಾರಂಭ
Team Udayavani, Oct 10, 2018, 6:00 AM IST
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿವಿಧ ಕೋರ್ಸ್ಗಳಿಗೆ ದಾಖಲಾಗಿರುವ ವಿದ್ಯಾರ್ಥಿ ಗಳಿಗೆ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ನೀಡಲು ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಕುಲಪತಿ ಪ್ರೊ| ಡಿ.ಶಿವಲಿಂಗಯ್ಯ ಹೇಳಿದರು. 3 ವರ್ಷಗಳ ಬಳಿಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪುನರಾರಂಭವಾಗಿದೆ. 17 ಕೋರ್ಸ್ಗಳಿಗೆ 8,539 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ನಿರೀಕ್ಷೆಯಷ್ಟು ಅರ್ಜಿಗಳು ಬಂದಿಲ್ಲ. ಅ. 20ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇರುವುದರಿಂದ ಸುಮಾರು 10 ಸಾವಿರ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದರು.
ಪ್ರಸಕ್ತ ಸಾಲಿನಲ್ಲಿ 17 ತಾಂತ್ರಿಕೇತರ ಕೋರ್ಸ್ಗಳ ಜತೆಗೆ 14 ಕೋರ್ಸ್ಗಳಿಗೂ ಯುಜಿಸಿ ಮಾನ್ಯತೆ ನೀಡಿದೆ. 17 ಕೋರ್ಸ್ಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಿದ್ದೇವೆ. ಉಳಿದ 14 ಕೋರ್ಸ್ಗಳಿಗೆ 2ನೇ ಹಂತದಲ್ಲಿ ಅರ್ಜಿ ಆಹ್ವಾನಿಸ ಲಿದ್ದೇವೆ. ಯುಜಿಸಿಯಿಂದ ಮಾನ್ಯತೆ ಪಡೆಯವ ಪ್ರಕ್ರಿಯೆಯಿಂದ ಪ್ರಸಕ್ತ ಸಾಲಿನಲ್ಲಿ ದಾಖಲಾತಿ ಪ್ರಕ್ರಿಯೆ ಮೂರು ತಿಂಗಳು ತಡವಾಗಿದೆ. ಎಂಬಿಎ ಹಾಗೂ ಬಿ.ಇಡಿ. ಕೋರ್ಸ್ಗೂ ಯುಜಿಸಿ ಮಾನ್ಯತೆ ನೀಡಿದೆ. 2019ರ ಜನವರಿಯಲ್ಲಿ ಇದಕ್ಕೆ ಪ್ರವೇಶ ಪರೀಕ್ಷೆ ನಡೆಸಲಿದ್ದೇವೆ. ಎಲ್ಎಲ್ಎಂ ಕೋರ್ಸ್ನ ಮಾನ್ಯತೆಗೂ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.
ಶೇ.50ರಷ್ಟು ವಿನಾಯಿತಿ
2013-14, 2014-15 ಹಾಗೂ 2015-16 ರಲ್ಲಿ ವಿವಿಯ ವಿವಿಧ ಕೋರ್ಸ್ಗಳಿಗೆ ಸೇರಿ ಪದವಿ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿ ಗಳಿಗೆ ಪದವಿ ಪ್ರಮಾಣ ಕೊಡಿಸುವ ಬಗ್ಗೆ ಯುಜಿಸಿ ಜತೆ ನಿರಂತರ ಮಾತುಕತೆ ನಡೆಸುತ್ತಿ ದ್ದೇವೆ. ಈ ಎಲ್ಲ ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಗಳಿಗೆ ಸೇರಿಕೊಳ್ಳಲು ಅವಕಾಶ ಇದೆ. ಅಂಥ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನೀಡಲಿದ್ದೇವೆ. ಹಾಗೆಯೇ ಮಹಿಳಾ ಅಭ್ಯರ್ಥಿಗಳಿಗೂ ಶೇ.50ರಷ್ಟು ಶುಲ್ಕ ವಿನಾಯಿತಿ ಇದೆ ಎಂದು ಕುಲಪತಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ