ಸರ್ಕರೆ ಕಾರ್ಖಾನೆ ಖಾಸಗೀಕರಣ ತಡೆಯಲು ಸಿದ್ದರಾಮಯ್ಯಗೆ ಮನವಿ
Team Udayavani, Jul 3, 2021, 12:55 PM IST
ಬೆಂಗಳೂರು: ಮೈಸೂರು ಸರ್ಕರೆ ಕಾರ್ಖಾನೆಯ ಖಾಸಗೀಕರಣ ನಿಲ್ಲಿಸಿ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಂಡು ಪುನಾರಂಭಿಸಲು ಮುಖ್ಯಮಂತ್ರಿಯವರ ಮೇಲೆ ಒತ್ತಡ ಹೇರುವಂತೆ ಕಾರ್ಖಾನೆಯ ಮಾಜಿ ಅಧ್ಯಕ್ಷರ ವೇದಿಕೆ ಪದಾಧಿಕಾರಿಗಳು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಮಾಜಿ ಸಚಿವ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಮಾಜಿ ಶಾಸಕರಾದ ಚಂದ್ರಶೇಖರ್, ರಮೇಶ್ ಬಂಡಿಸಿದ್ದೇಗೌಡ, ಮುಖಂಡರಾದ ರವಿ ಗಣಿಗ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಮತ್ತಿತರರು ಹಾಜರಿದ್ದರು.