‘ಅವರಿಗೊಂದು ನ್ಯಾಯ ನಮಗೊಂದು ನ್ಯಾಯಾನಾ?’

ಮಂಡ್ಯ ಜಿಲ್ಲಾಧಿಕಾರಿ ವಿರುದ್ಧ ಪಕ್ಷೇತರ ಆಭ್ಯರ್ಥಿ ಸುಮಲತಾ ಅಂಬರೀಷ್‌ ಗರಂ

Team Udayavani, Mar 31, 2019, 11:02 AM IST

Sumalatha-Ambareesh-726

ಮಂಡ್ಯ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಪಕ್ಷೇತರ ಆಭ್ಯರ್ಥಿ ಸುಮಲತಾ ಅಂಬರೀಷ್‌ ಅವರು ಕಣದಲ್ಲಿರುವ ಪ್ರತಿಷ್ಠಿತ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರನನ್ನು ಗೆಲ್ಲಿಸಲು ಕುಮಾರಸ್ವಾಮಿ ಅವರು ಸರಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಮತ್ತು ಇದರಲ್ಲಿ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರ ಭಾಗೀದಾರಿಯೂ ಇದೆ ಎಂಬ ಗಂಭೀರ ಆರೋಪವನ್ನು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದಾರೆ.

ಸುಮಲತಾ ಅಂಬರೀಷ್‌ ಅವರು ನಾಮಪತ್ರವನ್ನು ಸಲ್ಲಿಸಿದ ದಿನ ಜಿಲ್ಲೆಯಾದ್ಯಂತ ವಿದ್ಯುತ್‌ ಮತ್ತು ಕೇಬಲ್‌ ಅನ್ನು ಕಡಿತಗೊಳಿಸಿರುವುದೂ ಸೇರಿದಂತೆ ಹಲವಾರು ರೀತಿಯಲ್ಲಿ ನನ್ನ ಪ್ರಜಾಸತ್ತಾತ್ಮಕ ಸ್ಪರ್ಧೆಗೆ ಅಡ್ಡಿ ಮಾಡಲಾಗುತ್ತಿದೆ ಎಂದು ಸುಮಲತಾ ಅವರು ಆರೋಪಿಸಿದರು. ನಿಖಿಲ್‌ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ ದಿನವೇ ಮುಖ್ಯಮಂತ್ರಿಯವರು ನಿಖಿಲ್‌ ಅವರ ಅಭ್ಯರ್ಥಿ ಕ್ರಮಾಂಕ ಕ್ರಮಾಂಕ 1 ಎಂದು ಘೋಷಿಸುತ್ತಾರೆ. ಆದರೆ ನನಗೆ ಇನ್ನೂ ಅಭ್ಯರ್ಥಿ ಕ್ರಮಾಂಕವನ್ನು ತಿಳಿಸಿಲ್ಲ. ಈ ಕುರಿತಾಗಿ ಜಿಲ್ಲಾಧಿಕಾರಿಯವರಲ್ಲಿ ವಿಚಾರಿಸಿದರೆ ಅವರು ದೆಹಲಿಯತ್ತ ಕೈತೋರಿಸುತ್ತಾರೆ. ಈ ರೀತಿ ಮಾಡುವ ಮೂಲಕ ಒಬ್ಬ ನಿರ್ಧಿಷ್ಟ ಅಭ್ಯರ್ಥಿಗೆ ಈ ಚುನಾವಣೆಯಲ್ಲಿ ಅನುಕೂಲ ವಾತಾವರಣವನ್ನು ನಿರ್ಮಿಸಿಕೊಡುವ ಕೆಲಸವನ್ನು ಜಿಲ್ಲಾಧಿಕಾರಿಗಳು ಸೇರಿದಂತೆ ಇಲ್ಲಿನ ಅಧಿಕಾರ ವರ್ಗವೇ ಮಾಡುತ್ತಿದೆ ಎಂದು ಸುಮಲತಾ ಆರೋಪಿಸಿದರು.

ಇನ್ನು ನಿಖಿಲ್‌ ಅವರ ನಾಮಪತ್ರದಲ್ಲಿ ದೋಷವಿದೆ ಎಂದು ನಾವು ಲಿಖಿತ ದೂರು ನೀಡಿದ್ದರೂ ಈ ಕುರಿತಾಗಿ ಆಧಾರವನ್ನು ಕೇಳುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದ ಆಧಾರಗಳನ್ನೂ ನಾವು ಒದಗಿಸಿದ್ದೇವೆ ಆದರೆ ಈ ಕುರಿತಾಗಿಯೂ ತೃಪ್ತಿಕರ ಕ್ರಮ ಕೈಗೊಂಡಿಲ್ಲ ಎಂದು ಸುಮಲತಾ ಅವರು ಸರಣಿ ಆರೋಪಗಳನ್ನು ಮಾಡಿದರು. ಅಂದು ಮಾಡಿದಂತೆ ಇವತ್ತು ಪತ್ರಿಕಾಗೋಷ್ಠಿ ಸಂದರ್ಭದಲ್ಲೂ ಸಹ ವಿದ್ಯುತ್‌ ಮತ್ತು ಕೇಬಲ್‌ ಕಡಿತಗೊಳಿಸಿದ್ದಾರೆ. ನಮಗೆ ನ್ಯಾಯ ಸಿಗುವುದಿಲ್ಲ ಎಂದು 99 ಪ್ರತಿಶತ ಖಾತ್ರಿಯಾಗಿದೆ. ಇದಕ್ಕೆ ಜಿಲ್ಲೆಯ ಮತದಾರರೇ ಸೂಕ್ತ ಉತ್ತರವನ್ನು ನೀಡಲಿದ್ದಾರೆ ಎಂದು ಬಿ.ಜೆ.ಪಿ. ಬೆಂಬಲಿತ ಪಕ್ಷೇತರ ಅಭ್ಯರ್ಥಿ ತನ್ನ ನೋವನ್ನು ತೋಡಿಕೊಂಡರು.

ಟಾಪ್ ನ್ಯೂಸ್

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.