ನಿವೃತ್ತಿಗೆ 3 ತಾಸು ಮುನ್ನ ಅಮಾನತು: ವರದಿಗೆ ಸೂಚನೆ
Team Udayavani, Mar 13, 2019, 12:30 AM IST
ಬೆಂಗಳೂರು: “ನಿವೃತ್ತಿಯ ಕೊನೆಯ ಗಳಿಗೆಯಲ್ಲಿ ಅಮಾನತು ಪ್ರಕರಣ’ವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳ ಕಚೇರಿ, ಈ ಸಂಬಂಧದ ವರದಿ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ಗೆ ಸೂಚನೆ ನೀಡಿದೆ.
ನಿವೃತ್ತಿಗೆ ಕೇವಲ ಮೂರು ತಾಸು ಬಾಕಿ ಇರುವಾಗ ಪ್ರಾಮಾಣಿಕ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿರುವುದು ಅಧಿಕಾರಿಗಳ ವಲಯದಲ್ಲಿ ಹುಬ್ಬೇರಿಸುವಂತೆ ಮಾಡಿದೆ. ಉನ್ನತ ಅಧಿಕಾರಿಗಳ ಮಟ್ಟದಲ್ಲಿ ತೀವ್ರ ಚರ್ಚೆಗೂ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯು ಪ್ರಕರಣದ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಬುಧವಾರ ಇದನ್ನು ಪರಿಶೀಲನೆ ನಡೆಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೊನೆಯ ಗಳಿಗೆಯಲ್ಲಿ ಅಮಾನತು ಮಾಡಿದ್ದು ಯಾಕೆ? ಅಮಾನತಿಗೆ ನೀಡಿದ ಪ್ರಕರಣ ಯಾವುದು? ಅದರ ಗಂಭೀರತೆ ಎಷ್ಟಿದೆ ಎನ್ನುವುದುಸೇರಿದಂತೆ ಹಲವು ಅಂಶಗಳನ್ನು ವರದಿಯಲ್ಲಿ ಕೇಳಲಾಗಿದೆ. ಅದರಂತೆ ಸಮಗ್ರ ವರದಿ ಸಿದ್ಧ ಪಡಿಸಿ, ಮುಖ್ಯಮಂತ್ರಿಗಳ ಕಚೇರಿಗೆ ಬುಧವಾರ ನೀಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…