Drought:ಬರಗಾಲದ ಪರಿಹಾರ ಕುರಿತು ಸಮೀಕ್ಷೆ; ಎನ್.ಡಿ.ಆರ್.ಎಫ್ ಪ್ರಕಾರ ಪರಿಹಾರ: ಮುಖ್ಯಮಂತ್ರಿ


Team Udayavani, Nov 29, 2023, 3:07 PM IST

11-cm

ಹಾವೇರಿ: ನಿಗಮ ಮಂಡಳಿ ಆಯ್ಕೆ ಕುರಿತು ಚರ್ಚೆ ಮಾಡಿ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ. ನಾನು, ಸುರ್ಜೆವಾಲಾ, ಡಿ.ಕೆ.ಶಿವಕುಮಾರ್ ಕುಳಿತು ಚರ್ಚೆ ಮಾಡುತ್ತೇವೆ. ಹೈಕಮಾಂಡ್ ನವರು ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕಾಗಿನೆಲೆಯ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಶಾಸಕ‌ ಬಿ.ಆರ್.ಪಾಟೀಲ ರಾಜೀನಾಮೆ ಪತ್ರದ ಕುರಿತು ಈಗಾಗಲೇ ಬೆಳಗ್ಗೆ ದೂರವಾಣಿ ಮೂಲಕ ಅವರೊಂದಿಗೆ ಮಾತನಾಡಿದ್ದೇನೆ. ಸಂಜೆ ಬೆಂಗಳೂರಿಗೆ ಬರಲು ಹೇಳಿದ್ದೇನೆ. ಅಲ್ಲಿ ಚರ್ಚಿಸುತ್ತೇನೆ ಎಂದರು.

ಹೈಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಗೆ ರಿಲೀಫ್ ಕುರಿತು ಮಾತನಾಡಿದ‌ ಸಿಎಂ, ಸಿಬಿಐ ತನಿಖೆ ಮಾಡಬೇಕು ಎಂಬುದನ್ನು ನಾವು ವಾಪಸ್ ತೆಗೆದುಕೊಂಡಿದ್ದೇವೆ. ಅದು ಕಾನೂನು ಪ್ರಕಾರ ಇಲ್ಲ. ಈ ಹಿಂದಿನ ಸರ್ಕಾರ ಕಾನೂನು ಬಾಹಿರವಾಗಿ ಮಾಡಿತ್ತು ಎಂದು ಹೇಳಿಸರು.

ಬರಗಾಲದ ಪರಿಹಾರ ಕುರಿತು ಸಮೀಕ್ಷೆ ಮಾಡುತ್ತಿದ್ದೇವೆ. ಎನ್ ಡಿ ಆರ್ ಎಫ್ ಪ್ರಕಾರ ಪರಿಹಾರ ಕೊಡುತ್ತೇವೆ. ಆದರೆ, ಕೇಂದ್ರ ಸರ್ಕಾರ ಒಂದು ನಯಾಪೈಸೆ ಕೊಡುತ್ತಿಲ್ಲ. ರೈತರು ಕಷ್ಟದಲ್ಲಿ ಇದ್ದಾರೆ. ಪರಿಹಾರ ಕೇಳುತ್ತಿದ್ದಾರೆ. ನಮ್ಮ ತೆರಿಗೆ ಹಣ ನಮಗೆ ಕೊಡಲು ಕೇಂದ್ರ ಒಪ್ಪುತ್ತಿಲ್ಲ ಎಂದರು.

ನಾವು ಕುಡಿಯುವ ನೀರಿಗೆ, ಮೇವಿಗೆ ಹಣ ಕೊಟ್ಟಿದ್ದೇವೆ. ನಾವು ಏನೂ ಮಾಡದೇ ಕುಳಿತಿಲ್ಲ. ಜಿಲ್ಲಾಧಿಕಾರಿಗಳಿಗೆ, ಮಂತ್ರಿಗಳಿಗೆ ಸೂಚನೆ ಕೊಟ್ಟಿದ್ದೇನೆ.ಬರಗಾಲದ ಬಗ್ಗೆ ಸಭೆ ನಡೆಸಬೇಕು. ಯಾರಿಗೂ ತೊಂದರೆ ಆಗಬಾರದು, ಸಮೀಕ್ಷೆ ಮಾಡಬೇಕು ಎಂದು ಹೇಳಿದರು.

ಜನಗಳಿಗೆ ಬರಗಾಲದಲ್ಲಿ ನರೇಗಾ ಯೋಜನೆಯಡಿ ನೂರು ದಿನದ ಬದಲು 150 ದಿನ ಕೆಲಸ ಕೊಡಬೇಕು ಎಂಬ ನಿಯಮವಿದೆ. ಆದರೆ, ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಕೊಡುತ್ತಿಲ್ಲ ಎಂದ ಅವರು, ಇಡೀ ದೇಶದಲ್ಲಿ ಹನ್ನೆರಡು ರಾಜ್ಯದಲ್ಲಿ ಬರಗಾಲ ಇದೆ. ಯಾವ ರಾಜ್ಯಕ್ಕೂ ಪರಿಹಾರ ಹಾಗೂ ಅನುಮತಿ ಕೊಟ್ಟಿಲ್ಲ. ಕೇಂದ್ರದಿಂದ ಬರಗಾಲ ತಂಡ ಅಧ್ಯಯನ ಮಾಡಿ ವರದಿ ಕೊಟ್ಟಿದೆ. ಆದರೂ ಪರಿಹಾರ ಕೊಟ್ಟಿಲ್ಲ ಎಂದರು.

ಇಲ್ಲಿಯ ಬಿಜೆಪಿಯವರು ಹೇಳುತ್ತಾರೆ. ಅವರಿಗೆ ಯಾಕೆ ನೋಡುತ್ತೀರಿ ಅಂತಾ. ಆದರೆ ನಾವು ಆ ಕಡೆ ನೋಡುವುದಿಲ್ಲ. ನಮಗೆ ಬರಬೇಕಾಗಿರುವ ಪರಿಹಾರ ಬರಬೇಕಲ್ಲ‌ ಎಂದು ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಬಗೆಗಿನ ವಿಚಾರ, ವಿರೋಧ ಪಕ್ಷದವರು ಏನು ಪ್ರಸ್ತಾಪ ಮಾಡುತ್ತಾರೆ. ಅದಕ್ಕೆ ನಾವು ಉತ್ತರ ಕೊಡುವುದಕ್ಕೆ ತಯಾರಿದ್ದೇವೆ ಎಂದು ಹೇಳಿದ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತೇವೆ ಎಂದರು.

ಸಿಎಂ ವಕೀಲರಾಗಿ ಡಿಕೆಶಿ ಕೇಸ್ ವಾಪಸ್ ಪಡೆದಿದ್ದು, ಎಷ್ಟರ ಮಟ್ಟಿಗೆ ಸರಿ ಎಂಬ ಎಚ್ ಡಿಕೆ ಹೇಳಿಕೆ ಕುರಿತು ಸಿಎಂ ಪ್ರತಿಕ್ರಿಯಿಸಿ, ನಾವು ವಕೀಲರಾಗಿ ಇರೋದಕ್ಕೆ ವಾಪಸ್ ಪಡೆದಿದ್ದೇವೆ. ಅವರ ವಕೀಲರು ಅಲ್ಲ. ಕಾನೂನು ಪ್ರಕಾರ ಇಲ್ಲ ಎಂಬ ಕಾರಣಕ್ಕೆ ವಾಪಸ್ ಪಡೆದಿದ್ದೇವೆ.

ವಕೀಲರಾಗಿ ಇರುವುದಕ್ಕೆ ವಾಪಸ್ ಪಡೆದಿದ್ದೇವೆ. ಇಲ್ಲ ಎಂದರೆ ಯಡಿಯೂರಪ್ಪ, ಕುಮಾರಸ್ವಾಮಿ ರೀತಿಯಲ್ಲಿ ನಾನೂ ಇರುತ್ತಿದ್ದೆ ಎಂದು ಕುಟುಕಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.