ವೈದ್ಯಕೀಯ ಆಯೋಗ ವಿರೋಧಿಸಿ ಮುಷ್ಕರ?
Team Udayavani, Jan 1, 2018, 10:14 AM IST
ಬೆಂಗಳೂರು: ಕೇಂದ್ರ ಸರ್ಕಾರದ ಉದ್ದೇಶಿತ “ರಾಷ್ಟ್ರೀಯ ವೈದ್ಯಕೀಯ ಆಯೋಗ’ ರಚನೆಗೆ ವಿರೋಧ ವ್ಯಕ್ತಪಡಿಸಿರುವ ಭಾರತೀಯ ವೈದ್ಯ ಪರಿಷತ್ (ಎಂಸಿಐ), ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಸಭೆ ನಡೆಸಲಿದೆ. ಒಂದೊಮ್ಮೆ ಮಾತುಕತೆ ವಿಫಲವಾದರೆ ಜ.2ರಿಂದ ದೇಶಾದ್ಯಂತ ಆಸ್ಪತ್ರೆಗಳಲ್ಲಿ “ಹೊರರೋಗಿ ವಿಭಾಗ’ದ ಸೇವೆ ಸ್ಥಗಿತಗೊಳಿಸಲು ನಿರ್ಧರಿ
ಸಿದೆ. ದೆಹಲಿಯಲ್ಲಿ ಭಾನುವಾರ ನಡೆದ ಭಾರತೀಯ ವೈದ್ಯ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಚಿವರೊಂದಿಗಿನ ಸಭೆ ವಿಫಲವಾದರೆ ಪ್ರತಿಭಟನೆ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ. ಇದರಿಂದ ಜ.2ರಂದು ಆರೋಗ್ಯ ಸೇವೆಗಳು ದುರ್ಲಭವಾಗಲಿವೆ. ಈ ಹಿನ್ನೆಲೆಯಲ್ಲಿ ಸೋಮವಾರ ಎಲ್ಲ ಘಟಕಗಳ ಮಟ್ಟದಲ್ಲಿ ಪತ್ರಿಕಾಗೋಷ್ಠಿಗಳನ್ನು ನಡೆಸಬೇಕು. ಎಲ್ಲ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಒಂದು ಕಡೆ ಸೇರಿ ಮೆರವಣಿಗೆಯಲ್ಲಿ ಸಾಗಿ ಡೀಸಿ ಮೂಲಕ ಪ್ರಧಾನಿಯವರಿಗೆ ಮನವಿ ಪತ್ರ ಸಲ್ಲಿಸಬೇಕು. ಸಮಸ್ಯೆ ತಾರ್ಕಿಕ ಅಂತ್ಯ ಕಾಣುವವರೆಗೆ ಹೋರಾಟ ನಡೆಸಬೇಕೆಂಬ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಎಂಸಿಐ ಕಾರ್ಯಕಾರಿ ಸದಸ್ಯ ಡಾ. ಎಚ್.ಎನ್ ರವೀಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು