ಇಂಗ್ಲೆಂಡ್ ಪ್ರಯಾಣಿಕರಿಗೆ ರಾಜ್ಯ ಪ್ರವೇಶ ಇನ್ನೂ ಮುಕ್ತ !
Team Udayavani, Dec 29, 2020, 11:58 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: “ರೂಪಾಂತರ ವೈರಸ್’ ತೀವ್ರಗೊಂಡ ಹಿನ್ನೆಲೆಯಲ್ಲಿ ಇಂಗ್ಲೆಂಡ್ನಿಂದ ಬರುವ ಲೋಹದ ಹಕ್ಕಿಗಳ ಮೇಲೆ ಭಾರತ ನಿರ್ಬಂಧ ವಿಧಿಸಿದೆ. ಆದಾಗ್ಯೂ ಇಂಗ್ಲೆಂಡ್ನಿಂದ ಆಗಮಿಸುವ ಪ್ರಯಾಣಿಕರಿಗೆ ಪರೋಕ್ಷವಾಗಿ ರಾಜ್ಯದಲ್ಲಿ ಈಗಲೂ ಪ್ರವೇಶ ಮುಕ್ತವಾಗಿದೆ!
ಇಂಗ್ಲೆಂಡ್ನಿಂದ ನೇರವಾಗಿ ಅಥವಾ ಬೇರೆ ದೇಶಗಳ ಮೂಲಕ ಭಾರತಕ್ಕೆ ಬರುವ ವಿಮಾನಗಳ ಮೇಲೆ ಡಿ. 31ರವರೆಗೆ ನಿರ್ಬಂಧ ವಿಧಿಸಿದೆ. ಇದನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಿಸುವ ಸುಳಿವನ್ನೂ ಸರಕಾರ ನೀಡಿದೆ. ಆದರೆ, ನೆರೆಯ ಹತ್ತಾರು ರಾಷ್ಟ್ರಗಳು ಈಗಲೂ ಇಂಗ್ಲೆಂಡ್ ವಿಮಾನಗಳಿಗೆ ನಿರ್ಬಂಧ ಹೇರಿಲ್ಲ. ಇದರ ಲಾಭ ಪಡೆದು ಕಣ್ತಪ್ಪಿಸಿ ಕರ್ನಾಟಕಕ್ಕೆ ನುಸುಳಲು ಸಾಕಷ್ಟು ಅವಕಾಶಗಳಿವೆ.
ಉದಾಹರಣೆಗೆ ಬ್ರಿಟನ್ನಿಂದ ಅಮೆರಿಕಕ್ಕೆ ತೆರಳಿ, ಅಲ್ಲಿ ಮೂರ್ನಾಲ್ಕು ದಿನಗಳಿದ್ದು, ನಂತರ ಬೆಂಗಳೂರಿಗೆ ಯಾವುದೇ ನಿರ್ಬಂಧಗಳಿಲ್ಲದೆ ಆಗಮಿಸಬಹುದು. ಹೀಗೆ ಬಂದವರಲ್ಲಿ “ಬ್ರಿಟನ್ ರೂಪಾಂತರ ವೈರಸ್’ ಸೋಂಕು ಮನೆ ಮಾಡಿರುವ ಸಾಧ್ಯತೆ ಇದೆ. ಆದರೆ, ಅಂತಹವರು ಪರೀಕ್ಷೆಗೊಳಪಡುವುದೇ ಇಲ್ಲ. ನೇರವಾಗಿ ನಗರ ಪ್ರವೇಶಿಸುತ್ತಾರೆ. ಹಾಗಾಗಿ, ಇದು ಮತ್ತೂಂದು ಹಂತದ ಸೋಂಕಿನ ತೀವ್ರತೆಗೆ ಕಾರಣವಾಗುವ ಸಾಧ್ಯತೆ ಇದೆ.
ಇಂಗ್ಲೆಂಡ್ ಸೇರಿದಂತೆ ಎರಡು-ಮೂರು ರಾಷ್ಟ್ರಗಳಲ್ಲಿ ರೂಪಾಂತರ ಕೊರೊನಾ ವೈರಸ್ ಹಾವಳಿ ಹೆಚ್ಚುತ್ತಿದೆ. ಈ ಮಧ್ಯೆ ಮಂಗಳವಾರ ಆರು ರೂಪಾಂತರ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದರಿಂದ ನಿಯಮಗಳು ಮತ್ತಷ್ಟು ಬಿಗಿಗೊಳ್ಳುವ ಸಾಧ್ಯತೆ ಇದ್ದು, ಇದು ಅನಿವಾಸಿ ಭಾರತೀಯರಿಗೆ ಇದು ತುಸು ನಿರಾಸೆ ಉಂಟುಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ