ಸುರ್ಜೇವಾಲಾ ಸಂಧಾನ: ಭಿನ್ನಮತ ಮರೆಯಲು ಮುಂದಾದ ಡಿಕೆಶಿ- ಸಿದ್ದರಾಮಯ್ಯ
ಎರಡು ಧ್ರುವಗಳ ಮಧ್ಯೆ ಹೊಂದಾಣಿಕೆ ಸಮಸ್ಯೆ ಸೃಷ್ಟಿಯಾಗಬಾರದು
Team Udayavani, Jun 2, 2022, 6:12 PM IST
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವಿನ ತಿಕ್ಕಾಟಕ್ಕೆ ಇತಿಶ್ರೀ ಹಾಡುವುದಕ್ಕೆ ಈಗ ವೇದಿಕೆ ಸಿದ್ದವಾಗಿದ್ದು, ಇಬ್ಬರ ಮಧ್ಯೆ ಮೊದಲ ಹಂತದ ಸಂಧಾನ ಸಭೆ ಗುರುವಾರ ನಡೆದಿದೆ.
ಬೆಂಗಳೂರಿನ ಹೊರವಲಯದ ಖಾಸಗಿ ಹೊಟೇಲ್ ನಲ್ಲಿ ನಡೆಯುತ್ತಿರುವ ಚಿಂತನಾಸಭೆಯಲ್ಲೇ ಈ ಸಂಧಾನಸಭೆ ನಡೆದಿದೆ. ಚುನಾವಣಾ ಹೊಸ್ತಿಲಲ್ಲಿ ಪಕ್ಷದ ಎರಡು ಧ್ರುವಗಳ ಮಧ್ಯೆ ಹೊಂದಾಣಿಕೆ ಸಮಸ್ಯೆ ಸೃಷ್ಟಿಯಾಗಬಾರದೆಂಬ ಕಾರಣಕ್ಕೆ ವರಿಷ್ಠರ ಸೂಚನೆ ಮೇರೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಈ ಸಭೆ ಆಯೋಜನೆಯಾಗಿತ್ತು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಇದನ್ನೂ ಓದಿ: ರಾಜ್ಯಸಭೆ ಮೂರನೇ ಅಭ್ಯರ್ಥಿಯೂ ಗೆಲ್ಲುತ್ತಾರೆ, ಕಾದು ನೋಡಿ : ಸಿ.ಟಿ.ರವಿ
ಸುರ್ಜೇವಾಲಾ, ದಿನೇಶ್ ಗುಂಡೂರಾವ್, ಚಲುವರಾಯಸ್ವಾಮಿ ಸಮ್ಮುಖದಲ್ಲಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಸಂಧಾನ ಸಭೆ ನಡೆದಿದೆ. ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆದಿದೆ. ಸಣ್ಣಪುಟ್ಟ ಮನಸ್ತಾಪಗಳನ್ನು ಮರೆತು ಒಂದಾಗುವ ಪ್ರಸ್ತಾಪ ವ್ಯಕ್ತವಾಗಿದೆ. ಸಭೆಯ ಮಧ್ಯೆಯೇ ಇವರಿಬ್ಬರನ್ನು ಸುಮಾರು ಒಂದು ಗಂಟೆ ಕಾಲ ಆಚೆ ಕರೆದೊಯ್ದು ಚರ್ಚೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ರಾಜ್ಯಸಭಾ ಚುನಾವಣೆ ಎರಡನೇ ಅಭ್ಯರ್ಥಿಯನ್ನು ವಾಪಾಸ್ ತೆಗೆದುಕೊಳ್ಳುವ ಬಗ್ಗೆಯೂ ಮಾತುಕತೆಯಾಗಿದ್ದು ಸಿದ್ದರಾಮಯ್ಯ ಸಲಹೆ ಪ್ರಕಾರ ಜೆಡಿಎಸ್ ಜತೆ ಅಂತರ ಕಾಯ್ದುಕೊಳ್ಳುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ