BJP: ಪಕ್ಷ ಬಿಡುವುದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ಕೊಟ್ಟ ಸುಧಾಕರ್
Team Udayavani, Feb 22, 2024, 9:31 PM IST
ಬೆಂಗಳೂರು: ಪಕ್ಷ ತ್ಯಾಗದ ಬಗ್ಗೆ ಹಬ್ಬಿದ್ದ ವದಂತಿಗಳ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದು, ಬಿಜೆಪಿ ತೊರೆಯುವ ಉದ್ದೇಶ ಹಾಗೂ ಅವಶ್ಯಕತೆ ನನಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದೆರಡು ದಿನಗಳಿಂದ ವಿಧಾನಸಭೆಯ ಮೊಗಸಾಲೆಯಲ್ಲಿ ಸುಧಾಕರ್ ಬಿಜೆಪಿ ತೊರೆಯುತ್ತಾರೆಂಬ ಗುಸುಗುಸು ಜೋರಾಗಿ ಕೇಳಿ ಬಂದಿತ್ತು. ಅವರನ್ನು ಮರಳಿ ಕಾಂಗ್ರೆಸ್ಗೆ ಕರೆ ತಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸುವ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿಗಳು ಕೇಳಿ ಬಂದಿತ್ತು.
ಇದೆಲ್ಲದರ ಹಿನ್ನೆಲೆಯಲ್ಲಿ ಸುಧಾಕರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟನೆ ಬರೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ-ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಸೇರಿದ್ದೇನೆ. ಬಿಜೆಪಿ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ನನಗಿಲ್ಲ. ಜನರನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ಬಿಡುತ್ತೇನೆಂಬ ಊಹಾಪೋಹವನ್ನು ಕೆಲವರು ಪದೇಪದೆ ಹುಟ್ಟು ಹಾಕುತ್ತಿದ್ದು, ಯಾರೂ ಇದಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !