JDS Party ಸಂಘಟನೆಗಾಗಿ ಅ.15ರ ನಂತರ ನಾಯಕರ ರಾಜ್ಯ ಪ್ರವಾಸ: ದೇವೇಗೌಡರ ತಾಕೀತು
Team Udayavani, Aug 7, 2023, 4:48 PM IST
ಬೆಂಗಳೂರು: ಇದೇ ಆಗಸ್ಟ್ 15ರ ನಂತರ ಪಕ್ಷ ಸಂಘಟನೆಗಾಗಿ ಜಾತ್ಯತೀತ ಜನತಾದಳ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.
ಮುಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಚರ್ಚೆಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಎದೆಗುಂದದೆ ಪಕ್ಷದ ಸಂಘಟನೆ ಕಡೆ ಹೆಚ್ಚು ಗಮನ ನೀಡಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ತಾಕೀತು ಮಾಡಿದ್ದು, ಅವರ ಆದೇಶದಂತೆ ಪಕ್ಷ ಸಂಘಟನೆಗೆ ಬಹಳಷ್ಟು ಒತ್ತು ಕೊಟ್ಟು ಕೆಲಸ ಮಾಡಲು ನಿರ್ಧರಿಸಲಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಜಿಟಿ ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ: ಮಾಜಿ ಸಚಿವರಾದ ಜಿಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆಗೆ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಮಾಜಿ ಶಾಸಕರಾದ ವೈ ಎಸ್ ವಿ ದತ್ತಾ ಅವರು ಈ ಕಮಿಟಿಗೆ ಸಂಚಾಲಕರಾಗಿರುತ್ತಾರೆ. ಒಟ್ಟು 20 ಸದಸ್ಯರು ಕಮಿಟಿಯಲ್ಲಿ ಇರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
15ರ ನಂತರ ಸಂಘಟನೆಗೆ ಪ್ರವಾಸ: ಪಕ್ಷದ ಸಂಘಟನೆ ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಆಗಸ್ಟ್ 15ರ ನಂತರ ರಾಜ್ಯಾಧ್ಯಂತ ಪಕ್ಷದ ಪ್ರಮುಖ ಮುಖಂಡರು ಪ್ರವಾಸ ಮಾಡಲಿದ್ದಾರೆ. ನಾನೂ ಸೇರಿ ಪಕ್ಷದ ಬಹುತೇಕ ಹಿರಿಯ ನಾಯಕರು ಪ್ರವಾಸ ಕೈಗೊಳ್ಳುವರು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ನಮ್ಮ ಹೋರಾಟ ಸಂಘಟಿತವಾಗಿರಬೇಕು ಹಾಗೂ ವಿಷಯಾಧಾರಿತ ಆಗಿರಬೇಕು. ಜನಪರವಾಗಿ ಇರಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ. ಅದರಂತೆ ನಾವು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಅಲ್ಲದೆ, ಪಕ್ಷದ ವಿವಿಧ ವಿಭಾಗಗಳಿಗೆ ಮುಖ್ಯಸ್ಥರನ್ನು ನೇಮಕ ಮಾಡುವ ಬಗ್ಗೆಯೂ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.
ಸಭೆಯಲ್ಲಿ ಹಿರಿಯ ನಾಯಕರಾದ ಬಂಡೆಪ್ಪ ಕಾಶೆಂಪೂರ್, ಎಚ್.ಕೆ ಕುಮಾರಸ್ವಾಮಿ, ಅಲ್ಕೊಡ್ ಹನುಮಂತಪ್ಪ, ಸುರೇಶಗೌಡ, ಅನ್ನದಾನಿ, ನಿಸರ್ಗ ನಾರಾಯಣಸ್ವಾಮಿ, ಕೆ.ಎನ್.ತಿಪ್ಪೇಸ್ವಾಮಿ, ನೆಮಿರಾಜ್ ನಾಯ್ಕ, ವೈಎಸ್ ವಿ ದತ್ತಾ, ಲಿಂಗೇಶ್, ಅಪ್ಪಾಜಿ ಗೌಡ, ವೀರಭದ್ರಯ್ಯ ಹಾಲರವಿ, ಮಾಗಡಿ ಮಂಜುನಾಥ್, ಸೂರಜ್ ನಾಯಕ್ ಸೋನಿ, ತಿಮ್ಮರಾಯಪ್ಪ, ದೊಡ್ಡನಗೌಡ ಪಾಟೀಲ್, ಅಶ್ವಿನ್ ಕುಮಾರ್, ಚೌಡರೆಡ್ಡಿ, ಶ್ರೀಕಂಠೇಗೌಡ ಸೇರಿದಂತೆ ಇನ್ನೂ ಅನೇಕ ನಾಯಕರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್