ಹಿಂದೂ-ಮುಸ್ಲಿಮರ ಡಿಎನ್ಎ ಒಂದೇ: ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ
Team Udayavani, Apr 24, 2022, 2:02 PM IST
ಮೈಸೂರು: ಹಿಂದೂಗಳು ಮತ್ತು ಭಾರತೀಯ ಮುಸ್ಲಿಮರ ಡಿಎನ್ಎಗಳು ಬೇರೆಯಲ್ಲ. ಈ ಇಬ್ಬರ ಡಿಎನ್ ಎಗಳು ಒಂದೇ ಆಗಿವೆ ಎಂದು ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದರು.
ಮೈಸೂರು ಹಿಂದೂ ಫೋರಂ ಆಶ್ರ ಯದಲ್ಲಿ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಶನಿವಾರ ವಿಶೇಷ ಉಪನ್ಯಾಸ ನೀಡಿ, ಹೈದರಾಬಾದಿನ ಮೈಕ್ರೋಬಯಾಲಜಿ ಪ್ರಯೋಗಾಲಯದಲ್ಲಿ ಇದು ಸಾಬೀತಾಗಿದೆ ಎಂದರು.
ಆರ್ಯರು ಮತ್ತು ದ್ರಾವಿಡರ ಬಗ್ಗೆ ಪ್ರಸ್ತಾಪಿಸಿದ ಅವರು, ದಕ್ಷಿಣ ಭಾರತದಲ್ಲಿದ್ದವರನ್ನು ದ್ರಾವಿಡರು ಎಂದು ಕರೆಯಲಾಯಿತು ಅಷ್ಟೇ. ಇವೆರಡೂ ನಿರ್ದಿಷ್ಟವಾದ ಜನಾಂಗವಲ್ಲ ಎಂದರು.
ವೈಜ್ಞಾನಿಕ ಸಂಶೋಧನೆಗಳು ಈಗ ಸಂಸ್ಕೃತ ಭಾಷೆಯ ಮಹತ್ವವನ್ನು ಎತ್ತಿ ಹಿಡಿದಿದೆ. ಬ್ರಿಟಿಷರಿಂದಾಗಿ ಭಾರತದಲ್ಲಿ ಇಂಗ್ಲಿಷ್ ಹೆಚ್ಚಾಗಿ ಆವರಿಸಿಕೊಂಡಿತು. ನಾಸಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಕಂಪ್ಯೂಟರ್ಗೆ ಸಂಸ್ಕೃತ ಸುಲಭವಾಗಿ ಅರ್ಥವಾಗುವ ಭಾಷೆ ಎಂದು ಹೇಳಿದೆ. ಭವಿಷ್ಯದಲ್ಲಿ ಸಂಸ್ಕೃತ ಭಾಷೆಯ ಮೂಲಕವೇ ಕೃತಕ ಬುದ್ದಿಮತ್ತೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ವಿಜಯನಗರದ ಅರಸರು, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಿಂದೂ ರಾಜರು ಎಂದಿಗೂ ಹೊರಗಿನವರ ಆಕ್ರಮಣವನ್ನು ಸಹಿಸಿಕೊಂಡಿರಲಿಲ್ಲ. ಹಾಗಾಗಿಯೇ ಭಾರತದಲ್ಲಿ ಶೇ 80ರಷ್ಟು ಮಂದಿ ಹಿಂದೂಗಳು ಉಳಿದಿದ್ದಾರೆ ಎಂದರು.
ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸುತ್ತಿ ದ್ದೇವೆ. ನಮ್ಮ ಮುಂದಿನ ಗುರಿ ಕೃಷ್ಣಜನ್ಮಭೂಮಿ ಹಾಗೂ ಕಾಶಿ. ಅಲ್ಲಿರುವ ವಿವಾದಗಳನ್ನೂ ಶಾಂತಿಯುತವಾಗಿಯೇ ಬಗೆಹರಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ