ಇಪ್ಪತ್ತು ದಿನಗಳ ನಂತರ ರಾಜ್ಯ ಪ್ರವಾಸ : ಬಿ.ಎಸ್.ಯಡಿಯೂರಪ್ಪ
Team Udayavani, Aug 24, 2021, 8:37 AM IST
ಬೆಂಗಳೂರು: ಇನ್ನೂ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಿ ಜಿಲ್ಲಾವಾರು ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಐದು ದಿನಗಳ ಮಾಲ್ಡೀವ್ಸ್ ಪ್ರವಾಸ ಮುಗಿಸಿ ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ಜಿಲ್ಲೆಗೆ ಒಂದು ದಿನ ಹೋಗುತ್ತೇನೆ. ಬಹಳ ವರ್ಷಗಳ ಬಳಿಕ ನಾನು ವಿದೇಶ ಪ್ರವಾಸ ಹೋಗಿದ್ದೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಹೋಗಿದ್ದೇ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ಎಲ್ಲರೂ ನೋಡುವಂತದ್ದು, ನಾನು ಕೂಡ ಖುಷಿ ಪಟ್ಟೆ ಎಂದು ಹೇಳಿದರು.
ಇದನ್ನೂ ಓದಿ:ಕೆಪಿಸಿಸಿ ಪಟ್ಟಿಗೆ ಸಿಗದ ಮುಕ್ತಿ: ಸಿದ್ದು-ಡಿಕೆಶಿ ಪಟ್ಟು-ಹೈಕಮಾಂಡ್ ಗೂ ಇಕ್ಕಟ್ಟು