Drought:ಬರಗಾಲದ ಪರಿಹಾರ ಕುರಿತು ಸಮೀಕ್ಷೆ; ಎನ್.ಡಿ.ಆರ್.ಎಫ್ ಪ್ರಕಾರ ಪರಿಹಾರ: ಮುಖ್ಯಮಂತ್ರಿ


Team Udayavani, Nov 29, 2023, 3:07 PM IST

11-cm

ಹಾವೇರಿ: ನಿಗಮ ಮಂಡಳಿ ಆಯ್ಕೆ ಕುರಿತು ಚರ್ಚೆ ಮಾಡಿ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ. ನಾನು, ಸುರ್ಜೆವಾಲಾ, ಡಿ.ಕೆ.ಶಿವಕುಮಾರ್ ಕುಳಿತು ಚರ್ಚೆ ಮಾಡುತ್ತೇವೆ. ಹೈಕಮಾಂಡ್ ನವರು ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕಾಗಿನೆಲೆಯ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಶಾಸಕ‌ ಬಿ.ಆರ್.ಪಾಟೀಲ ರಾಜೀನಾಮೆ ಪತ್ರದ ಕುರಿತು ಈಗಾಗಲೇ ಬೆಳಗ್ಗೆ ದೂರವಾಣಿ ಮೂಲಕ ಅವರೊಂದಿಗೆ ಮಾತನಾಡಿದ್ದೇನೆ. ಸಂಜೆ ಬೆಂಗಳೂರಿಗೆ ಬರಲು ಹೇಳಿದ್ದೇನೆ. ಅಲ್ಲಿ ಚರ್ಚಿಸುತ್ತೇನೆ ಎಂದರು.

ಹೈಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಗೆ ರಿಲೀಫ್ ಕುರಿತು ಮಾತನಾಡಿದ‌ ಸಿಎಂ, ಸಿಬಿಐ ತನಿಖೆ ಮಾಡಬೇಕು ಎಂಬುದನ್ನು ನಾವು ವಾಪಸ್ ತೆಗೆದುಕೊಂಡಿದ್ದೇವೆ. ಅದು ಕಾನೂನು ಪ್ರಕಾರ ಇಲ್ಲ. ಈ ಹಿಂದಿನ ಸರ್ಕಾರ ಕಾನೂನು ಬಾಹಿರವಾಗಿ ಮಾಡಿತ್ತು ಎಂದು ಹೇಳಿಸರು.

ಬರಗಾಲದ ಪರಿಹಾರ ಕುರಿತು ಸಮೀಕ್ಷೆ ಮಾಡುತ್ತಿದ್ದೇವೆ. ಎನ್ ಡಿ ಆರ್ ಎಫ್ ಪ್ರಕಾರ ಪರಿಹಾರ ಕೊಡುತ್ತೇವೆ. ಆದರೆ, ಕೇಂದ್ರ ಸರ್ಕಾರ ಒಂದು ನಯಾಪೈಸೆ ಕೊಡುತ್ತಿಲ್ಲ. ರೈತರು ಕಷ್ಟದಲ್ಲಿ ಇದ್ದಾರೆ. ಪರಿಹಾರ ಕೇಳುತ್ತಿದ್ದಾರೆ. ನಮ್ಮ ತೆರಿಗೆ ಹಣ ನಮಗೆ ಕೊಡಲು ಕೇಂದ್ರ ಒಪ್ಪುತ್ತಿಲ್ಲ ಎಂದರು.

ನಾವು ಕುಡಿಯುವ ನೀರಿಗೆ, ಮೇವಿಗೆ ಹಣ ಕೊಟ್ಟಿದ್ದೇವೆ. ನಾವು ಏನೂ ಮಾಡದೇ ಕುಳಿತಿಲ್ಲ. ಜಿಲ್ಲಾಧಿಕಾರಿಗಳಿಗೆ, ಮಂತ್ರಿಗಳಿಗೆ ಸೂಚನೆ ಕೊಟ್ಟಿದ್ದೇನೆ.ಬರಗಾಲದ ಬಗ್ಗೆ ಸಭೆ ನಡೆಸಬೇಕು. ಯಾರಿಗೂ ತೊಂದರೆ ಆಗಬಾರದು, ಸಮೀಕ್ಷೆ ಮಾಡಬೇಕು ಎಂದು ಹೇಳಿದರು.

ಜನಗಳಿಗೆ ಬರಗಾಲದಲ್ಲಿ ನರೇಗಾ ಯೋಜನೆಯಡಿ ನೂರು ದಿನದ ಬದಲು 150 ದಿನ ಕೆಲಸ ಕೊಡಬೇಕು ಎಂಬ ನಿಯಮವಿದೆ. ಆದರೆ, ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಕೊಡುತ್ತಿಲ್ಲ ಎಂದ ಅವರು, ಇಡೀ ದೇಶದಲ್ಲಿ ಹನ್ನೆರಡು ರಾಜ್ಯದಲ್ಲಿ ಬರಗಾಲ ಇದೆ. ಯಾವ ರಾಜ್ಯಕ್ಕೂ ಪರಿಹಾರ ಹಾಗೂ ಅನುಮತಿ ಕೊಟ್ಟಿಲ್ಲ. ಕೇಂದ್ರದಿಂದ ಬರಗಾಲ ತಂಡ ಅಧ್ಯಯನ ಮಾಡಿ ವರದಿ ಕೊಟ್ಟಿದೆ. ಆದರೂ ಪರಿಹಾರ ಕೊಟ್ಟಿಲ್ಲ ಎಂದರು.

ಇಲ್ಲಿಯ ಬಿಜೆಪಿಯವರು ಹೇಳುತ್ತಾರೆ. ಅವರಿಗೆ ಯಾಕೆ ನೋಡುತ್ತೀರಿ ಅಂತಾ. ಆದರೆ ನಾವು ಆ ಕಡೆ ನೋಡುವುದಿಲ್ಲ. ನಮಗೆ ಬರಬೇಕಾಗಿರುವ ಪರಿಹಾರ ಬರಬೇಕಲ್ಲ‌ ಎಂದು ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಬಗೆಗಿನ ವಿಚಾರ, ವಿರೋಧ ಪಕ್ಷದವರು ಏನು ಪ್ರಸ್ತಾಪ ಮಾಡುತ್ತಾರೆ. ಅದಕ್ಕೆ ನಾವು ಉತ್ತರ ಕೊಡುವುದಕ್ಕೆ ತಯಾರಿದ್ದೇವೆ ಎಂದು ಹೇಳಿದ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತೇವೆ ಎಂದರು.

ಸಿಎಂ ವಕೀಲರಾಗಿ ಡಿಕೆಶಿ ಕೇಸ್ ವಾಪಸ್ ಪಡೆದಿದ್ದು, ಎಷ್ಟರ ಮಟ್ಟಿಗೆ ಸರಿ ಎಂಬ ಎಚ್ ಡಿಕೆ ಹೇಳಿಕೆ ಕುರಿತು ಸಿಎಂ ಪ್ರತಿಕ್ರಿಯಿಸಿ, ನಾವು ವಕೀಲರಾಗಿ ಇರೋದಕ್ಕೆ ವಾಪಸ್ ಪಡೆದಿದ್ದೇವೆ. ಅವರ ವಕೀಲರು ಅಲ್ಲ. ಕಾನೂನು ಪ್ರಕಾರ ಇಲ್ಲ ಎಂಬ ಕಾರಣಕ್ಕೆ ವಾಪಸ್ ಪಡೆದಿದ್ದೇವೆ.

ವಕೀಲರಾಗಿ ಇರುವುದಕ್ಕೆ ವಾಪಸ್ ಪಡೆದಿದ್ದೇವೆ. ಇಲ್ಲ ಎಂದರೆ ಯಡಿಯೂರಪ್ಪ, ಕುಮಾರಸ್ವಾಮಿ ರೀತಿಯಲ್ಲಿ ನಾನೂ ಇರುತ್ತಿದ್ದೆ ಎಂದು ಕುಟುಕಿದರು.

Ad

ಟಾಪ್ ನ್ಯೂಸ್

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

BIGG BOSS: ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼಬಿಗ್‌ ಬಾಸ್‌ʼ

ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼBigg Bossʼ: ಈ ಬಾರಿ ಮೂವರು ನಿರೂಪಕರು?

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

Parameshawar

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್‌

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

10

Kota: ಯಡ್ತಾಡಿ ಕಂಬಳ ಗದ್ದೆಯ ಸಾಂಪ್ರದಾಯಿಕ ನಾಟಿ: ನೂರಕ್ಕೂ ಅಧಿಕ ಮಹಿಳೆಯರು ಭಾಗಿ!

9

Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು

8

Kundapura: ಶತಮಾನದ ಹೊಸ್ತಿಲಲ್ಲಿರುವ ಕೊಡ್ಲಾಡಿ ಶಾಲೆಗೆ ಬೇಕು ಕೊಠಡಿ

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.