ಕನ್ನಡ ರಾಜ್ಯೋತ್ಸವ ; ಪರಭಾಷಿಕರು 100 ಕನ್ನಡ ಪದ ಬಳಸುವಂತೆ ಸುನಿಲ್ ಕುಮಾರ್ ಮನವಿ
Team Udayavani, Oct 19, 2021, 11:44 AM IST
ಬೆಂಗಳೂರು : ಕನ್ನಡ ರಾಜ್ಯೋತ್ಸವ ಈ ಬಾರಿ ಒಂದು ವಾರ ನಡೆಯಲಿದ್ದು, ಕನ್ನಡಕ್ಕಾಗಿ ನಾವು ಅಭಿಯಾನ ಮಾಡಬೇಕು. ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮವನ್ನು ಅ.24 ರಿಂದ 30ರವರೆಗೆ ನಡೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಒಂದು ವಾರ ಆರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡದಲ್ಲೇ ಮಾತನಾಡಿ, ವ್ಯವಹರಿಸಿ ಎಂದು ಹೇಳುವ ಮೂಲಕ ಕನ್ನಡದಲ್ಲೇ ಮಾತಾಡುತ್ತೇವೆ ಎಂಬ ಸಂಕಲ್ಪ ತೋಡೋಣ ಎಂದು ಸುನಿಲ್ ಕುಮಾರ್ ಹೇಳಿದರು.
ಇನ್ನು ಆಡಳಿತದಲ್ಲಿ ಕನ್ನಡ ಮತ್ತಷ್ಟು ಪರಿಣಾಮಕಾರಿ ಮಾಡಬೇಕು. ರಂಗಾಯಣ ಹಾಗೂ ಅಕಾಡೆಮಿ ಬಳಸಿ ವಾರಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಬೇಕು. ಅ.28 ರಂದು ಕನಿಷ್ಠ ಮೂರು ಕನ್ನಡ ಗೀತೆಯನ್ನು, ಲಕ್ಷ ಕಂಠಗಳಲ್ಲಿ, ಒಂದು ಸಾವಿರದ ಕಡೆಗಳಲ್ಲಿ ಸಾಮೂಹಿಕ ಗಾಯನ ನಡೆಸಲಾಗುತ್ತದೆ. ವಿಧಾನಸೌಧ ಮೆಟ್ಟಿಲ ಮೇಲೆಯೂ ನಡೆಯಲಿದೆ ಎಂದರು.
ಲಂಡನ್ ಬಸವ ಪ್ರತಿಮೆ ಸೇರಿ 16 ರಾಷ್ಟ್ರಗಳಲ್ಲಿ ಗಾಯನ ನಡೆಯಲಿದೆ. ಉದ್ಯೋಗ ಶಿಕ್ಷಣಕ್ಕೆ ಬಂದಿರುವ ಹೊರ ರಾಜ್ಯದವರು 100 ಪದ ಕನ್ನಡ ಬಳಸುವಂತೆ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ. ಇನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 4500 ಅರ್ಜಿ ಸಲ್ಲಿಕೆಯಾಗಿದ್ದು, ಆ.28 ಅಥವಾ 29 ಕ್ಕೆ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ