ಇದು ಅಸಹ್ಯ,ಕೈ ಕೊಟ್ಟ ಮಗನನ್ನು ಹೇಡಿ ಎಂದ ಸಿ.ಎಂ.ಲಿಂಗಪ್ಪ
Team Udayavani, Nov 1, 2018, 1:47 PM IST
ರಾಮನಗರ: ‘ನನ್ನ ಮಗ ಹೇಡಿ, ಇಂಥಹ ರಾಜಕಾರಣ ಯಾರೂ ಮಾಡಬಾರದು’ ಎಂದು ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಅವರ ತಂದೆ, ಹಿರಿಯ ಕಾಂಗ್ರೆಸಿಗ ಸಿ.ಎಂ.ಲಿಂಗಪ್ಪ ಅವರು ನೋವಿನ ನುಡಿಗಳನ್ನಾಡಿದ್ದಾರೆ.
ಸುದ್ದಿಗಾರರು ಮಗನ ನಿರ್ಧಾರದ ಕುರಿತು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಪರಿಷತ್ ಸದಸ್ಯರಾಗಿರುವ ಲಿಂಗಪ್ಪ ‘ನಾನು ಮಗನಿಗೆ ಮೊದಲೇ ಹೇಳಿದ್ದೆ ಬಿಜೆಪಿ ಸೇರ್ಪಡೆಯಾಗಬೇಡ ಎಂದು ಆದರೂ ಹೋಗಿದ್ದ. ನಾವಿಬ್ಬರು ಒಂದೇ ಮನೆಯಲ್ಲಿದ್ದೇವೆ, ಯಾಕೆ ಹೀಗೆ ಮಾಡಿದ ಎಂದು ಗೊತ್ತಿಲ್ಲ, ಕೇಳುತ್ತೇನೆ’ ಎಂದಿದ್ದಾರೆ.
‘ಇಂಥಹ ರಾಜಕಾರಣ ಯಾರೂ ಮಾಡಬಾರದು. ಇದು ಹೇಸಿಗೆ, ಅಸಹ್ಯ. ನನಗೆ ತೀವ್ರ ನೋವು ತಂದಿದೆ’ ಎಂದರು.
ಗುರುವಾರ ಬೆಳಗ್ಗೆ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಜೆಡಿಎಸ್ ಅಭ್ಯರ್ಥಿಯಾಗಿರುವ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ