ಪಾದರಾಯನಪುರ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಬಿಎಸ್ ವೈ
ಪಾದರಾಯನಪುರ ಪ್ರಕರಣದಲ್ಲಿ 5oಕ್ಕೂ ಹೆಚ್ಚು ಮಂದಿ ಬಂಧನ
Team Udayavani, Apr 20, 2020, 9:58 AM IST
ಬೆಂಗಳೂರು: ಕ್ವಾರಂಟೈನ್ ಮಾಡಲು ಹೋದ ಪೊಲೀಸರ ಮೇಲೆ ಕೆಲ ಪುಂಡರು ಹಲ್ಲೆ ನಡೆಸಿಸ ಘಟನೆಯ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾಹಿತಿ ಕಲೆ ಹಾಕಿದ್ದು, ಘಟನೆಗೆ ಕಾರಣರಾದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಆದೇಶಿಸಿದ್ದಾರೆ.
ಇಲ್ಲಿನ 58 ಜನರನ್ನು ಕ್ವಾರೆಂಟೈನ್ ಮಾಡಲೆಂದು ತೆರಳಿದ್ದ ಆರೋಗ್ಯ ಯೋಧರ ಮೇಲೆ ಸ್ಥಳೀಯ ಕೆಲ ಪುಂಡರು ಹಲ್ಲೆಗೆ ಯತ್ನಿಸಿದ್ದಾರೆ ಮತ್ತು ಇದನ್ನು ತಡೆಯಲು ಬಂದ ಸೀಮಿತ ಪೊಲೀಸ್ ಪಡೆಗಳ ಮೇಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಪುಂಡರು ಹಲ್ಲೆ ನಡೆಸಿದ್ದರು.
ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಜತೆ ಘಟನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚೆ ನಡೆಸಿದರು. ಇಂತಹ ಘಟನೆ ನಿರ್ಬಂಧಿಸಲು ಪೊಲೀಸರಿಗೆ ಎಲ್ಲ ಅಧಿಕಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ನಂತರ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಎಫ್ ಐಆರ್ ದಾಖಲಿಸಲಾಗಿದೆ. ಬೇರೆ ಪ್ರದೇಶಗಳಲ್ಲಿ ಹಬ್ಬದಂತೆ ಎಚ್ಚರ ಹಾಗೂ ಕಟ್ಟು ನಿಟ್ಟಾಗಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದರು.
ಶಿವಾಜಿನಗರ, ಥಣಿಸಂದ್ರ, ಕಾಡುಗೊಂಡನಹಳ್ಳಿ , ದೇವರ ಜೀವನಹಳ್ಳಿ, ಜೆಜೆ ನಗರ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಲು ಪೊಲೀಸ್ ಆಯುಕ್ತರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಪಾದರಾಯನಪುರ ಪ್ರಕರಣದಲ್ಲಿ 5o ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಬಗ್ಗೆ ಗೃಹ ಸಚಿವರಿಗೆ ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ