ಶಂಕಿತ ಐಸಿಸ್ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ
Team Udayavani, Oct 25, 2021, 6:20 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಯುವಕರನ್ನು ಐಸಿಸ್ ಉಗ್ರ ಸಂಘಟನೆಗೆ ನೇಮಿಸಿ ಸಿರಿಯಾಕ್ಕೆ ಕಳುಹಿಸುತ್ತಿದ್ದ ಬೆಂಗಳೂರಿನ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಶನಿವಾರ ರಾತ್ರಿ ಬಂಧಿಸಿದ್ದಾರೆ.
ಶಿವಾಜಿನಗರ ಮತ್ತು ಫ್ರೆಜರ್ಟೌನ್ ನಿವಾಸಿ ಮೊಹಮ್ಮದ್ ತೌಕೀರ್ ಮೊಹಮ್ಮದ್ (33) ಬಂಧಿತ. ಈತ ನಗರದಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದು, ಬಳಿಕ ದುಬಾೖಗೆ ತೆರಳಿ ವ್ಯಾಪಾರ ಮುಂದುವರಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಅಲ್ಲಿನ ಸ್ಥಳೀಯ ಪೊಲೀಸರು ಆರೋಪಿಯನ್ನು ಬಂಧಿಸಿ ಭಾರತಕ್ಕೆ ಗಡಿಪಾರು ಮಾಡಿದ್ದಾರೆ. ಈಗ ಆರೋಪಿಯನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ದಿಲ್ಲಿಗೆ ಕರೆತಂದಿದ್ದಾರೆ. ಶೀಘ್ರ ಬೆಂಗಳೂರಿಗೆ ಕರೆತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಐಸಿಸ್ಗೆ ಯುವಕರ ನೇಮಕ, ಹಣ ಸಂಗ್ರಹ ಮತ್ತಿತರ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಆರೋಪದ ಮೇಲೆ ಮೊಹಮ್ಮದ್ ತೌಕೀರ್ ಸಹಿತ ನಾಲ್ವರ ವಿರುದ್ಧ ಯುಎಪಿಎ ಸೇರಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಬಿಜೆಪಿ-ಜೆಡಿಎಸ್ಗೆ ನಾನೇ ಟಾರ್ಗೆಟ್: ಸಿದ್ದರಾಮಯ್ಯ
ಸಿರಿಯಾದಲ್ಲೇ ತರಬೇತಿ
ಮೊಹಮ್ಮದ್ ತೌಕೀರ್ ಮೊಹಮ್ಮದ್ ಉಗ್ರ ಸಂಘಟನೆಗಾಗಿ ಹಣ ಸಂಗ್ರಹಿಸುತ್ತಿದ್ದ. ವಾಟ್ಸ್ ಆ್ಯಪ್ ಗ್ರೂಪ್ ರಚಿಸಿ ದಕ್ಷಿಣ ಭಾರತದ ಮುಸ್ಲಿಂ ಯುವಕರನ್ನು ಸಂಘಟನೆಗೆ ನೇಮಿಸಿಕೊಳ್ಳುತ್ತಿದ್ದ. ಬಳಿಕ ಅವರನ್ನು ಐಸಿಸ್ ಸೇರಲು ಸಿರಿಯಾಕ್ಕೆ ಕಳುಹಿಸುತ್ತಿದ್ದ. 2013ರಲ್ಲಿ ಈತ ತನ್ನ ಸಹಚರರ ಜತೆ ಸೇರಿ ಐಸಿಸ್/ಐಎಸ್ಐಎಲ್/ಡಾಯಿಶ್ ನಾಯಕರನ್ನು ಸಂಪರ್ಕಿಸಲು ಸಿರಿಯಾಕ್ಕೆ ಭೇಟಿ ನೀಡಿ, ಸಂಘಟನೆ, ನೇಮಕಾತಿ ಚಟುವಟಿಕೆಗಳ ತರಬೇತಿ ಪಡೆದಿದ್ದ ಎಂದು ಎನ್ಐಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ