ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರನ ಸೆರೆ?
Team Udayavani, Oct 17, 2019, 3:00 AM IST
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರನೊಬ್ಬನ ಬಂಧನವಾಗಿದೆ ಎಂಬ ವದಂತಿ ಹಬ್ಬಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಆದರೆ, ಜಿಲ್ಲಾ ಪೊಲೀಸ್ ಇಲಾಖೆ ಮಾತ್ರ ಈ ವಿಚಾರವನ್ನು ತಳ್ಳಿ ಹಾಕಿದ್ದು, ಸ್ಯಾಟಲೈಟ್ ಫೋನ್ ಬಳಕೆ ಆಗಿರುವ ಬಗ್ಗೆ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದೆ.
ತೀರ್ಥಹಳ್ಳಿಯ ಸುರಾನಿ ಎಂಬ ಗ್ರಾಮದಲ್ಲಿ ಶಿವಮೊಗ್ಗ ಪೊಲೀಸರು ಮಂಗಳವಾರ ಭಾರೀ ಹುಡುಕಾಟ ನಡೆಸಿದ್ದು, ಇಲ್ಲಿನ ತೋಟದ ಮನೆಯೊಂದರಲ್ಲಿ ಕೆಲ ಹೊತ್ತು ತಪಾಸಣೆ ನಡೆಸಿದರು. ಈ ಭಾಗದಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. ಇಲ್ಲಿ ಓಡಾಡುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
ಈ ಕಾರಣಕ್ಕೆ ಶಂಕಿತ ಭಯೋತ್ಪಾದಕರ ಬಂಧನವಾಗಿದೆ ಎಂಬ ವದಂತಿ ಹಬ್ಬಿದೆ. ಭಾರತದಲ್ಲಿ ಸ್ಯಾಟಲೈಟ್ ಫೋನ್ ಬಳಕೆಗೆ ನಿಷೇಧವಿದೆ. ಆದರೂ ತೀರ್ಥಹಳ್ಳಿಯ ಸುರಾನಿ ಭಾಗದಲ್ಲಿ ಕೆಲ ದಿನದ ಹಿಂದೆ ಸ್ಯಾಟಲೈಟ್ ಫೋನ್ ಸಿಗ್ನಲ್ ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಪೊಲೀಸ್ ಇಲಾಖೆಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭ್ಯವಾಗಿತ್ತು.
ಹಾಗಾಗಿ, ದಿಢೀರ್ ತಪಾಸಣೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಈ ಹಿಂದೆ ಶಂಕಿತ ಭಯೋತ್ಪಾದಕರ ಬಂಧನವಾಗಿತ್ತು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಸುರಾನಿ ಗ್ರಾಮದಲ್ಲಿ ನಡೆದ ಪೊಲೀಸ್ ತಪಾಸಣೆ ಬಗ್ಗೆ ವದಂತಿ ಹಬ್ಬಲು ಕಾರಣವಾಗಿದೆ.
ಜನರು ಆತಂಕಕ್ಕೀಡಾಗುವ ಅಗತ್ಯವಿಲ್ಲ. ಕೆಲವು ಪೂರ್ವಭಾವಿ ತನಿಖೆಗಾಗಿ ತಪಾಸಣೆ ನಡೆಸಲಾಗಿದೆ. ಉಗ್ರರ ಬಂಧನವಾಗಿದೆ ಅನ್ನುವುದು ಸುಳ್ಳು.
-ಕೆ.ಎಂ.ಶಾಂತರಾಜು, ಎಸ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ