ಟ್ವಿಟ್ಟರ್ ಕನ್ನಡ ಅಭಿಯಾನಕ್ಕೆ ಸಿಎಂ ಬೆಂಬಲ
Team Udayavani, May 5, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಬೇಕು ಎಂಬ ನಿಟ್ಟಿನಲ್ಲಿ ಆರಂಭಿಸಿರುವ “ಕರ್ನಾಟಕ ಜಾಬ್ಸ್ ಫಾರ್ ಕನ್ನಡಿಗಾಸ್’ ಟ್ವಿಟ್ಟರ್ ಅಭಿಯಾನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ರಾಜ್ಯದ ಯುವಜನತೆ ರಾಜ್ಯದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ದಕ್ಕಬೇಕು ಎಂದು ಹೋರಾಟ ನಡೆಸುತ್ತಿರುವುದನ್ನು ಗಮನಿಸಿದ್ದೇನೆ. ಕನ್ನಡಿಗರ ಹಕ್ಕೋತ್ತಾಯವನ್ನು ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು ಎಂದು ಟ್ವಿಟ್ಟರ್ ಮೂಲಕ ಹೇಳಿದ್ದಾರೆ.
“ಕರ್ನಾಟಕ ಜಾಬ್ಸ್ ಫಾರ್ ಕನ್ನಡಿಗಾಸ್’ ಎನ್ನುವ ಹ್ಯಾಶ್ಟ್ಯಾಗ್ ಬಳಸುವ ಮೂಲಕ ಕನ್ನಡಿಗರು ಭಾರೀ ಪ್ರಮಾಣದಲ್ಲಿ ಟ್ವೀಟ್ ಮಾಡುತ್ತಿದ್ದಾರೆ. ಈ ಹ್ಯಾಶ್ಟ್ಯಾಗ್ ಟ್ರೆಂಡಿಂಗ್ ಆಗಿದೆ. ರಾಜ್ಯದಲ್ಲಿ ಕನ್ನಡಿಗರಿಗೆ ಸರ್ಕಾರಿ, ಸರ್ಕಾರಿ ಸ್ವಾಮ್ಯ ಹಾಗೂ ಖಾಸಗಿ ವಲಯಗಳಲ್ಲಿ ಉದ್ಯೋಗ ಮೀಸಲಾತಿ ಒದಗಿಸಬೇಕು ಎಂದು ಮೊದಲಿನಿಂದಲೂ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ