2ನೇ ಹಂತ: 41 ನಾಮಪತ್ರ ಸಲ್ಲಿಕೆ
Team Udayavani, Apr 3, 2019, 3:00 AM IST
ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ 34 ಅಭ್ಯರ್ಥಿಗಳು 41 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇಲ್ಲಿ ತನಕ ಒಟ್ಟು 99 ಅಭ್ಯರ್ಥಿಗಳು 139 ನಾಮಪತ್ರಗಳನ್ನು ಸಲ್ಲಿಸಿದಂತಾಗಿದೆ.
ಬೀದರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ, ಬಳ್ಳಾರಿಯಿಂದ ವಿ.ಎಸ್. ಉಗ್ರಪ್ಪ, ವಿಜಯಪುರದಿಂದ ಜೆಡಿಎಸ್ ಅಭ್ಯರ್ಥಿ ಡಾ. ಸುನೀತಾ ದೇವಾನಂದ ಚೌಹಾಣ್ ಮಂಗಳವಾರ ನಾಮಪತ್ರ ಸಲ್ಲಿಸಿದ ಪ್ರಮುಖರು.