Drought:ಬರಗಾಲದ ಪರಿಹಾರ ಕುರಿತು ಸಮೀಕ್ಷೆ; ಎನ್.ಡಿ.ಆರ್.ಎಫ್ ಪ್ರಕಾರ ಪರಿಹಾರ: ಮುಖ್ಯಮಂತ್ರಿ


Team Udayavani, Nov 29, 2023, 3:07 PM IST

11-cm

ಹಾವೇರಿ: ನಿಗಮ ಮಂಡಳಿ ಆಯ್ಕೆ ಕುರಿತು ಚರ್ಚೆ ಮಾಡಿ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ. ನಾನು, ಸುರ್ಜೆವಾಲಾ, ಡಿ.ಕೆ.ಶಿವಕುಮಾರ್ ಕುಳಿತು ಚರ್ಚೆ ಮಾಡುತ್ತೇವೆ. ಹೈಕಮಾಂಡ್ ನವರು ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕಾಗಿನೆಲೆಯ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಶಾಸಕ‌ ಬಿ.ಆರ್.ಪಾಟೀಲ ರಾಜೀನಾಮೆ ಪತ್ರದ ಕುರಿತು ಈಗಾಗಲೇ ಬೆಳಗ್ಗೆ ದೂರವಾಣಿ ಮೂಲಕ ಅವರೊಂದಿಗೆ ಮಾತನಾಡಿದ್ದೇನೆ. ಸಂಜೆ ಬೆಂಗಳೂರಿಗೆ ಬರಲು ಹೇಳಿದ್ದೇನೆ. ಅಲ್ಲಿ ಚರ್ಚಿಸುತ್ತೇನೆ ಎಂದರು.

ಹೈಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಗೆ ರಿಲೀಫ್ ಕುರಿತು ಮಾತನಾಡಿದ‌ ಸಿಎಂ, ಸಿಬಿಐ ತನಿಖೆ ಮಾಡಬೇಕು ಎಂಬುದನ್ನು ನಾವು ವಾಪಸ್ ತೆಗೆದುಕೊಂಡಿದ್ದೇವೆ. ಅದು ಕಾನೂನು ಪ್ರಕಾರ ಇಲ್ಲ. ಈ ಹಿಂದಿನ ಸರ್ಕಾರ ಕಾನೂನು ಬಾಹಿರವಾಗಿ ಮಾಡಿತ್ತು ಎಂದು ಹೇಳಿಸರು.

ಬರಗಾಲದ ಪರಿಹಾರ ಕುರಿತು ಸಮೀಕ್ಷೆ ಮಾಡುತ್ತಿದ್ದೇವೆ. ಎನ್ ಡಿ ಆರ್ ಎಫ್ ಪ್ರಕಾರ ಪರಿಹಾರ ಕೊಡುತ್ತೇವೆ. ಆದರೆ, ಕೇಂದ್ರ ಸರ್ಕಾರ ಒಂದು ನಯಾಪೈಸೆ ಕೊಡುತ್ತಿಲ್ಲ. ರೈತರು ಕಷ್ಟದಲ್ಲಿ ಇದ್ದಾರೆ. ಪರಿಹಾರ ಕೇಳುತ್ತಿದ್ದಾರೆ. ನಮ್ಮ ತೆರಿಗೆ ಹಣ ನಮಗೆ ಕೊಡಲು ಕೇಂದ್ರ ಒಪ್ಪುತ್ತಿಲ್ಲ ಎಂದರು.

ನಾವು ಕುಡಿಯುವ ನೀರಿಗೆ, ಮೇವಿಗೆ ಹಣ ಕೊಟ್ಟಿದ್ದೇವೆ. ನಾವು ಏನೂ ಮಾಡದೇ ಕುಳಿತಿಲ್ಲ. ಜಿಲ್ಲಾಧಿಕಾರಿಗಳಿಗೆ, ಮಂತ್ರಿಗಳಿಗೆ ಸೂಚನೆ ಕೊಟ್ಟಿದ್ದೇನೆ.ಬರಗಾಲದ ಬಗ್ಗೆ ಸಭೆ ನಡೆಸಬೇಕು. ಯಾರಿಗೂ ತೊಂದರೆ ಆಗಬಾರದು, ಸಮೀಕ್ಷೆ ಮಾಡಬೇಕು ಎಂದು ಹೇಳಿದರು.

ಜನಗಳಿಗೆ ಬರಗಾಲದಲ್ಲಿ ನರೇಗಾ ಯೋಜನೆಯಡಿ ನೂರು ದಿನದ ಬದಲು 150 ದಿನ ಕೆಲಸ ಕೊಡಬೇಕು ಎಂಬ ನಿಯಮವಿದೆ. ಆದರೆ, ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಕೊಡುತ್ತಿಲ್ಲ ಎಂದ ಅವರು, ಇಡೀ ದೇಶದಲ್ಲಿ ಹನ್ನೆರಡು ರಾಜ್ಯದಲ್ಲಿ ಬರಗಾಲ ಇದೆ. ಯಾವ ರಾಜ್ಯಕ್ಕೂ ಪರಿಹಾರ ಹಾಗೂ ಅನುಮತಿ ಕೊಟ್ಟಿಲ್ಲ. ಕೇಂದ್ರದಿಂದ ಬರಗಾಲ ತಂಡ ಅಧ್ಯಯನ ಮಾಡಿ ವರದಿ ಕೊಟ್ಟಿದೆ. ಆದರೂ ಪರಿಹಾರ ಕೊಟ್ಟಿಲ್ಲ ಎಂದರು.

ಇಲ್ಲಿಯ ಬಿಜೆಪಿಯವರು ಹೇಳುತ್ತಾರೆ. ಅವರಿಗೆ ಯಾಕೆ ನೋಡುತ್ತೀರಿ ಅಂತಾ. ಆದರೆ ನಾವು ಆ ಕಡೆ ನೋಡುವುದಿಲ್ಲ. ನಮಗೆ ಬರಬೇಕಾಗಿರುವ ಪರಿಹಾರ ಬರಬೇಕಲ್ಲ‌ ಎಂದು ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಬಗೆಗಿನ ವಿಚಾರ, ವಿರೋಧ ಪಕ್ಷದವರು ಏನು ಪ್ರಸ್ತಾಪ ಮಾಡುತ್ತಾರೆ. ಅದಕ್ಕೆ ನಾವು ಉತ್ತರ ಕೊಡುವುದಕ್ಕೆ ತಯಾರಿದ್ದೇವೆ ಎಂದು ಹೇಳಿದ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತೇವೆ ಎಂದರು.

ಸಿಎಂ ವಕೀಲರಾಗಿ ಡಿಕೆಶಿ ಕೇಸ್ ವಾಪಸ್ ಪಡೆದಿದ್ದು, ಎಷ್ಟರ ಮಟ್ಟಿಗೆ ಸರಿ ಎಂಬ ಎಚ್ ಡಿಕೆ ಹೇಳಿಕೆ ಕುರಿತು ಸಿಎಂ ಪ್ರತಿಕ್ರಿಯಿಸಿ, ನಾವು ವಕೀಲರಾಗಿ ಇರೋದಕ್ಕೆ ವಾಪಸ್ ಪಡೆದಿದ್ದೇವೆ. ಅವರ ವಕೀಲರು ಅಲ್ಲ. ಕಾನೂನು ಪ್ರಕಾರ ಇಲ್ಲ ಎಂಬ ಕಾರಣಕ್ಕೆ ವಾಪಸ್ ಪಡೆದಿದ್ದೇವೆ.

ವಕೀಲರಾಗಿ ಇರುವುದಕ್ಕೆ ವಾಪಸ್ ಪಡೆದಿದ್ದೇವೆ. ಇಲ್ಲ ಎಂದರೆ ಯಡಿಯೂರಪ್ಪ, ಕುಮಾರಸ್ವಾಮಿ ರೀತಿಯಲ್ಲಿ ನಾನೂ ಇರುತ್ತಿದ್ದೆ ಎಂದು ಕುಟುಕಿದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.