ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ: ಸುಮಲತಾ
Team Udayavani, Jul 10, 2021, 11:19 AM IST
ಬೆಂಗಳೂರು: ಕೆಆರ್ ಎಸ್ ಜಲಾಶಯ ಬಿರುಕು ಹೇಳಿಕೆಯಿಂದ ಆರಂಭವಾದ ಕುಮಾರಸ್ವಾಮಿ- ಸುಮಲತಾ ಮಾತಿನ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಿನಕ್ಕೊಂದು ರೂಪ ಪಡೆಯುತ್ತಿರುವ ಅಖಾಡಕ್ಕೆ ಸಿನಿಮಾ ರಂಗ- ಜೆಡಿಎಸ್ ಪಕ್ಷದ ಮುಖಂಡರೂ ಧುಮುಕಿದ್ದರು.
ಇದೀಗ ಸುಮಲತಾ ಅವರು ಇಂದು ಟ್ವೀಟ್ ಮಾಡಿದ್ದಾರೆ. “ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ” ಎಂದು ಕುಟುಕಿದ್ದಾರೆ.
ಇದನ್ನೂ ಓದಿ:ಎಚ್ಡಿಕೆ-ಸುಮಲತಾ ವಾಕ್ ಸಮರ ತಮಾಷೆಯಾಗಿದೆ, ಕೇಳಲು ನಮಗೆ ಸಮಯವಿಲ್ಲ : ಡಿಸಿಎಂ ಸವದಿ
ಶುಕ್ರವಾರ ಕುಮಾರಸ್ವಾಮಿ ಹೇಳಿಕೆಗಳಿಗೆ ಸುಮಲತಾ ಟೀಂ ತಿರುಗೇಟು ನೀಡಿತ್ತು. ಸುಮಲತಾ, ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ, ಅಭಿಷೇಕ್ ಅಂಬರೀಶ್ ವಾಗ್ದಾಳಿ ನಡೆಸಿದ್ದರು.
ಶುಭೋದಯ ?
ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ!#SaveKRSDam#StopIllegalMining— Sumalatha Ambareesh ?? ಸುಮಲತಾ ಅಂಬರೀಶ್ (@sumalathaA) July 10, 2021
ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಂಬರೀಶ್ ಬಗ್ಗೆ ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹೇಳಿದ್ದಾರೆ. ಶುಕ್ರವಾರ ಮಾತನಾಡಿದ ಅವರು, ನೀವು ಸಿಎಂ ಆಗಿದ್ದಾಗ ಚಿತ್ರರಂಗಕ್ಕೆ ಏನ್ ಮಾಡಿದ್ದೀರಾ? ಅಂಬರೀಶ್ರಿಂದ ಏನೇನು ಲಾಭ ಪಡೆದಿದ್ದೀರಾ ನೆನಪು ಮಾಡಿಕೊಳ್ಳಿ. ಅಂಬರೀಶ್ ಸಾವಿನಲ್ಲಿ ಯಾಕೆ ರಾಜಕೀಯ ಮಾಡ್ತೀರಾ? ಸುಮಲತಾಗೆ ಯಾರೂ ಇಲ್ಲ ಅಂದುಕೊಂಡಿದ್ದೀರಾ? ಎಂದು ಅವರು ಪ್ರಶ್ನಿಸಿದ್ದಾರೆ.
ಚುನಾವಣೆ ಸಮಯದಲ್ಲಿ ಫೈವ್ ಸ್ಟಾರ್ ಹೋಟೆಲ್ನಲ್ಲಿ ಕುಳಿತು ನೀವು ಏನು ಮಾಡಿದ್ದೀರಿ ಎಂದು ಎಲ್ಲರಿಗೂ ಗೊತ್ತಿದೆ. ನಾವು ಹೋಟೆಲ್ಗೆ ಹೋಗುವುದನ್ನು ಕದ್ದು ಶೂಟ್ ಮಾಡಿಸಿ, ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ನಡೆಸಿದ್ದರು ಎಂದು ರಾಕ್ಲೈನ್ ನೇರವಾಗಿ ಆರೋಪಿಸಿದ್ದಾರೆ