ಸಮನ್ಸ್ ಸರಿಯಿದೆ ಇಡಿ ಸಮರ್ಥನೆ
Team Udayavani, Mar 13, 2019, 12:30 AM IST
ಬೆಂಗಳೂರು: ಐಟಿ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಆಪ್ತ ಸಚಿನ್ ನಾರಾಯಣ್ ಮತ್ತಿತರರ ವಿರುದ್ಧ ಸಮನ್ಸ್ ಜಾರಿಗೊಳಿಸಿರುವ ಕ್ರಮವನ್ನು ಹೈಕೋರ್ಟ್ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿರುವ ಜಾರಿ ನಿರ್ದೇಶನಾಲಯ ಎಲ್ಲರ ವಿರುದ್ಧದ ಆರೋಪಗಳಿಗೆ ಸಾಕಷ್ಟು ಸಾಕ್ಷ್ಯವಿದೆ ಎಂದು ಪ್ರತಿಪಾದಿಸಿದೆ. ಜಾರಿ ನಿರ್ದೇಶನಾಲಯ ನೀಡಿರುವ ನೋಟಿಸ್ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮತ್ತಿತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ.ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಆರೋಪಿಗಳಿಗೆ ಸಮನ್ಸ್ ನೀಡಿರುವ ಜಾರಿ ನಿರ್ದೇಶನಾಲಯದ ಕ್ರಮ ಸರಿ ಇದೆ ಎಂದು ಹೇಳಿದರು.
“”ಹಣ ದುರ್ಬಳಕೆ ಕಾಯ್ದೆಯಡಿ ಇನ್ನೂ ತನಿಖೆ ನಡೆಯುತ್ತಿದೆ, ಸದ್ಯಕ್ಕೆ 120 ಬಿ ಅಡಿ ಒಳಸಂಚು ಆರೋಪ ಹೊರಿಸಲಾಗಿದೆ. ತನಿಖೆಯ ವೇಳೆ ಇನ್ನೂ ಬೇರೆ ರೂಪದ ಅಪರಾಧಗಳುಹೊರಬರಬಹುದು. ಆರೋಪಿ ಹಣ ದುರ್ಬಳಕೆ ಮಾತ್ರವಲ್ಲದೆ, ನೋಟು ಅಮಾನ್ಯಿàಕರಣ ಸಂದರ್ಭದಲ್ಲಿ ಅಕ್ರಮವಾಗಿ ಹಳೆಯ ನೋಟುಗಳ ವಿನಿಮಯ ಕಾರ್ಯದಲ್ಲೂ ಸಹ ಭಾಗಿಯಾಗಿದ್ದರು. ಆರೋಪಿಗಳಿಗೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಸರಿ ಇದೆ. ಅವರ ವಿರುದಟಛಿದ ಅಪರಾಧಿಕ ಪಿತೂರಿ ಆರೋಪ ಹೊರಿಸಲು ಸಾಕಷ್ಟು ಸಾಕ್ಷ್ಯವಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯ ಪೀಠ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್