ರಾಜ್ಯ ವಿಧಾನಮಂಡಲದ ಇನ್ನೊಂದು ಸಮಿತಿಯಿಂದ ಅಧ್ಯಯನ ಪ್ರವಾಸ
Team Udayavani, Jul 4, 2022, 10:22 PM IST
ಬೆಂಗಳೂರು : ರಾಜ್ಯ ವಿಧಾನಮಂಡಲದ ಇನ್ನೊಂದು ಸಮಿತಿ ಈಗ ಅಧ್ಯಯನ ಪ್ರವಾಸಕ್ಕೆ ಸಿದ್ದವಾಗಿದೆ.ಸೋಮಶೇಖರ್ ರೆಡ್ಡಿ ಅಧ್ಯಕ್ಷತೆಯ ವಿಧಾನ ಮಂಡಲದ ಉಭಯ ಸದನಗಳ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತ್ ರಾಜ್ ಸಂಸ್ಥೆಗಳ ಸಮಿತಿ ಜುಲೈ 5 ರಿಂದ 8 ರವರೆಗೆ ದಿಲ್ಲಿ ಹಾಗೂ ಗುಜರಾತ್ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ.
ನಾಳೆ ಬೆಳಗ್ಗೆ ಎಂಟು ಗಂಟೆಗೆ ಈ ಸಮಿತಿಯ ಪ್ರವಾಸ ಆರಂಭವಾಗುತ್ತದೆ.ಸದಸ್ಯರಾದ ಸಿ.ಎಸ್.ಪುಟ್ಟರಾಜು, ಡಾ.ಅಂಜಲಿ ನಿಂಬಾಳ್ಕರ್, ಶರಣು ಸಲಗಾರ್, ಅರುಣ್ ಕುಮಾರ್ ಗುತ್ತೂರು, ಕೆ.ವಿ.ನಂಜೇಗೌಡ, ಆರ್.ಶಂಕರ್, ಸಿ.ಎಂ.ಲಿಂಗಪ್ಪ, ಎನ್.ರವಿಕುಮಾರ್, ಎಂ.ಎಲ್.ಅನಿಲ್ ಕುಮಾರ್, ಟಿ.ನಾರಾಯಣಸ್ವಾಮಿ ಈ ತಂಡದಲ್ಲಿ ಇದ್ದಾರೆ.
ಈ ಪೈಕಿ ಕೆಲ ಶಾಸಕರು ತಮ್ಮ ಪತ್ನಿ ಹಾಗೂ ಮಕ್ಕಳನ್ನೂ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದಾರೆ. ಕಳೆದ ವಾರ ಇನ್ನೊಂದು ಸಮಿತಿ ಸದಸ್ಯರು ಲೇಹ್ ಲಡಾಕ್ ಪ್ರವಾಸಕ್ಕೆ ಕುಟುಂಬ ಸಮೇತ ಪ್ರವಾಸ ತೆರಳಿದ್ದರು.ಇದು ಈ ಸಮಿತಿಯ ಅಂತಿಮ ಅಧ್ಯಯನ ಪ್ರವಾಸವಾಗಿದ್ದು, ಆ ಬಳಿಕ ವರದಿ ಸಲ್ಲಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ