ಡಿ ಆರ್ ಡಿ ಒ ನಿರ್ದೇಶಕರ ಕಾರ್ಯಾಲಯಕ್ಕೆ ಸುಧಾಕರ್ ಭೇಟಿ-ಪರಿಶೀಲನೆ
Team Udayavani, May 14, 2021, 11:57 AM IST
ಬೆಂಗಳೂರು : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಶುಕ್ರವಾರ ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿರುವ ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಆರ್ ಡಿಒ (ಇಸಿಎಸ್) ನಿರ್ದೇಶಕರ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋವಿಡ್ ಚಿಕಿತ್ಸೆಗೆ ಅಭಿವೃದ್ಧಿ ಪಡಿಸಿರುವ ಟು – ಡಿಜಿ ಔಷಧ, ಸಂಸ್ಥೆಯು ನಿರ್ಮಿಸಲು ಉದ್ದೇಶಿಸಿರುವ ಮೇಕ್ ಶಿಫ್ಟ್ ಹಾಸ್ಪಿಟಲ್ ಮತ್ತು ಆಕ್ಸಿಜನರೇಷನ್ ಪ್ಲಾಂಟ್ ಅಳವಡಿಕೆಗೆ ಸಂಬಂಧಿಸಿದಂತೆ ನಿರ್ದೇಶಕಿ ಶ್ರೀ ಮತಿ ಮಂಜುಳಾ, ಡಿಇಬಿಇಎಲ್ ನಿರ್ದೇಶಕ ಡಾ. ಯು.ಕೆ. ಸಿಂಗ್, ಎಲ್ ಆರ್ ಡಿಇ ನಿರ್ದೇಶಕ ಪಿ. ರಾಧಾಕೃಷ್ಣ, ಎಸ್ಟೇಟ್ ಮ್ಯಾನೇಜರ್ ಜೆ.ಡಿ.ಜಿ. ಪ್ರಸಾದ್ ರಾಜು ಅವರ ಜತೆ ಸಮಾಲೋಚನೆ ನಡೆಸಿದರು.
ಹೊಸದಿಲ್ಲಿಯ ಕೇಂದ್ರ ಕಚೇರಿಯಿಂದ ಐಎನ್ ಎಂಎಎಸ್ ನ ಡಾ. ಅನಂತ ಭಟ್, ಸಿಸಿ ಅಂಡ್ ಆರ್ ಅಂಡ್ ಡಿ ವಿಭಾಗದ ಡಾ. ರಾಧಾಕೃಷ್ಣ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದರು.
ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳಾದ ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ, ನಿರ್ದೇಶಕ ಓಂಪ್ರಕಾಶ್ ಪಾಟೀಲ್, ಡ್ರಗ್ಸ್ ಕಂಟ್ರೋಲ್ ಇಲಾಖೆಯ ಅಮರೇಶ್ ತುಂಬಗಿ, ನಗರ ಜಿಲ್ಲೆಯ ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ಅವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ