ಅಬ್ಬಾ..ಅಂತೂ ಕರ್ನಾಟಕಕ್ಕೆ ಖುಷಿ ಕೊಟ್ಟ ಸುಪ್ರೀಂ “ಕಾವೇರಿ ತೀರ್ಪು”
Team Udayavani, Feb 16, 2018, 10:47 AM IST
ನವದೆಹಲಿ:ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ 14.5ಟಿಎಂಸಿ ಹೆಚ್ಚುವರಿ ನೀರು ಹಂಚಿಕೆ ಮಾಡಿ ಸುಪ್ರೀಂಕೋರ್ಟ್ ಮುಖ್ಯ ನ್ಯಾ.ದೀಪಕ್ ಮಿಶ್ರಾ, ನ್ಯಾ.ಅಮಿತಾವ್ ರಾಯ್ ಮತ್ತು ನ್ಯಾ.ಎಎಂ. ಕಾನ್ವಿಲ್ಕರ್ ವುಳ್ಳ ತ್ರಿಸದಸ್ಯ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದೆ.
192ಟಿಎಂಸಿ ನೀರು ಬಿಡುವ ಬದಲು 177 ಟಿಎಂಸಿ ನೀರನ್ನು ತಮಿಳುನಾಡಿಗೆ(ಇದನ್ನೂ ಓದಿ: ಕಾವೇರಿ ಪಾಲೆಷ್ಟು?ಇಂದು ಸುಪ್ರೀಂನಲ್ಲಿ ಅಂತಿಮ ತೀರ್ಪು) ಬಿಡಲು ಪೀಠ ಆದೇಶ ನೀಡಿದೆ. ತಮಿಳುನಾಡಿಗೆ 14.5 ಟಿಎಂಸಿ ನೀರನ್ನು ಕಡಿತಗೊಳಿಸಿದೆ.
ಕರ್ನಾಟಕದ ವಾದವನ್ನು ಭಾಗಶಃ ಒಪ್ಪಿದಂತಾಗಿದೆ. 1892 ಹಾಗೂ 1924ರ ಎರಡೂ ಒಪ್ಪಂದಗಳೂ ಸಿಂಧುವಾಗಿದೆ ಎಂದು ಹೇಳಿದೆ. ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರದ ಕೆಲಸ ಎಂದು ಸ್ಪಷ್ಟವಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಕೇಂದ್ರವೇ ಮಂಡಳಿ ರಚಿಸಬೇಕೆಂಬ ಕರ್ನಾಟಕದ ವಾದಕ್ಕೆ ಗೆಲುವು ಸಿಕ್ಕಂತಾಗಿದೆ.
ಮುಂದಿನ 15 ವರ್ಷಗಳಿಗೆ ಟ್ರಿಬ್ಯೂನಲ್ ತೀರ್ಪು ಅನ್ವಯ. 15 ವರ್ಷಗಳ ಬಳಿಕ ಈ ತೀರ್ಪನ್ನು ಸುಪ್ರೀಂಕೋರ್ಟ್ ಮರುಪರಿಶೀಲಿಸಬಹುದು. ಬೆಂಗಳೂರಿಗೆ 4.75ಟಿಎಂಸಿ ನೀರು ಹಂಚಿಕೆಗೆ ಸುಪ್ರೀಂ ಆದೇಶ ನೀಡಿದೆ.
ಕಾವೇರಿ ಕೊಳ್ಳದ ಅಚ್ಚುಕಟ್ಟು ಪ್ರದೇಶದ ವಿಸ್ತರಣೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ. ಸಮಾನ ಹಂಚಿಕೆ ತತ್ವ ಪಾಲಿಸುವಂತೆ ಎರಡೂ ರಾಜ್ಯಗಳಿಗೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ