ಸರ್ಜಿಕಲ್ ಸ್ಟ್ರೈಕ್ ಬಿಜೆಪಿ ನಡವಳಿಕೆಗೆ ಕಾಂಗ್ರೆಸ್ ಆಕ್ಷೇಪ
Team Udayavani, Feb 27, 2019, 12:57 AM IST
ಬೆಂಗಳೂರು: ಉಗ್ರರ ನೆಲೆಗಳ ಮೇಲೆ ದಾಳಿಯಾಗಿರುವುದನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ತಾನೇ ಯುದ್ಧ ಗೆದ್ದಂತೆ ಪ್ರಚಾರ ಪಡೆಯುತ್ತಿದೆ. ಯುಪಿಎ ಅಧಿಕಾರ ಅವಧಿಯಲ್ಲಿ ಏಳು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಲಾಗಿದ್ದು, ಎನ್ಡಿಎ ಅವಧಿಯಲ್ಲಿ ಮೂರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಗೆ ತಿರುಗೇಟು ನೀಡಿದೆ.
ಪಾಕ್ನಲ್ಲಿ ನೆಲೆಸಿರುವ ಉಗ್ರರ ನೆಲೆಯ ಮೇಲೆ ದಾಳಿ ಮಾಡಿರುವ ಮಿರಾಜ್ -2000 ಯುದ್ಧ ವಿಮಾನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನ ಎಚ್ ಎಎಲ್ ನಿರ್ಮಿಸಿದೆ. ಕೇಂದ್ರ ರಕ್ಷಣಾ ಸಚಿವೆಗೆ ಎಚ್ಎಎಲ್ನ ಸಾಮರ್ಥ್ಯ ಏನು ಎಂಬುವುದು ಈಗಲಾದರೂ ಅರ್ಥವಾಗಲಿ. ಕಾಂಗ್ರೆಸ್ ಸರ್ಕಾರದಲ್ಲಿ ತಯಾರಿಸಲಾದ ಶಸ್ತ್ರಾಸ್ತ್ರಗಳು ಸೇನಾ ದಾಳಿಯ ನೆರವಿಗೆ ಬಂದಿವೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಸಮರ್ಥಿಸಿಕೊಂಡಿದೆ.
ಅಲ್ಲದೇ ಹಿಂದೆ ಸರ್ಜಿಕಲ್ ಸ್ಟ್ರೈಕ್ ಹಾಗೂ ಯುದ್ದಗಳು ನಡೆದಾಗ ಗೆಲುವಿನ ಕಿರೀಟವನ್ನು ಭಾರತೀಯ ಸೈನಿಕರಿಗೆ ನೀಡಲಾಗುತ್ತಿತ್ತು. ಈಗ ಉರಿ ಘಟನೆಯ ನಂತರ ಅದನ್ನು ಬಿಜೆಪಿ ಸಾಧನೆ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಟ್ವೀಟ್ ಮೂಲಕ ಬಿಜೆಪಿ ನಡವಳಿಕೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ