ಸಿಎಂ ಅಮೆರಿಕದಲ್ಲಿದ್ದಾಗ ರೂಪಿಸಿದ ಕಾರ್ಯತಂತ್ರ?


Team Udayavani, Jul 24, 2019, 3:01 AM IST

cm-ameri

ಬೆಂಗಳೂರು: ಅತ್ತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಖಾಸಗಿಯಾಗಿ ಅಮೆರಿಕ ಪ್ರವಾಸಕ್ಕೆ ಹೋದಾಗಲೇ ಇತ್ತ ಸರ್ಕಾರ ಪತನದ ಮಾಸ್ಟರ್‌ ಪ್ಲ್ರಾನ್‌ನ ನೀಲನಕ್ಷೆ ತಯಾರಾಗಿ ಹದಿನಾರು ದಿನಗಳಲ್ಲಿ ನಾನಾ ಸ್ವರೂಪ ಪಡೆದು ಅಂತಿಮವಾಗಿ ಪತನದ ಹಾದಿ ಹಿಡಿಯಿತು. ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಅಧಿಕಾರಕ್ಕೆ ಬರಲು ಆರು ಬಾರಿ ಹರಸಾಹಸ ಪಟ್ಟು ವಿಫ‌ಲವಾದ ಬಿಜೆಪಿ, ಏಳನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರ “ಛಲ’ಗೆದ್ದಿದೆ.

ಆನಂದ್‌ಸಿಂಗ್‌ ಹಾಗೂ ರಮೇಶ್‌ ಜಾರಕಿಹೊಳಿ ಅವರ ರಾಜೀನಾಮೆಯನ್ನು ನಿರ್ಲಕ್ಷ್ಯ ಮಾಡಿದ ದೋಸ್ತಿ ನಾಯಕರಿಗೆ ನಂತರದ ಶಾಸಕರ ರಾಜೀನಾಮೆ ಪರ್ವ ಆಘಾತವುಂಟು ಮಾಡಿ “ಸಂಧಾನ’ಕ್ಕೆ ಮುಂದಾದರೂ ಪರಿಸ್ಥಿತಿ ಕೈ ಮೀರಿ ಕೈ ಚೆಲ್ಲಿ ಕುಳಿತುಕೊಳ್ಳುವಂತಾಯಿತು. ಒಂದು ಹಂತದಲ್ಲಿ ಹದಿನೈದು ಶಾಸಕರು ತಂಡವಾಗಿ ರಾಜೀನಾಮೆ ನೀಡಿದಾಗ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪರೋಕ್ಷ ಕುಮ್ಮಕ್ಕು ಇರಬಹುದು ಎಂಬ ಆರೋಪ ಕೇಳಿ ಬಂದಿತಾದರೂ ಪರಮಾಪ್ತ ಶಾಸಕರು ಅವರಿಗೂ ಚಳ್ಳೆಹಣ್ಣು ತಿನ್ನಿಸಿ ಕಾಂಗ್ರೆಸ್‌-ಜೆಡಿಎಸ್‌ ನಾಯಕರ ಎಲ್ಲ ತಂತ್ರಗಾರಿಕೆ ಉಲ್ಟಾ ಆಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಷ್ಟಾದರೂ ಸರ್ಕಾರದ ಪತನದಲ್ಲಿ ಕಾಂಗ್ರೆಸ್‌ನ ಕೆಲವು ನಾಯಕರ ಕುಮ್ಮಕ್ಕು ಇರುವ ಶಂಕೆಯೂ ಇದೆ.

ಮುಖ್ಯಮಂತ್ರಿಯವರು ಅಮೆರಿಕದಲ್ಲಿದ್ದಾಗಲೇ ಸರ್ಕಾರಕ್ಕೆ ಕಂಟಕದ ಬೆಳವಣಿಗೆಗಳು ಆಗುತ್ತಿರುವ ಬಗ್ಗೆ ಗುಪ್ತದಳ ಮೂಲಕ ಮಾಹಿತಿ ಬಂದಿತ್ತು. ಸಚಿವ ಸಾ.ರಾ.ಮಹೇಶ್‌ ಈ ಕುರಿತು ಸಿಎಂಗೆ ಹೇಳಿ ವಾಪಸ್‌ ಹೋಗೋಣ ಎಂದು ಒತ್ತಾಯಿಸಿದ್ದರು. ಆದರೆ, ಮುಖ್ಯಮಂತ್ರಿಯವರು ಬೇಡ, ನಾವು ಇಲ್ಲಿ ಬಂದಿರುವ ಕೆಲಸ ಮುಗಿಸಿ ಹೋಗೋಣ. ಹದಿನಾಲ್ಕು ತಿಂಗಳಿನಿಂದ ಸಾಕಷ್ಟು ಬಾರಿ ಬಿಜೆಪಿಯವರು ಇಂತಹ ಪ್ರಯತ್ನ ಮಾಡಿದ್ದಾರೆ. ಈ ಬಾರಿಯೂ ಅಷ್ಟೇ ಏನೂ ಆಗಲ್ಲ ಎಂದಿದ್ದರು. ಅದೇ ವಿಶ್ವಾಸದಲ್ಲೇ ಇದ್ದರು. ಆದರೆ, ಅಮೆರಿಕದಿಂದ ವಾಪಸ್‌ ಆದಾಗಲೇ ಅವರಿಗೆ ವಾಸ್ತವಾಂಶದ ಅರಿವು ಆಗಿದ್ದು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.