ಏ.24ರಿಂದ ಮೇ 21ರವರೆಗೆ ಹೈಕೋರ್ಟ್ಗೆ ಬೇಸಿಗೆ ರಜೆ
Team Udayavani, Apr 22, 2022, 9:30 PM IST
ಬೆಂಗಳೂರು: ರಾಜ್ಯ ಹೈಕೋರ್ಟ್ಗೆ ಏ.24ರಿಂದ ಮೇ 21ರವರೆಗೆ ಬೇಸಿಗೆ ರಜೆ ಇರಲಿದೆ.
ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ.
ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ವಿವಿಧ ದಿನಾಂಕಗಳಂದು ಏಳು ದಿನ ರಜಾ ಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಣೆ ಮಾಡಲಿದೆ.
ಏಪ್ರಿಲ್ 26, 28, ಮೇ 5, 10, 12, 17 ಮತ್ತು 19 ರಂದು ರಜಾ ಕಾಲದ ಪೀಠಗಳು ಕಾರ್ಯನಿರ್ವಹಿಸಲಿವೆ.
ಬೇಸಿಗೆ ರಜೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮಮೂರ್ತಿಗಳ ಆದೇಶಾನುಸಾರ ಹೈಕೋರ್ಟ್ ರಿಜಿಸ್ಟ್ರಾರ್ (ನ್ಯಾಯಾಂಗ) ಕೆ.ಎಸ್. ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.
ರಜಾ ಕಾಲದ ನ್ಯಾಯಪೀಠಗಳು ಬೆಂಗಳೂರು ಪ್ರಧಾನ ಪೀಠದಲ್ಲಿ ಕಾರ್ಯ ನಿರ್ವಹಿಸಲಿವೆ. ಧಾರವಾಡ ಹಾಗೂ ಕಲಬುರಗಿ ಪೀಠಗಳಲ್ಲಿ ಭೌತಿಕ ವಿಚಾರಣೆ ಇರುವುದಿಲ್ಲ.
ಬದಲಿಗೆ ಈ ಪೀಠಗಳಲ್ಲಿ ದಾಖಲಾಗುವ ತುರ್ತು ಪ್ರಕರಣಗಳು ಬೆಂಗಳೂರಿನ ಪ್ರಧಾನ ಪೀಠದಲ್ಲಿ ಆನ್ಲೈನ್ ಮೂಲಕ ವಿಚಾರಣೆ ನಡೆಯಲಿವೆ.
ಹಾಗಿದ್ದೂ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಪ್ರಕರಣ ದಾಖಲಿಸಲು ವಾರಪೂರ್ತಿ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10 ರಿಂದ 12ರ ನಡುವೆ ನೇರವಾಗಿ ಅಥವಾ ಇ-ಫೈಲಿಂಗ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕ ಮಾತನಾಡಲಿ: ಪ್ರಹ್ಲಾದ ಜೋಶಿ
ವಕೀಲರಿಗೆ ಸೂಚನೆ:
ರಜಾ ಕಾಲದ ಪೀಠಗಳಲ್ಲಿ ಪ್ರಕರಣದ ವಿಚಾರಣೆ ಕೋರಿ ಮನವಿ ಸಲ್ಲಿಸುವ ವಕೀಲರು ತುರ್ತು ವಿಚಾರಣೆಯ ಕುರಿತು ಉಲ್ಲೇಖಿಸಬೇಕು. ಇಲ್ಲದಿದ್ದರೆ ಅಂತಹ ಅರ್ಜಿಗಳನ್ನು ರಜಾ ಕಾಲದ ವಿಶೇಷ ಪೀಠಗಳ ಮುಂದೆ ವಿಚಾರಣೆಗೆ ನಿಗದಿಪಡಿಸಲಾಗುವುದಿಲ್ಲ. ಇನ್ನು ರಜಾ ಕಾಲದ ಪೀಠಗಳಲ್ಲಿ ತುರ್ತು ಅಗತ್ಯವಿರುವ ತಡೆಯಾಜ್ಞೆ ಕೋರಿಕೆ, ಮಧ್ಯಂತರ ನಿರ್ದೇಶನ, ತಾತ್ಕಾಲಿಕ ತಡೆಯಾಜ್ಞೆ ಮನವಿಗಳ ಹೊರತಾಗಿ ಸಿವಿಲ್ ಸ್ವರೂಪದ ಪ್ರಕರಣಗಳ ವಿಚಾರಣೆ ಪರಿಗಣಿಸುವುದಿಲ್ಲ. ಅದೇ ರೀತಿ ಕ್ರಿಮಿನಲ್ ಪ್ರಕರಣಗಳಲ್ಲಿಯೂ ತುರ್ತು ಆದೇಶಗಳ, ತಡೆಯಾಜ್ಞೆಗಳ ಕೋರಿಕೆಯನ್ನಷ್ಟೇ ಪರಿಗಣಿಸಲಾಗುತ್ತದೆ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?