ಸರ್ಕಾರಿ ಸೇವೆ ವಿಳಂಬಕ್ಕೆ ಪರಿಹಾರ ಪಡೆಯುವುದು ಜನರ ಹಕ್ಕು: ಸುರೇಶ್ ಕುಮಾರ್


Team Udayavani, Nov 30, 2020, 3:00 PM IST

ಸರ್ಕಾರಿ ಸೇವೆ ವಿಳಂಬಕ್ಕೆ ಪರಿಹಾರ ಪಡೆಯುವುದು ಜನರ ಹಕ್ಕು: ಸುರೇಶ್ ಕುಮಾರ್

ಬೆಂಗಳೂರು: ಸರ್ಕಾರದಿಂದ ದೊರೆಯಬಹುದಾದ ಸೇವೆಗಳನ್ನು ಪಡೆಯುವುದು ಮತ್ತು ಸೇವೆಗಳು ವಿಳಂಬವಾದರೆ ಆ ಕುರಿತು ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿರುವುದರಿಂದ ಸಾರ್ವಜನಿಕರು ಈ ಕುರಿತು ಹೆಚ್ಚು ಜಾಗೃತರಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಸೋಮವಾರ ವಿಧಾನಸೌಧದಲ್ಲಿ ನ.30ರಿಂದ ಡಿ. 5ರವರಗೆ ನಡೆಯುವ ಸಕಾಲ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ನಂತರ ಸಕಾಲ ಸೇವೆಗಳಲ್ಲಿ ಸ್ವಲ್ಪ ವ್ಯತ್ಯಯವಾಗಿದ್ದು, ಅದಕ್ಕೆ ಚುರುಕು ನೀಡಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಪಡೆಯಲು ಅನುವಾಗುವಂತೆ ಸಕಾಲ ಸೇವೆಗಳ ಕುರಿತು ಜಾಗೃತಿ ಮೂಡಿಸಲು ಸಪ್ತಾಹ ಆಚರಿಸಲಾಗುತ್ತಿದೆ ಎಂದರು.

ಲಭ್ಯ ಸೇವೆ ಪಡೆಯುವುದು ಸಾರ್ವಜನಿಕರ ಹಕ್ಕು ಆಗಿರುವಂತೆಯೇ ಸಕಾಲದಲ್ಲಿ ಅದನ್ನು ಒದಗಿಸುವುದು ಯಾವುದೇ ಸರ್ಕಾರದ ಹಾಗೆಯೇ ವ್ಯವಸ್ಥೆಯ ಕರ್ತವ್ಯವಾಗಿರುವುದರಿಂದ ಇದರ ಸಾಕಾರಕ್ಕೆ ಸಕಾಲ ಸೇವೆ ಜಾರಿಗೆ ಬಂದಿದ್ದು, ಅದನ್ನು ಇನ್ನಷ್ಟು ಚುರುಕುಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡುವುದು ಸಪ್ತಾಹದ ಉದ್ದೇಶವಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಯಾವುದೇ ಸೇವೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು.  ವಿಳಂಬದಿಂದ ಸಕಾಲದ ಯೋಜನೆಯ ಉದ್ದೇಶ ಫಲಪ್ರದವಾಗುವುದಿಲ್ಲ. ಅರ್ಜಿ ನಿರಾಕರಿಸುವುದು, ಸಕಾಲ ಯೋಜನೆ ಮೂಲಕ ಅರ್ಜಿ ಸ್ವೀಕರಿಸದೇ ಇರುವುದು, ವಿನಾಕಾರಣ ಅರ್ಜಿ ತಿರಸ್ಕರಿಸುವುದು, ಉದ್ದೇಶಪೂರ್ವಕ ವಿಳಂಬ ಮಾಡುವಂತಹ ಪ್ರಕರಣಗಳು ಕಂಡುಬರುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕುವುದುರೊಂದಿಗೆ ಎಂದು ಸುರೇಶ್ ಕುಮಾರ್ ಹೇಳಿದರು.

ಇದನ್ನೂ ಓದಿ:ಗ್ರಾ.ಪಂ ಚುನಾವಣೆಗೆ ದಿನ ನಿಗದಿ:ಯಾವ ತಾಲೂಕಿನಲ್ಲಿ ಯಾವಾಗ ಚುನಾವಣೆ?ಇಲ್ಲಿದೆ ಸಂಪೂರ್ಣ ಪಟ್ಟಿ

ಸಕಾಲ ಸೇವೆ ಯೋಜನೆ ಅರಂಭವಾದಂದಿನಿಂದ ಈ ತನಕ 22,88,81,652 ಅರ್ಜಿಗಳು ಬಂದಿದ್ದು, ಅದರಲ್ಲಿ 22,82,55,686 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.  ಕಳೆದ ಅಕ್ಟೋಬರ್ ನಲ್ಲಿ ಸಕಾಲ ಅರ್ಜಿ ವಿಲೇವಾರಿಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ, ಚಿಕ್ಕಮಗಳೂರು ದ್ವಿತೀಯ, ಚಿಕ್ಕಬಳ್ಳಾಪುರ ತೃತೀಯ ಸ್ಥಾನ ಪಡೆದರೆ, ರಾಯಚೂರು, ಬೀದರ್ ಮತ್ತು ಬೆಂಗಳೂರು ನಗರ ಕೊನೆಯ  ಮೂರು ಸ್ಥಾನದಲ್ಲಿವೆ  ಎಂದು ಸಚಿವರು ಹೇಳಿದರು.

ವಿಶೇಷವಾಗಿ ಪ್ರತಿಯೊಂದು ಇಲಾಖಾ ಕಚೇರಿಯಲ್ಲೂ ಸಕಾಲ ಸೇವೆ ಪಡೆಯುವ ಕುರಿತು ಸಾರ್ವಜನಿಕರ ಗಮನಕ್ಕೆ ಬರುವಂತೆ ಫಲಕ ಹಾಕುವುದು ಕಡ್ಡಾಯವಾಗಿದ್ದು, ಸಕಾಲ ಸೇವೆಗಳು ಇರುವ ಕುರಿತಂತೆ ಇಲಾಖೆಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಹಾಗೆಯೇ ಸೇವೆಯ ವಿಳಂಬದ ಕುರಿತು ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯುವ ಕುರಿತು ಜಾಗೃತಿ ಮೂಡಿಸುವುದು ಇಲಾಖೆಗಳ ಕರ್ತವ್ಯವಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.