ಎಚ್ಚರ!…ಸಾರ್ವಜನಿಕ ಸೆಂಟರ್‌ನಲ್ಲಿ ಮೊಬೈಲ್‌ ಚಾರ್ಜ್ ಮಾಡುವುದು ಎಷ್ಟು ಸುರಕ್ಷಿತ?


Team Udayavani, Nov 30, 2020, 11:05 AM IST

ಎಚ್ಚರ!…ಸಾರ್ವಜನಿಕ ಸೆಂಟರ್‌ನಲ್ಲಿ ಮೊಬೈಲ್‌ ಚಾರ್ಜ್ ಮಾಡುವ ಮುನ್ನ ಇರಲಿ ಎಚ್ಚರ

ಬೆಂಗಳೂರು: ಸಾರ್ವಜನಿಕರೇ ಎಚ್ಚರ… ಸಾರ್ವಜನಿಕ ಸ್ಥಳಗಳಲ್ಲಿರುವ ಯುಎಸ್‌ಬಿ ಪವರ್‌ ಸ್ಟೇಷನ್‌ ಹಾಗೂ ಚಾರ್ಜಿಂಗ್‌ ಸೆಂಟರ್‌ಗಳಲ್ಲಿ ಮೊಬೈಲ್‌ ಚಾರ್ಜ್‌ ಮಾಡಿಕೊಳ್ಳುವ ಮುನ್ನ ಎಚ್ಚರಿಕೆ ವಹಿಸಿ! ಅಲ್ಲಿಯೇ ಅಳವಡಿಸಿರುವ ಕೇಬಲ್‌ ಮೂಲಕ ಜಾರ್ಜಿಂಗ್ ‌ಮಾಡಿಕೊಳ್ಳುವುದರಿಂದ ತಮ್ಮ ಮೊಬೈಲ್‌

ಡೇಟಾ ಕಳವು ಅಥವಾ ನಕಲು ಮಾಡುವ ಸಾಧ್ಯತೆಯಿದೆ! ಜತೆಗೆ “ಮಾಲ್ವೇರ್‌’ ಎಂಬ ಆ್ಯಪ್‌ ಮೂಲಕ ಆ್ಯಂಡ್ರ್ಯಾಯ್ಡ ಮೊಬೈಲ್‌ ಹ್ಯಾಕ್‌ ಮಾಡುವ ಸೈಬರ್‌ ವಂಚಕರು ಸಕ್ರಿಯವಾಗಿದ್ದಾರೆ.

ಬಸ್‌, ರೈಲು, ವಿಮಾನ ನಿಲ್ದಾಣ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾನ್ಯವಾಗಿ ಮೊಬೈಲ್‌ ಚಾರ್ಜಿಂಗ್‌ ಪಾಯಿಂಟ್‌ ಅಳವಡಿಸಿರುತ್ತಾರೆ. ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ ಜಾರ್ಜಿಂಗ್‌ ಮಾಡಿಕೊಂಡಾಗ ತಮ್ಮ ಮೊಬೈಲ್‌ನಲ್ಲಿರುವ ಡೇಟಾ ಸಂಪೂರ್ಣವಾಗಿ ಆ ಕೇಬಲ್‌ನಲ್ಲಿ ಸಂಗ್ರಹವಾಗುತ್ತದೆ.

ಇದನ್ನೂ ಓದಿ:ಗ್ರೇಟರ್‌ ಹೈದರಾಬಾದ್‌ ಪಾಲಿಕೆ ಚುನಾವಣೆ : “ಜೋ ಜೀತಾ ವಹೀ ಸಿಕಂದರ್‌’

ನಂತರ ವಂಚಕರು ಆ ಕೇಬಲ್‌ ಕೊಂಡೊಯ್ದು ಅವರ ಕಂಪ್ಯೂಟರ್‌ ಅಥವಾ ಮೊಬೈಲ್‌ಗ ಸಂಪರ್ಕಿಸಿಕೊಂಡು ಕಳವು ಡೇಟಾಗಳ ಬಳಸಿ ವಿವಿಧ ರೀತಿಯಲ್ಲಿ ವಂಚನೆ ಮಾಡಬಹುದು. ಇಲ್ಲವಾದಲ್ಲಿ ಡೇಟಾ ಮೂಲಕ ಮೊಬೈಲ್‌ ಮಾಲೀಕನಿಗೆ ಬ್ಲ್ಯಾಕ್‌ ಮೇಲ್‌ ಮಾಡಬಹುದು ಎನ್ನುತ್ತಾರೆ ಸೈಬರ್‌ ತಜ್ಞರು.

ಅಂತಾರಾಷ್ಟ್ರೀಯ ಮಟ್ಟದ ದಂಧೆ: ಕಳೆದ ಹತ್ತಾರು ವರ್ಷಗಳಿಂದ ಸಾರ್ವಜನಿಕರ ಡೇಟಾ ಮಾರಾಟ ದಂಧೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ನಡೆಯುತ್ತಿದೆ. ಹ್ಯಾಕರ್ಸ್‌ಗಳು ಹಾಗೂ ನಿರ್ದಿಷ್ಟ ಸಂಸ್ಥೆಗಳು ಪ್ರತಿ ದೇಶದಲ್ಲೂ ಆ್ಯಪ್‌, ಸಾಫ್ಟ್ವೇರ್‌, ಇತರೆ ಮಾರ್ಗಗಳ ಮೂಲಕ ಸಾರ್ವಜನಿಕರ ಡೇಟಾ ಸಂಗ್ರಹಿಸುತ್ತವೆ. ಅವುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಮಾಡಿ ಕೋಟ್ಯಂತರ ರೂ. ವ್ಯವಹಾರ ನಡೆಸುತ್ತಿದ್ದಾರೆ.

ಇತ್ತೀಚೆಗೆ ಬೆಂಗಳೂರು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಕೂಡ ಸರ್ಕಾರದ ವೆಬ್‌ಸೈಟ್‌, ಆ್ಯಪ್‌ ಹ್ಯಾಕ್‌ ಮಾಡಿದ್ದ. ಅದರಿಂದಲೇ ಕೋಟ್ಯಂತರ ರೂ. ದಂಧೆ ನಡೆಸುತ್ತಿದ್ದ ಎಂಬುದು ಬೆಳಕಿಗೆ ಬಂದಿತ್ತು ಎಂದು ಸೈಬರ್‌ ಪೊಲೀಸರು ಮಾಹಿತಿ ನೀಡಿದರು.

ಮಾಲ್ವೇರ್‌ ಮೂಲಕ ಡೇಟಾ ಕಳವು: ವಿವಿಧ ಆಮಿಷವೊಡ್ಡಿ ಸಾರ್ವಜನಿಕರ ಡೇಟಾ ಹಾಗೂ ಹಣ ಲೂಟಿ ಮಾಡುತ್ತಿದ್ದ ಸೈಬರ್‌ ಖದೀಮರು, ಇದೀಗ, ಮಾಲ್ವೇರ್‌ ಮೂಲಕ ಆ್ಯಂಡ್ರಾಯ್ಡ ಮೊಬೈಲ್‌ ಹ್ಯಾಕ್‌ ಮಾಡಿ ಖಾತೆಗಳಿಗೆ ಕನ್ನ ಹಾಕುತ್ತಿದ್ದಾರೆ. ಸೈಬರ್‌ ತಜ್ಞರು, ಪೊಲೀಸರ ಪ್ರಕಾರ ಸುಮಾರು 250 ಬ್ಯಾಂಕಿಗ್‌ ಆ್ಯಪ್‌ ಗುರಿಯಾಗಿಸಿ ವಂಚನೆ ಮಾಡಲಾಗುತ್ತಿದೆ. ಒಮ್ಮೆ ಮಾಲ್ವೇರ್‌ ಮೊಬೈಲ್‌ ಅಥವಾ ಲ್ಯಾಪ್‌ ಟಾಪ್‌, ಕಂಪ್ಯೂಟರ್‌ನಲ್ಲಿ ಇನ್‌ಸ್ಟಾಲ್‌ ಆಗಿಬಿಟ್ಟರೆ ಮೊಬೈಲ್‌ಗೆ ಬರುವ ಓಟಿಪಿ (ಒನ್‌ ಟೈಮ್‌ ಪಾಸ್‌ವರ್ಡ್‌) ಸಂದೇಶಗಳು ಸೇರಿ ಎಲ್ಲಾ ಗೌಪ್ಯ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಸೈಬರ್‌ ವಂಚಕರ ಕೈ ಸೇರಲಿದೆ.

ಇದನ್ನೂ ಓದಿ: ವಾಟ್ಸಾಪ್ ತಂದಿದೆ ಹೊಸ ಫೀಚರ್: ಇನ್ನು ಮುಂದೆ ಚಾಟಿಂಗ್ ಮತ್ತಷ್ಟು ಸುಲಭ !

ಫ್ರೀ ವೈ-ಫೈ ಕಡೆಯೂ ಎಚ್ಚರ

ಇತ್ತೀಚೆಗೆಕೆಲವೊಂದು ಪಾರ್ಟಿ, ಹೋಟೆಲ್‌ ಹಾಗೂ ಪ್ರವಾಸಿ ತಾಣಗಳಲ್ಲಿ ಫ್ರೀ ವೈ-ಫೈ ನೀಡುತ್ತೇವೆ ಎಂದು ಜಾಹೀರಾತು ನೀಡುತ್ತಾರೆ. ಇಂತಹಕಡೆ ಮೊಬೈಲ್‌ ಬಳಸುವಾಗ ಎಚ್ಚರಿಕೆ ಇರಬೇಕು. ವ್ಯಾಟ್ಸ್‌ಆ್ಯಪ್‌ ಸಂದೇಶ, ಫೇಸ್‌ಬುಕ್‌, ಬ್ರೌಸಿಂಗ್‌ (ಜಾಹೀರಾತುಗಳ ಮೇಲೆ ಕ್ಲಿಕ್‌ ಮಾಡಬಾರದು) ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ನೆಟ್‌ಬ್ಯಾಕಿಂಗ್‌, ಹಣದ ವ್ಯವಹಾರ ನಡೆಸುವಾಗ ಜಾಗೃತೆ ವಹಿಸಬೇಕು. ವೈ-ಫೈ ಮೂಲಕವೇ ತಮ್ಮ ಬ್ಯಾಕಿಂಗ್‌ ಡೇಟಾಕಳವು ಮಾಡುತ್ತಾರೆ. ಹತ್ತಾರು ದಿನಗಳ ಬಳಿಕಡೇಟಾ ಮೂಲಕವೇ ಖಾತೆಯಿಂದ ಹಣ ಲೂಟಿ ಮಾಡುತ್ತಾರೆ. ಇಲ್ಲವಾದಲ್ಲಿ ನಿಮ್ಮ ವೈಯಕ್ತಿಕ ವಿವರ ಸಂಗ್ರಹಿಸಿಕೊಳ್ಳುತ್ತಾರೆ.

ಹೇಗೆ ಇನ್‌ಸ್ಟಾಲ್‌ ಆಗುತ್ತೆ?

ಮೊದಲಿಗೆ ಇಂಟರ್ನೆಟ್‌ ಬಳಕೆ ಮಾಡುವ ವ್ಯಕ್ತಿಗಳ ಆಸಕ್ತಿದಾಯಕ ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ. ಬಳಿಕ ಅಂತಹ ಜಾಹೀರಾತುಗಳನ್ನು ಇ-ಮೇಲ್‌, ಬ್ರೌಸರ್‌ ಗಳಲ್ಲಿ ಪ್ರಕಟಿಸುತ್ತಾರೆ. ಸಂದೇಶ, ಫೋಟೋ, ಇ-ಮೇಲ್‌ ಮೂಲಕವು ವಿವಿಧ ಆಮಿಷಗಳನ್ನೊಡ್ಡಿ ಲಿಂಕ್‌ ರೂಪದಲ್ಲಿ ಮಾಲ್ವೇರ್‌ ರವಾನಿಸಲಾಗುತ್ತದೆ. ಅಪರಿಚಿತ ಸಂದೇಶಗಳ ಕುತೂಹಲ ಹೊಂದಿರುವ ವ್ಯಕ್ತಿಗಳು ಅದರ ಲಿಂಕ್‌ ಒತ್ತಿದ ಕೂಡಲೇ ಮಾಲ್ವೇರ್‌ ಇನ್‌ಸ್ಟಾಲ್‌ ಆಗುತ್ತದೆ. ಅದು ಮೊಬೈಲ್‌ ಬಳಕೆದಾರರಿಗೂ ಮಾಹಿತಿ ಇರಲ್ಲ.

ಪ್ರಮುಖವಾಗಿ ಮೊಬೈಲ್‌ ಬ್ಯಾಂಕಿಂಗ್‌ ಆ್ಯಪ್‌ಗ್ಳನ್ನೇ ಗುರಿಯಾಗಿಸಿ ಅಕ್ರಮ ಎಸಗುತ್ತಿದ್ದಾರೆ. ಒಮ್ಮೆ ಮಾಲ್ವೇರ್‌ ಇನ್‌ಸ್ಟಾಲ್‌ ಆಗುತ್ತಿದ್ದಂತೆ ಲೋಕೇಷನ್‌, ಸಂದೇಶ, ಮೊಬೈಲ್‌ನಲ್ಲಿರುವ ಆ್ಯಪ್‌ ವಿವರ, ದೃಢೀಕೃತ ಸಂಖ್ಯೆ (ಪಾಸ್‌ವರ್ಡ್‌ ಬದಲಾಯಿಸಿದಾಗ ಬರುವ ಅಂಥೆಂಟಿಕೇಷನ್‌ ನಂಬರ್‌), ಮೊಬೈಲ್‌ ಲಾಕ್‌, ಅಲ್ಲದೆ, ಕೆಲವೊಂದು ಸಂದರ್ಭದಲ್ಲಿ ಕೀಬೋರ್ಡ್‌ ಅನ್ನು ಅನಾಮಿಕ ವ್ಯಕ್ತಿ ಬಳಸುತ್ತಿರುತ್ತಾನೆ ಎಂದು ಸೈಬರ್‌ ಪೊಲೀಸರು ಮಾಹಿತಿ ನೀಡಿದರು.

ಸೈಬರ್‌ ಪೊಲೀಸರ ತಜ್ಞರ ಸಲಹೆ

1 ಅನಾಮಿಕ ಸಂದೇಶಗಳ ಲಿಂಕ್‌ ಕ್ಲಿಕ್‌ ಮಾಡಬೇಡಿ

2 ಪದೇ ಪದೆಬರುವ ಆ್ಯಂಡ್ರಾಯ್ಡ ಸಾಫ್ಟ್ವೇರ್‌ ಅಪ್‌ಡೇಟ್‌ಲಿಂಕ್‌ ಒತ್ತಬೇಡಿ

3 ಮೊಬೈಲ್‌ನಲ್ಲಿರುವ ಸೆಟ್ಟಿಂಗ್‌ ಆ್ಯಪ್‌ಗೆ ಹೋಗಿ ಅಪ್‌ಡೇಟ್‌ ಕೊಡಬೇಕು.

4 ಗೂಗಲ್‌ ಪ್ಲೇ ಸ್ಟೋರ್‌ ಹೊರತು ಪಡಿಸಿಬೇರೆ ಬೇರೆ ವೆಬ್‌ಸೈಟ್‌ ಮೂಲಕ ಆ್ಯಪ್‌ ಡೌನ್‌ ಲೋಡ್‌ ಮಾಡಬೇಡಿ.

5 ಅಪರಿಚಿತ ನಂಬರ್‌ ಹಾಗೂಇ-ಮೇಲ್‌ ಗಳಲ್ಲಿರುವ ಬರುವ ಸಂದೇಶ, ಫೋಟೋಗಳ ಮೇಲೆ ಕ್ಲಿಕ್‌ ಮಾಡಬೇಡಿ.

6 ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್‌ ಜಾರ್ಜಿಂಗ್‌ ಮಾಡುವಾಗ ಎಚ್ಚರಿಕೆ ವಹಿಸಿ

 

ಸಾರ್ವಜನಿಕ ಸ್ಥಳಗಳಲ್ಲಿರುವ ಮೊಬೈಲ್‌ ಚಾರ್ಜಿಂಗ್‌ ಪಾಯಿಂಟ್‌, ಯುಎಸ್‌ಬಿ ಕೇಬಲ್‌ ಬಳಸಿ ಮೊಬೈಲ್‌ ಚಾರ್ಜಿಂಗ್‌ ಮಾಡುವಾಗ ಎಚ್ಚರಿಕೆ ವಹಿಸಿ. ತಮ್ಮ ಸ್ವಂತ ಚಾರ್ಜಿಂಗ್‌ ವ್ಯವಸ್ಥೆಯಲ್ಲೇ ಮೊಬೈಲ್‌ ಚಾರ್ಜಿಂಗ್‌ ಮಾಡಿಕೊಳ್ಳಿ. ಫ್ರೀ ವೈ-ಫೈ ನಲ್ಲಿ ಇಂಟರ್ನೆಟ್‌ ಬ್ಯಾಂಕಿಂಗ್‌ ಹಾಗೂ ವೈಯಕ್ತಿಕ ವಿಚಾರ ಚರ್ಚೆ ಮಾಡಬೇಡಿ. ಆಮಿಷವೊಡ್ಡುವ ಜಾಹೀರಾತುಗಳ ಲಿಂಕ್‌ ಒತ್ತಬೇಡಿ.

  • ಬಿ.ಎನ್‌.ಫ‌ಣಿಂಧರ್‌, ವಿಧಿ ವಿಜ್ಞಾನ ತಜ್ಞರು, ಐಟಿ ವಕೀಲರು

ಮೋಹನ್ ಭದ್ರಾವತಿ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.