“ಸ್ಟೆಂಟ್‌’ ಹೆಚ್ಚಿನ ದರಕೆR ಮಾರಿದ್ರೆ ಲೈಸೆನ್ಸ್‌ ರದ್ದು


Team Udayavani, Feb 18, 2017, 6:42 AM IST

17-STATE-2.jpg

ಬೆಂಗಳೂರು: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಅಳವಡಿಸಲಾಗುವ “ಸ್ಟೆಂಟ್‌’ಗಳನ್ನು ದುಬಾರಿ ಬೆಲೆಗೆ
ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಮಾರಾಟ ಪರವಾನಗಿ ರದ್ದುಪಡಿಸಲಾಗುವುದು ಎಂದು ಕೇಂದ್ರ
ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಇಂಡಿಯನ್‌ ಇನ್ಸಿಟಿಟ್ಯೂಟ್‌ ಆಫ್ ವರ್ಲ್ಡ್ ಕಲ್ಚರ್‌ನ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಟೆಂಟ್‌ಗಳನ್ನು ದುಬಾರಿ ದರಕ್ಕೆ ಮಾರಾಟ ಮಾಡಿರುವುದು ಪತ್ತೆಯಾದರೆ ಹೆಚ್ಚುವರಿಯಾಗಿ ಪಡೆದ ಮೊತ್ತದ
ಜತೆಗೆ ಶೇ.15ರಷ್ಟು ದಂಡ ವಸೂಲಿ ಮಾಡಲಾಗುವುದು ಎಂದು ಹೇಳಿದರು. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಬಡ ಹಾಗೂ ಮಧ್ಯಮ  ವರ್ಗದ ಜನರನ್ನು ದೃಷ್ಠಿಯಲ್ಲಿಟ್ಟುಕೊಂಡು ಫೆ.13ರಂದು “ಸ್ಟೆಂಟ್‌’ಗಳ ದರಗಳನ್ನು ಶೇ.85ರಷ್ಟು ಕಡಿಮೆ ಮಾಡುವ ತೀರ್ಮಾನವನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಆರೋಗ್ಯ ಭದ್ರತೆ ಒದಗಿಸಲು ಬದ್ಧವಾಗಿರುವ ಕೇಂದ್ರ ಸರ್ಕಾರ, ತನ್ನ ತೀರ್ಮಾನದ ಅನುಷ್ಠಾನದಲ್ಲೂ ಅಷ್ಟೇ ಕಾಳಜಿ ಹೊಂದಿದೆ. ಆದ್ದರಿಂದ ಬಡವರಿಗೆ ಅನುಕೂಲವಾಗಲಿ ಎಂದು ಸ್ಟೆಂಟ್‌ಗಳ ದರಗಳನ್ನು ಇಳಿಕೆ ಮಾಡಲಾಗಿದೆ ಎಂದು ಹೇಳಿದರು. 

“ರಾಷ್ಟ್ರೀಯ ಅತ್ಯಾವಶ್ಯಕ ಔಷಗಳ ಸೂಚಿ’ಯಲ್ಲಿ ಇರುವ ಔಷಧಿಗಳ ಬೆಲೆ ನಿಗದಿಪಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇರುತ್ತದೆ. ಆದರೆ, ಸ್ಟೆಂಟ್‌ಗಳು ಇಲ್ಲಿವರೆಗೆ ಈ ಸೂಚಿಯಲ್ಲಿರಲಿಲ್ಲ. ಅದಕ್ಕಾಗಿ ತಯಾರಿಕಾ ವೆಚ್ಚ ಕಡಿಮೆ ಇದ್ದರೂ, ಅತ್ಯಂತ ದುಬಾರಿ ಬೆಲೆಗೆ ಅವುಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈಗ ಅದನ್ನು ರಾಷ್ಟ್ರೀಯ ಆತ್ಯಾವಶ್ಯಕ ಔಷಧಿಗಳ ಸೂಚಿಯಲ್ಲಿ ಸೇರಿಸಲಾಗಿದೆ. ಅದರಂತೆ ಸಾಮಾನ್ಯ ಸ್ಟೆಂಟ್‌ ಗಳ ಬೆಲೆ 7,260 ರೂ. ಹಾಗೂ ವಿಶೇಷ ಸ್ಟೆಂಟ್‌ಗಳ ಬೆಲೆಯನ್ನು 29,600 ರೂ.
ನಿಗದಿಪಡಿಸಲಾಗಿದೆ. ದೇಶದಲ್ಲಿ ಸ್ಟೆಂಟ್‌ಗಳನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದ ದರಗಳಲ್ಲೇ ಮಾರಾಟ ಮಾಡಬೇಕು. ಸ್ಟೆಂಟ್‌ಗಳ ಬೆಲೆ ಕಡಿಮೆ ಮಾಡಿರುವುದರಿಂದ ಅಂದಾಜು 5 ಸಾವಿರ ಕೋಟಿ ರೂ. ಉಳಿತಾಯ ಆಗಲಿದೆ ಎಂದು ಅನಂತಕುಮಾರ್‌ ತಿಳಿಸಿದರು.

ಕೇಂದ್ರ ಆರೋಗ್ಯ ಸಚಿವಾಲಯದ 2015ರ ವರದಿ ಪ್ರಕಾರ ದೇಶದಲ್ಲಿ 6.19 ಕೋಟಿ ಜನರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕಳೆದ ವರ್ಷ 4 ಲಕ್ಷ ಸ್ಟೆಂಟ್‌ ಅಳವಡಿಸಲಾಗಿತ್ತು. ಈ ವರ್ಷ ಅದು 5 ಲಕ್ಷ ಆಗುವ ಸಾಧ್ಯತೆಯಿದೆ. ಸ್ಟೆಂಟ್‌ಗಳ ಕೃತಕ
ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಗಟ್ಟಲು ಸ್ಟೆಂಟ್‌ ತಯಾರಕರು ಕಳೆದ 3 ವರ್ಷದಲ್ಲಿ ಪ್ರತಿ ವರ್ಷ ಎಷ್ಟು ಸಂಖ್ಯೆಯಲ್ಲಿ ಸ್ಟೆಂಟ್‌ಗಳನ್ನು ತಯಾರು ಮಾಡಿದ್ದರು, ಮುಂದಿನ ಒಂದು ವರ್ಷ ಅಷ್ಟೇ ಪ್ರಮಾಣದ ಸ್ಟೆಂಟ್‌ಗಳನ್ನು ತಯಾರು ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.  

ಶೇ.15ರಷ್ಟು ದಂಡ ವಸೂಲಿ ಒಂದೊಮ್ಮೆ ಮಾರಾಟಗಾರರು ದುಬಾರಿ ಬೆಲೆಗೆ ಮಾರಾಟ ಮಾಡಿದರೆ, ಆ ದುಬಾರಿ ಬೆಲೆ ಮೇಲೆ ಶೇ.15ರಷ್ಟು ದಂಡ ವಿಧಿಸಿ ಹಣ ವಸೂಲಿ ಮಾಡಲಾಗುವುದು. ಜತೆಗೆ ಅಂತಹ ಮಾರಾಟಗಾರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಮಾರಾಟ ಪರವಾನಿಗೆ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ತಿಳಿಸಿದರು. “ಸ್ಟೆಂಟ್‌’ಗಳ ದರ ಭಾರಿ ಪ್ರಮಾಣದಲ್ಲಿ ಇಳಿಕೆ ಮಾಡಿದ ಕೇಂದ್ರ ಸರ್ಕಾರದ ತೀರ್ಮಾನ ಐತಿಹಾಸಿಕ. ಈ ತೀರ್ಮಾನದಿಂದ ದೇಶದ 6.19 ಕೋಟಿ ಜನರಿಗೆ ಅನುಕೂಲ ಆಗಲಿದೆ ಎಂದರು. 

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.