ಬೈನಾದಲ್ಲಿ ಕನ್ನಡಿಗರ ತೆರವು ನಿಲ್ಲಿಸಿ: ಪಾರೀಕರ್ಗೆ ಶೆಟ್ಟರ್ ಪತ್ರ
Team Udayavani, Oct 1, 2017, 7:05 AM IST
ಬೆಂಗಳೂರು: ಗೋವಾದ ಬೈನಾ ಬೀಚ್ನಲ್ಲಿ ಕನ್ನಡಿಗರನ್ನು ತೆರವುಗೊಳಿಸದೆ ಅವರ ಹಿತರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಗೋವಾ ಸಿಎಂ ಮನೋಹರ್ ಪಾರೀಕರ್ಗೆ ಪತ್ರ ಬರೆದಿದ್ದಾರೆ.
ಗೋವಾದ ಬೈನಾ ಬೀಚ್ನಲ್ಲಿ ನಾಲ್ಕು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ಕನ್ನಡಿಗರು ನೆಲೆಸಿದ್ದು, ಅವರಿಗೆ ಸೇರಿದ 55 ಮನೆಗಳನ್ನು ತೆರವುಗೊಳಿಸುವಂತೆ ಸ್ಥಳೀಯ ಆಡಳಿತ ನೊಟೀಸ್ ಜಾರಿ ಮಾಡಿದೆ. ಇದರಿಂದ ಕನ್ನಡಿಗರು ಆತಂಕಕ್ಕೆ ಸಿಲುಕಿದ್ದು, ಅವರ ಹಿತರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕನ್ನಡಿಗರು ವಾಸ್ತವ್ಯವಿರುವ ವಿವಾ ದಿತ ಭೂಮಿ ಈ ಹಿಂದೆ ಚರ್ಚ್ ಒಂದಕ್ಕೆ ಸೇರಿದ್ದಾಗಿದ್ದು, ಅದನ್ನು ಖಾಸಗಿ ನಿರ್ಮಾಣ ಸಂಸ್ಥೆಗೆ ಮಾರಾಟ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಖಾಸಗಿ ಸಂಸ್ಥೆಯು ಅಲ್ಲಿ ಭೂಮಿ ಖರೀದಿಸಿರುವ ಕನ್ನಡಿಗರಿಗೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಹೇಳಿತ್ತು. ಆದರೆ, ಆ ಸಂಸ್ಥೆಯು ಪರ್ಯಾಯ ವ್ಯವಸ್ಥೆ ಮಾಡುವಲ್ಲಿ ವಿಫಲವಾದ ಕಾರಣ ಕನ್ನಡಿಗರು ಮನೆಯಿಲ್ಲದಂತಾಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಖಾಸಗಿ ಸಂಸ್ಥೆ ಮಾಡಿದ ಪ್ರಮಾದಕ್ಕೆ ಕನ್ನಡಿಗರಿಗೆ ತೊಂದರೆ ನೀಡುವುದು ಸರಿಯಲ್ಲ ಎಂದು ಜಗದೀಶ್ ಶೆಟ್ಟರ್ ಪತ್ರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ