ಸಂಡೇ ಕರ್ಫ್ಯೂ ಬಹುತೇಕ ಸಕ್ಸಸ್‌ ; ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ತಬ್ಧ

ಶ್ರೀನಿವಾಸಪುರದ ಗೌಡಹಳ್ಳಿಯಲ್ಲಿ ಹೊಡೆದಾಟ; ಸಾವು

Team Udayavani, May 25, 2020, 8:40 AM IST

ಸಂಡೇ ಕರ್ಫ್ಯೂ ಬಹುತೇಕ ಸಕ್ಸಸ್‌

ಬೆಂಗಳೂರು: ಲಾಕ್‌ಡೌನ್‌ ನಾಲ್ಕನೇ ಹಂತದ ಭಾಗವಾಗಿ ಭಾನುವಾರ ರಾಜ್ಯಾದ್ಯಂತ ಜಾರಿಗೊಳಿಸಲಾಗಿದ್ದ ಕರ್ಫ್ಯೂ ಬಹುತೇಕ ಯಶಸ್ವಿಯಾಗಿದೆ. ಸಂಪೂರ್ಣ ಲಾಕ್‌ಡೌನ್‌ ಅಂಗವಾಗಿ ರಾಜ್ಯಾದ್ಯಂತ ಚಟುವಟಿಕೆಗಳು ಸಂಪೂರ್ಣ ಸ್ತಬ್ಧಗೊಂಡಿದ್ದವು. ಅಗತ್ಯ ಸೇವೆಗಳಾದ ದಿನಸಿ, ಹಾಲು, ತರಕಾರಿ, ಮಾಂಸದ ಅಂಗಡಿಗಳಿಗೆ ವಿನಾಯಿತಿ ನೀಡಿದ್ದರಿಂದ ಬೆಳಗ್ಗೆ ಮಾರುಕಟ್ಟೆಗಳಲ್ಲಿ ಜನದಟ್ಟಣೆ ಕಂಡುಬಂದಿತ್ತಾದರೂ ನಂತರ ಜನ ಸಂಚಾರ ವಿರಳವಾಗಿತ್ತು.

ಕೈಗಾರಿಕೆಗಳು, ಕಾರ್ಖಾನೆಗಳು ಸೇರಿ ವಾಣಿಜ್ಯ ಮಳಿಗೆಗಳು ಸಂಪೂರ್ಣವಾಗಿ ಬಂದ್‌ ಆಗಿದ್ದವು. ಪೂರ್ವನಿಗದಿಯಾಗಿದ್ದ ವಿವಾಹಕ್ಕೆ ಅವಕಾಶ ಇದ್ದ
ಕಾರಣ ಭಾನುವಾರದ ಮಹೂರ್ತದಲ್ಲಿ ನವ ಜೀವನಕ್ಕೆ ಕಾಲಿಟ್ಟವರು ಸರಳವಾಗಿ ವಿವಾಹ ನೆರವೇರಿಸಿಕೊಂಡರು. ಲಾಕ್‌ಡೌನ್‌ ಒಂದು ಹಾಗೂ ಎರಡನೇ ಹಂತದಲ್ಲಿ ಜಾರಿ ಮಾಡಿದ್ದಂತೆ ಶನಿವಾರ ರಾತ್ರಿ 7 ಗಂಟೆಯಿಂದಲೇ ಪ್ರಮುಖ ರಸ್ತೆ, ಮೇಲ್ಸೇತುವೆಗಳನ್ನು ಬ್ಯಾರೀಕೇಡ್‌ಗಳಿಂದ ಮುಚ್ಚಿ ಸಂಚಾರ ನಿಷೇಧಿಸಲಾಗಿತ್ತು. ಲಾಕ್‌ಡೌನ್‌ ವಿನಾಯಿತಿಯಿಂದ ವಾರವಿಡೀ ಕೆಲಸ ಕಾರ್ಯಗಳಲ್ಲಿ ತೊಡಗಿದ್ದವರು ಭಾನುವಾರದ ರಜೆ ಮನೆಯಲ್ಲೇ ಕಳೆದರು. ರಂಜಾನ್‌ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ದಟ್ಟಣೆ ಉಂಟಾಗಿದ್ದರಿಂದ ಕೆಲವೆಡೆ ಪೊಲೀಸರು ಮಧ್ಯಪ್ರವೇಶಿಸಿ ಬೇಗ ಖರೀದಿ ಮುಗಿಸಿ ವಾಪಸ್‌ ಕಳುಹಿಸಿದರು.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ ಸರ್ಕಾರಿ ಹಾಗೂ
ಖಾಸಗಿ ಬಸ್‌ ಸಂಚಾರ, ರೈಲು ಸಂಚಾರ ಸ್ಥಗಿತಗೊಂಡಿತ್ತು. ಆಟೋ, ಟ್ಯಾಕ್ಸಿ ಸೇವೆಯೂ ಇರಲಿಲ್ಲ. ಅನಗತ್ಯವಾಗಿ ಓಡಾಡುತ್ತಿದ್ದ ದ್ವಿಚಕ್ರ ಹಾಗೂ ಕಾರು ಸೇರಿ ಇತರೆ ವಾಹನಗಳನ್ನು ಜಪ್ತಿ ಮಾಡಲಾಯಿತು. ಬಡಾವಣೆಗಳಲ್ಲಿ ಓಡಾಡುತ್ತಿದ್ದ ಜನರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದರು.

ಜಿಲ್ಲಾ ಹಾಗೂ ರಾಜ್ಯದ ಗಡಿಗಳನ್ನು ಬಂದ್‌ ಮಾಡಲಾಗಿತ್ತು. ಕರ್ನಾಟಕ ಆಂಧ್ರದ ಗಡಿ ನಂಗಲಿ, ಕರ್ನಾಟಕ ತಮಿಳುನಾಡಿನ ಕುಪ್ಪಂ, ಹೊಸೂರು ಮೂಲಕ ಒಳಗೆ ಬರಲು ಹಾಗೂ ಹೊರಗೆ ಹೋಗಲು ಯತ್ನಿಸಿದ ಪ್ರಕರಣಗಳು ನಡೆದಿದ್ದು ಪೊಲೀಸರು ಅಂತವರನ್ನು ತಡೆದು ಗಡಿಯಲ್ಲೇ ರಾತ್ರಿವರೆಗೂ ವಶದಲ್ಲಿಟ್ಟುಕೊಂಡಿದ್ದರು.

ಬೆಂಗಳೂರು, ರಾಯಚೂರು, ಯಾದಗಿರಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದ ಕೆಲವರನ್ನು ವಶಕ್ಕೆ ಪಡೆದು ಪ್ರಕರಣ
ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಲಾಠಿ ಪ್ರಹಾರ ನಡೆಸಿ ಪೊಲೀಸರು
ಗುಂಪು ಚದುರಿಸಿದ್ದಾರೆ. ಬೆಂಗಳೂರಿನ ಅತ್ತಿಬೆಲೆಯಲ್ಲಿ ಪೊಲೀಸರ ಸೂಚನೆ ದಿಕ್ಕರಿಸಿದ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಈ
ಮಾರ್ಗದಲ್ಲಿ ಅಗತ್ಯ ಸೇವೆ ಒದಗಿಸುವ ಲಾರಿಯಲ್ಲಿ ಕೆಲವರು ತಮಿಳುನಾಡು ಕಡೆಯಿಂದ ರಾಜ್ಯದೊಳಗೆ ಬರಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕು ಬಿದ್ದರು.
ಅದೇ ರೀತಿ ಬಾಗೇಪಲ್ಲಿ ಕಡೆಯಿಂದ ಆಂಧ್ರದ ಕಡೆಯ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದಾಗಲೂ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದರು.
ಶಿವಮೊಗ್ಗದಲ್ಲಿ ಅಗತ್ಯ ಸೇವೆ ಸಿಬ್ಬಂದಿ ಎಂದು ಸುಳ್ಳು ಹೇಳಿ ಪಾಸ್‌ ಹೊಂದಿರದ ಐವರನ್ನು ಬಂಧಿಸಲಾಗಿದೆ. ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಬೆಳಗಾವಿ,
ಮೈಸೂರು, ಕಲಬುರಗಿ, ಶಿವಮೊಗ್ಗ, ವಿಜಯಪುರ, ಬಳ್ಳಾರಿ ಸೇರಿ ಪ್ರಮುಖ ನಗರಗಳಲ್ಲಿ ಲಾಕ್‌ಡೌನ್‌ ಕಟ್ಟುನಿಟ್ಟಿನ ಜಾರಿ ಮಾಡಲಾಗಿತ್ತಾದರೂ ಗ್ರಾಮೀಣ
ಭಾಗದಲ್ಲಿ ಲಾಕ್‌ಡೌನ್‌ ಬಗ್ಗೆ ಜನ ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಲಾಕ್‌ಡೌನ್‌ ನಡುವೆಯೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಗೌಡಹಳ್ಳಿಯಲ್ಲಿ
ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಗುಂಪುಗಳ ನಡುವೆ ನೀರು ಬಿಡುವ ವಿಚಾರವಾಗಿ ಹೊಡೆದಾಟ ನಡೆದು ಓರ್ವ ಮೃತಪಟ್ಟಿದ್ದಾನೆ.

ಮದ್ಯ ಮಾರಾಟ ಬಂದ್‌ ಆಗಿದ್ದರಿಂದ ಶನಿವಾರವೇ ಖರೀದಿಸಿ ಇಟ್ಟುಕೊಂಡಿದ್ದ ಕೆಲವರು ಕಿರಾಣಿ ಅಂಗಡಿಗಳ ಮೂಲಕ ಮಾರಾಟ ಮಾಡಿದ್ದು ಸಾರ್ವಜನಿಕರ
ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮದ್ಯ ವಶಕ್ಕೆ ಪಡೆದಿದ್ದಾರೆ. ಹಾಸನ ಹಾಗೂ ಮಂಡ್ಯದಲ್ಲಿ ನಮ್ಮ ಕಡೆ ಮಾಂಸ ಚೆನ್ನಾಗಿಲ್ಲ ಎಂದು ಬೇರಡೆ ಮಾಂಸ ಖರೀದಿಸುವ ನೆಪ ಹೇಳಿ ಅಕ್ರಮವಾಗಿ ಮದ್ಯ ಮಾರಾಟ ಸ್ಥಳಕ್ಕೆ ತೆರಳುತ್ತಿದ್ದವರನ್ನು ಪೊಲೀಸರು ತಡೆದು ವಾಪಸ್‌ ಕಳುಹಿಸಿದ ಪ್ರಸಂಗ ನಡೆದಿದೆ.
ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ ಸೇವೆಗೆ ಅವಕಾಶ ಕಲ್ಪಿಸಲಾಗಿತ್ತಾದರೂ ಖರೀದಿಸುವವರಿಲ್ಲದಂತಾಗಿತ್ತು. ಸಂಜೆ ವೇಳೆಗೆ ಹೋಟೆಲ್‌ಗ‌ಳಲ್ಲಿ ಪಾರ್ಸೆಲ್‌ ಸೇವೆಗೆ
ಸ್ವಲ್ಪ ಮಟ್ಟಿನ ಬೇಡಿಕೆ ಬಂದಿತ್ತು. ಲಾಕ್‌ಡೌನ್‌ ನಡುವೆಯೂ ಕೆಲವರು ಓಡಾಟ ನಡೆಸುತ್ತಿದ್ದರಾದರೂ ಮಧ್ಯಾಹ್ನ 3 ಗಂಟೆ ವೇಳಗೆ ಬೆಂಗಳೂರು ಸೇರಿ
ರಾಜ್ಯದ ಕೆಲವೆಡೆ ಮಳೆ ಸುರಿದ ಕಾರಣ ಜನರು ಮನೆಯಿಂದ ಹೊರಗೆ ಬರಲಿಲ್ಲ.

ಮಾಂಸ ಖರೀದಿಗೆ ಮುಗಿಬಿದ್ದ ಜನ
ಭಾನುವಾರದ ಕರ್ಫ್ಯೂ ನಡುವೆಯೂ ಮಾಂಸ ಮಾರಾಟಕ್ಕೆ ಅನುಮತಿ ಇದ್ದ ಕಾರಣ ಕೆಲವು ನಗರಗಳಲ್ಲಿ ಬೆಳಗ್ಗೆ 10 ಗಂಟೆ ವೇಳೆಗೆ ಅಂಗಡಿ ಮುಚ್ಚಲು ಸಹ ಆದೇಶಸಿದ್ದರಿಂದ ಬೆಳ್ಳಂಬೆಳಗ್ಗೆ ಮಾಂಸ ಖರೀದಿಗಾಗಿ ಜನ ಸಾಲು ಗಟ್ಟಿ ನಿಂತಿದ್ದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಈಗಾಗಲೇ 750 ರೂ. ಮುಟ್ಟಿದ್ದ ಮಟನ್‌ ದರ ಭಾನುವಾರ 800 ರೂ.ಗೆ ಏರಿಕೆಯಾಗಿತ್ತು. ಚಿಕನ್‌ ದರ 250 ರಿಂದ 300 ರೂ.ವರೆಗೆ ಮಾರಾಟ ಮಾಡಲಾಯಿತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಅಂಗಡಿ ಮಾಲೀಕರ ನಡುವೆ ಮಾತಿನ ಚಕಮಕಿಯೂ ಕೆಲವೆಡೆ ನಡೆಯಿತು.

ಪೊಲೀಸರಿಂದ ಎಚ್ಚರಿಕೆ
ಸೋಮವಾರ ರಂಜಾನ್‌ ಇದ್ದ ಕಾರಣ ಕೆಲವೆಡೆ ಮಾರುಕಟ್ಟೆಗಳಲ್ಲಿ ಭಾನುವಾರ ಬೆಳಗ್ಗೆ ದಟ್ಟಣೆ ಉಂಟಾಗಿತ್ತು. ಸಾಮಾಜಿಕ ಅಂತರ ಪಾಲನೆಯಾಗಲಿ, ಕಡ್ಡಾಯ ಮಾಸ್ಕ್ ಧರಿಸಿರುವುದು ಕೂಡ ಕಂಡು ಬರಲಿಲ್ಲ. ಈ ಸಂದರ್ಭದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ದಿನಸಿ, ತರಕಾರಿ, ಹಣ್ಣು ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಿದರು. ಮಾರುಕಟ್ಟೆಗೆ ಖರೀದಿಗೆ ಬಂದಿದ್ದ ಸಾರ್ವಜನಿಕರನ್ನೂ ಅಲ್ಲಿಂದ ಜಾಗ ಖಾಲಿ ಮಾಡಿಸಿದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.