ರಾಜ್ಯಕ್ಕೆ ತಕ್ಷಣ 50 ಸಾವಿರ ಆಂಪೋಟೆರಿಸಿನ್ ಬಿ ಪೂರೈಸಲು ಈಶ್ವರ ಖಂಡ್ರೆ ಆಗ್ರಹ
Team Udayavani, Jun 6, 2021, 4:27 PM IST
ಬೆಂಗಳೂರು: ರಾಜ್ಯಕ್ಕೆ ತಕ್ಷಣವೇ ಕೇಂದ್ರ ಸರ್ಕಾರ 50 ಸಾವಿರ ಆಂಪೋಟೋರಿಸಿನ್ –ಬಿ ಪೂರೈಸುವ ಮೂಲಕ ಕಪ್ಪು ಶಿಲೀಂಧ್ರ ಸೋಂಕಿನಿಂದ ಜೀವನ್ಮರಣ ಹೋರಾಟ ಮಾಡುತ್ತಿರುವ ರಾಜ್ಯದ ಜನತೆಯನ್ನು ರಕ್ಷಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.
ಕೋವಿಡ್ ಸೋಂಕಿತರ, ಮರಣ ಹೊಂದಿದವರ ಸಂಖ್ಯೆಯಲ್ಲಿ ಸುಳ್ಳು ಹೇಳಿದ ಸರ್ಕಾರ ಈಗ, ಕಪ್ಪು ಶಿಲೀಂಧ್ರ ಸೋಂಕಿನಿಂದ ನರಳುತ್ತಿರುವವರ ಮತ್ತು ಸಾವಿಗೀಡಾಗುತ್ತಿರುವವರ ಸಂಖ್ಯೆಯಲ್ಲೂ ಅಸ್ಪಷ್ಟ ಮಾಹಿತಿ ನೀಡುತ್ತಿರುವುದರಿಂದ ರಾಜ್ಯಕ್ಕೆ ಸೂಕ್ತ ಪ್ರಮಾಣದಲ್ಲಿ ಚುಚ್ಚುಮದ್ದು ಹಂಚಿಕೆಯಾಗುತ್ತಿಲ್ಲ, ಇದರಿಂದ ರಾಜ್ಯದಲ್ಲಿ ತೀವ್ರ ಕೊರತೆ ಉಂಟಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ನಿಂದ ಗುಣವಾದ ಎರಡು ಸಾವಿರಕ್ಕೂ ಹೆಚ್ಚು ಜನರಲ್ಲಿ ಕಪ್ಪು ಶಿಲೀಂಧ್ರದ ಸೋಂಕು ಕಾಣಿಸಿಕೊಂಡಿದೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಇವರಿಗೆ ನಿತ್ಯ 4 ರಿಂದ 5 ಆಂಪೋಟೋರಿಸಿನ್ –ಬಿ ಚುಚ್ಚುಮದ್ದು ನೀಡಬೇಕಾಗುತ್ತದೆ. ಆದರೆ, ರಾಜ್ಯಕ್ಕೆ ಪೂರೈಕೆ ಆಗುತ್ತಿರುವುದು ಕೆಲವೇ ಸಾವಿರ, ಹೀಗಾಗಿ ಸೋಂಕಿತರ ಪಾಡು ಹೇಳತೀರದಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬರುವ ದಿನಗಳಲ್ಲಿ ಯಡಿಯೂರಪ್ಪ ಅವರದ್ದೇ ಶ್ರೀರಕ್ಷೆ ಇರಲಿದೆ : ಬೊಮ್ಮಾಯಿ
ರಾಜ್ಯದ ಬೀದರ್ ನಿಂದ ಚಾಮರಾಜನಗರದವರೆಗೆ ಎಲ್ಲ ಕಡೆಯೂ ಆಂಪೋಟೋರಿಸಿನ್ ಬಿ ಚುಚ್ಚುಮದ್ದಿನ ತೀವ್ರ ಕೊರತೆ ಎದುರಾಗಿದೆ. ಆದರೂ ಆರೋಗ್ಯ ಇಲಾಖೆ ಇತ್ತ ಗಮನ ಹರಿಸದಿರುವುದು ನಿಜಕ್ಕೂ ದುರ್ದೈವ, ಇವರಿಗೆ ಜನರ ಕಾಳಜಿಯೇ ಇಲ್ಲವೇ ಎಂದು ಖಂಡ್ರೆ ಪ್ರಶ್ನಿಸಿದ್ದಾರೆ.
ರಾಜ್ಯದ ಸಂಸತ್ ಸದಸ್ಯರೇ ಕೇಂದ್ರ ರಾಸಾಯನಿಕ ಸಚಿವರಾಗಿದ್ದರೂ ಸೂಕ್ತ ಪ್ರಮಾಣದಲ್ಲಿ ಔಷಧ ಹಂಚಿಕೆ ಆಗುತ್ತಿಲ್ಲ. 25 ಬಿಜೆಪಿ ಸಂಸದರು ನಾಡಿನ ಜನರ ಜೀವ ಉಳಿಸಲು ಚುಚ್ಚುಮದ್ದು ಕೇಳಲೂ ಬಾಯಿ ಇಲ್ಲದವರಾಗಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಕನಿಷ್ಠ 50 ಸಾವಿರ ಆಂಪೋಟೆರಿಸಿನ್ –ಬಿ ಪೂರೈಸುವ ಮೂಲಕ 2 ಸಾವಿರ ಸೋಂಕಿತರ ಪ್ರಾಣ ಉಳಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?