ನಾನು ಕೆಆರ್ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ: ಸುಮಲತಾ
Team Udayavani, Jul 14, 2021, 12:05 PM IST
ಮೈಸೂರು: ನನಗೆ ಈಗಲೂ ಶೇಕಡ 500ರಷ್ಟು ಆತಂಕ ಇದೆ. ಗಣಿಗಾರಿಕೆಯಿಂದ ಕೆಆರ್ಎಸ್ ಬಿರುಕಾಗುತ್ತೆ ಎಂಬ ಆತಂಕ ಇದೆ. ನಾನು ಇದನ್ನೇ ದಿಶಾ ಸಭೆಯಲ್ಲಿ ಕೇಳಿರೋದು. ಆದರೆ ಅದನ್ನೇ ಹೊರಗೆ ಬೇರೆ ರೀತಿಯಲ್ಲಿ ಅರ್ಥೈಸಿ ಇಷ್ಟೆಲ್ಲ ಮಾಡಿದ್ದಾರೆ ಎಂದು ಸಂಸದೆ ಸುಮಲತಾ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮಂಡ್ಯ ಜಿಲ್ಲೆಯ ಗಣಿ ಅಧಿಕಾರಿಗಳು ಕೂಡ ಏನೂ ಆಗಿಲ್ಲ ಎನ್ನುವಂತೆ ಮಾತನಾಡುತ್ತಾರೆ. ಅವರ ಮೇಲೆಯೂ ಒತ್ತಡಗಳು ಇರಬಹುದು. ಹೀಗಾಗಿ ಸ್ವತಂತ್ರ ತನಿಖೆಯಾಗಬೇಕು ರಾಜ್ಯದ ಅಧಿಕಾರಿಗಳಿಂದ ಸಾಧ್ಯವಾಗದಿದ್ದರೆ ಸಿಬಿಐ ತನಿಖೆ ಮಾಡಿಸಲಿ. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ 1200ಕೋಟಿ ನಷ್ಟ ಆಗಿದೆ. ಇಷ್ಟು ರಾಜಧನ ವಸೂಲಿ ಮಾಡಿದ್ರೆ ಮಂಡ್ಯ ಅಭಿವೃದ್ಧಿಗೆ ಬಳಸಬಹುದಿತ್ತು ಎಂದರು.
ಇದನ್ನೂ ಓದಿ: ಭಾರತ: ಕಳೆದ 24ಗಂಟೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ, ಸಾವಿನ ಪ್ರಮಾಣ ಇಳಿಕೆ
ಈಗ ಗಣಿ ಅಧಿಕಾರಿಗಳಲ್ಲಿ ಡ್ರೋಣ್ ಸರ್ವೆಗೂ ಹಣ ಇಲ್ಲ ಎನ್ನುತ್ತಿದ್ದಾರೆ. ನಾನು ಗಣಿ ಸಚಿವ ಮುರುಗೇಶ್ ನಿರಾಣಿಗೆ ಎಲ್ಲವನ್ನು ಹೇಳಿದ್ದೇನೆ. ಮೊದಲು ಅವರನ್ನು ಭೇಟಿ ಬೆಟ್ಟ ಸುತ್ತಮುತ್ತಲಿನ ಗಣಿಗಾರಿಕೆ ಪ್ರದೇಶಕ್ಕೆ ಕರೆದುಕೊಂಡು ಬರುವೆ. ನಂತರ ವಸ್ತು ಸ್ಥಿಗತಿ ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ತಿಳಿಸುವೆ ಎಂದರು.
ಇನ್ನು 50 ವರ್ಷ ಬಿಟ್ಟು ಕೆಆರ್ಎಸ್ ಹೊಡೆದು ಹೋದ್ರೆ ಪರವಾಗಿಲ್ವ: ಕೆಆರ್ಎಸ್ ಸುತ್ತಮುತ್ತ ಆತಂಕದ ವಾತಾವರಣ ಇರುವ ಬಗ್ಗೆ ಎಲ್ಲಿಡೆ ವರದಿ ಆಗುತ್ತಿದೆ. ಈಗಾಗಲೇ ನಾನು ಕೂಡ ಸಭೆಯಲ್ಲಿ ಬಿರುಕಾಗಿದೆಯಾ ಅಂತ ಪ್ರಶ್ನೆ ಮಾಡಿದೆ. ಈಗ ಏನೂ ಆಗಿಲ್ಲ ಅಂದ್ರೆ ಸರಿ. ಹಾಗಂತ ಇನ್ನು 10 ವರ್ಷ ಬಿಟ್ಟು ಕೆಆರ್ಎಸ್ ಡ್ಯಾಂ ಹೊಡೆದರೆ ಪರವಾಗಿಲ್ವ. 50 ವರ್ಷ ಬಿಟ್ಟು ಹೊಡೆದರೆ ಓಕೆನ. ಕೊರೊನಾ ಬರುವ ಮುಂದೆ ಮಾಸ್ಕ್ ಹಾಕೊಳಿ, ಸ್ಯಾನಿಟೈಸ್ ಮಾಡ್ಕೊಳಿ ಅಂತ ಹೇಳ್ತಿವಿ. ಆಗಂತ ನಮಗೆ ಕೊರೊನಾ ಬಂದಿದೆ ಅಂತ ತಿಳಿದುಕೊಳ್ಳೊಕ್ಕಾಗುತ್ತ ಎಂದರು.
ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ:
ಅಕ್ರಮ ಗಣಿಗಾರಿಕೆಯನ್ನು ನಾನು ಎಕ್ಸ್ಪೋಸ್ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಕೆಆರ್ಎಸ್ ಡ್ಯಾಂ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಬ್ಲಾಸ್ಟಿಂಗ್ ಮಾಡುವಂತಿಲ್ಲ. ಈ ಪ್ರದೇಶದಲ್ಲಿ ಅಕ್ರಮ, ಸಕ್ರಮ ಅನ್ನುವ ಪ್ರಶ್ನೆಯೇ ಬರೋದಿಲ್ಲ. ಗಣಿಗಾರಿಕೆಯಿಂದಾಗಿ ಕೆಆರ್ಎಸ್ ಡ್ಯಾಂನಲ್ಲಿ ಕಂಪನ ದಾಖಲಾಗಿದೆ. ಈ ಸಂಬಂಧ ಅಧಿಕೃತ ದಾಖಲೆಗಳೂ ಇವೆ. ಆದ್ದರಿಂದ ಗಣಿಗಾರಿಕೆ ನಿಲ್ಲಬೇಕು ಅಂತ ಹೋರಾಟ ಮಾಡುತ್ತಿದ್ದೇನೆ ಎಂದರು.
ಸರ್ಕಾರವನ್ನಾಗಲೀ, ಮತ್ಯಾರನ್ನೋ ಆಗಲಿ ಚಾರ್ಜ್ ಮಾಡೋದು ನನ್ನ ಉದ್ದೇಶ ಅಲ್ಲ. ವಿರೋಧ ಪಕ್ಷದವರನ್ನೂ ಎಳೆತಂದು ಇದಕ್ಕೆ ರಾಜಕೀಯ ರೂಪ ಕೊಡೋದಕ್ಕೂ ನಾನು ಬಯಸಲ್ಲ. ಆದರೆ ಅಕ್ರಮದ ಬಗ್ಗೆ ಹೋರಾಡುವ ಮನಸ್ಥಿತಿ ಇರುವ ಎಲ್ಲರ ಸಹಕಾರ ಕೇಳುತ್ತೇನೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ