ನಟ ಸುದೀಪ್ ವಿರುದ್ಧದ ವಿಚಾರಣೆಗೆ ತಡೆ
Team Udayavani, Mar 28, 2019, 7:03 AM IST
ಬೆಂಗಳೂರು: ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರನಟ ಸುದೀಪ್ ವಿರುದ್ಧ ಚಿಕ್ಕಮಗಳೂರಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ನಟ ಸುದೀಪ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧೀನ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ, ದೂರುದಾರ ದೀಪಕ್ ಮಯೂರ್ ಪಟೇಲ್ ಹಾಗೂ ಚಿಕ್ಕಮಗಳೂರು ತಾಲೂಕು ಮಲ್ಲಂದೂರು ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಏ.22ಕ್ಕೆ ಮುಂದೂಡಿತು.
ಸುದೀಪ್ ಅವರು ತಮ್ಮ ಕಿಚ್ಚ ಪ್ರೊಡಕ್ಷನ್ನ “ವಾರಸಾªರ’ ಧಾರಾವಾಹಿ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರು ತಾಲೂಕು ಬೈಗೂರಿನ ದೀಪಕ್ ಮಯೂರ್ ಅವರ ಕಾಫಿತೋಟ ಮತ್ತು ಪುರಾತನ ಮನೆಯನ್ನು ಬಳಸಿಕೊಂಡಿದ್ದರು.ಆದರೆ, ಚಿತ್ರಿಕರಣದ ವೇಳೆ ಸುದೀಪ್, ಸ್ಥಳದ ಬಾಡಿಗೆ ಪಾವತಿಸಿಲ್ಲ ಮತ್ತು ಸ್ಥಿರಾಸ್ತಿಗೆ ನಷ್ಟ ಉಂಟು ಮಾಡಿ¨ªಾರೆ ಎಂಬುದು ದೂರುದಾರ ದೀಪಕ್ ಮಯೂರ್ ಅವರ ಆರೋಪವಾಗಿದೆ. ಈ ಕುರಿತು ಚಿಕ್ಕಮಗಳೂರು 2ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅದಕ್ಕೆ ಈಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು