Sudan: ಸಂಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಧಾವಿಸದ ಸರಕಾರದ ವಿರುದ್ಧ ಸಿದ್ದು ಗರಂ
Team Udayavani, Apr 22, 2023, 5:40 PM IST
ಬೆಂಗಳೂರು: ಸುಡಾನ್ ನಲ್ಲಿ ಅನ್ನ ಆಹಾರ ಇಲ್ಲದೆ ಸಂಕಷ್ಟದಲ್ಲಿರುವ ಕನ್ನಡಿಗ ಹಕ್ಕಿಪಿಕ್ಕಿ ಜನಾಂಗದವರ ರಕ್ಷಣೆಗೆ ಧಾವಿಸದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕನ್ನಡಿಗರ ಗೋಳಿಗೆ ಸೂಡಾನ್ ನ ರಾಯಭಾರ ಕಚೇರಿ ನೀಡಿರುವ ಪ್ರತಿಕ್ರಿಯೆ ಕುರಿತು ಪತ್ರಿಕಾ ಹೇಳಿಕೆ ನೀಡಿದ ಸಿದ್ದರಾಮಯ್ಯ “ನಮಗೆ ತಿನ್ನುವುದಕ್ಕೆ ಏನೂ ಇಲ್ಲ, ನಿಮಗೆ ಏನು ಮಾಡಲಿಕ್ಕೆ ಸಾಧ್ಯ? ನೀವು ಇರುವ ಸ್ಥಳದಲ್ಲಿಯೇ ಬಾಗಿಲು ಹಾಕಿಕೊಂಡು ಇರಿ” ಎಂದು ಕಷ್ಟದಲ್ಲಿರುವ ನಮ್ಮ ಕನ್ನಡಿಗರ ಗೋಳಿಗೆ ಸುಡಾನ್ನ ರಾಯಭಾರ ಕಚೇರಿಯ ಪ್ರತಿಕ್ರಿಯೆ. ವಿದೇಶಾಂಗ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಜೈಶಂಕರ್ ಅವರೇ ಇದನ್ನು ಕೇಳಿ ಗಾಬರಿಯಾಗಲಿಲ್ಲವೇ? ಎಂದು ಕಿಡಿಕಾರಿದ್ದಾರೆ.
ಸುಡಾನ್ನಲ್ಲಿ ಕಳೆದ 8-10 ದಿನಗಳಿಂದ ನಮ್ಮ ಕನ್ನಡಿಗ ಹಕ್ಕಿಪಿಕ್ಕಿ ಜನಾಂಗದವರು ತಿನ್ನಲು ಅನ್ನ ಇಲ್ಲದೆ, ಕುಡಿಯಲು ನೀರಿಲ್ಲದೆ ನರಳಾಡುತ್ತಿದ್ದಾರೆ. ನಮ್ಮ ‘ವಿಶ್ವಗುರು’ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ – ಭರವಸೆಗಳಲ್ಲಿ ಕಾಲಕಳೆಯುತ್ತಿದ್ದಾರೆ. ಆದರೆ ಕನ್ನಡಿಗರ ರಕ್ಷಣೆಗೆ ಯಾರಿದ್ದಾರೆ?
ಮಾನ್ಯ ಮುಖ್ಯಮಂತ್ರಿಗಳೇ, ನಿಮ್ಮ ಚುನಾವಣೆಯ ಬುರುಡೆ ಭಾಷಣಗಳ ಮಧ್ಯೆ ಬಿಡುವಾದರೆ ಸುಡಾನ್ನಲ್ಲಿ ಕಷ್ಟದಲ್ಲಿರುವ ಕನ್ನಡಿಗರ ಕಡೆ ಗಮನ ಕೊಡಿ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಶ್ವರಪ್ಪನವರಿಗೆ ಪೋನ್ ಮಾಡಲು ಇರುವಷ್ಟು ಪುರುಸೊತ್ತು ಕನ್ನಡಿಗರ ರಕ್ಷಣೆಗೆ ಇಲ್ಲವೇ? ಎಂದು ಕೇಳಿ ಎಂದು ಪ್ರಶ್ನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
MUST WATCH
ಹೊಸ ಸೇರ್ಪಡೆ
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!