ರೌಡಿಶೀಟರ್‌ ಪಟ್ಟಿ ಬಗ್ಗೆ ಕಾವೇರಿದ ಚರ್ಚೆ


Team Udayavani, Feb 7, 2018, 7:20 AM IST

06-28.jpg

ವಿಧಾನಸಭೆ: ರೌಡಿ ಶೀಟರ್‌ ಪಟ್ಟಿ ಬಗ್ಗೆ ವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ ನಡೆದು ಪ್ರತಿಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣ ವಾಯಿತು. ಚರ್ಚೆ ತಾರಕಕ್ಕೇರಿದಾಗ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ರೌಡಿಶೀಟರ್‌ಗಳ ಪಟ್ಟಿಯನ್ನು ಶಾಸಕರಿಗೆ ಒದಗಿಸಲಾಗುವುದು ಎಂದರು.

ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಯು.ಬಿ. ಬಣಕಾರ ಪರವಾಗಿ ಬಿಜೆಪಿ ಸಚೇತಕ ಸುನೀಲ್‌ ಕುಮಾರ್‌ ರೌಡಿಶೀಟರ್‌ ಪಟ್ಟಿಗೆ ಸೇರಿಸಲು ಇರುವ ಮಾನದಂಡಗಳೇನು ಎಂದು ಗೃಹ ಸಚಿವರನ್ನು ಪ್ರಶ್ನಿಸಿದರು. ಬಿಜೆಪಿ ಶಾಸಕರಾದ ಸಿ.ಟಿ.ರವಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌, ಮಾಜಿ ಗೃಹಸಚಿವ ಆರ್‌.ಅಶೋಕ ಸೇರಿ ಹಲವರು ಜನಪ್ರತಿಧಿಗಳಿಗೆ ರೌಡಿಶೀಟರ್‌ ಪಟ್ಟಿ ನೀಡದಿರುವ ಸರ್ಕಾರದ ಕ್ರಮವನ್ನು ಟೀಕಿಸಿದರು. ಈ ಹಂತದಲ್ಲಿ ಸಭಾಧ್ಯಕ್ಷ ಕೋಳಿವಾಡ ಅವರು ಸಹ ತಮ್ಮ ಕ್ಷೇತ್ರದಲ್ಲೂ ಅನಗತ್ಯವಾಗಿ ಅಮಾಯಕರನ್ನು ರೌಡಿಪಟ್ಟಿಗೆ
ಸೇರಿಸಲಾಗಿದೆ ಎಂದು ಸರ್ಕಾರದ ಗಮನ ಸೆಳೆದರು. ಗೃಹ ಸಚಿವ ರಾಮಲಿಂಗಾರೆಡ್ಡಿ ರೌಡಿಶೀಟರ್‌ಗಳ ಪಟ್ಟಿಗೆ ಸೇರಿಸಲು ಇರುವ ಮಾನದಂಡಗಳ ಬಗ್ಗೆ ಸದನಕ್ಕೆ ಮಾಹಿತಿ ನೀಡಿ ಶಾಸಕರಿಗೆ ರೌಡಿಶೀಟರ್‌ಗಳ ಪಟ್ಟಿ ನೀಡಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದರು. ಇದರಿಂದ ಸಿಟ್ಟಿಗೆದ್ದು ಬಿಜೆಪಿ ಶಾಸಕರು ಸರ್ಕಾರದ ಮೇಲೆ ಮುಗಿಬಿದ್ದಾಗ ಸದನದಲ್ಲಿ ಕೋಲಾಹಲದ ವಾತಾವರಣ ನಿರ್ಮಾಣವಾಯಿತು.

ವಿಶ್ವೇಶ್ವರ ಹೆಗಡೆ ಕಾಗೇರಿ, ಸುನೀಲ್‌ಕುಮಾರ್‌ ತಮ್ಮ ಕ್ಷೇತ್ರಗಳಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನು ರೌಡಿ ಪಟ್ಟಿಗೆ ರಾಜಕೀಯ ಕಾರಣಗಳಿಗೆ ಸೇರಿಸಿ ಕಿರುಕುಳ ನೀಡಲಾ ಗುತ್ತಿದೆ. ಸರ್ಕಾರ ಪೊಲೀಸ್‌ ಇಲಾ ಖೆಯನ್ನು ಈ ವಿಚಾರದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಚರ್ಚೆ ತಾರಕಕ್ಕೇರಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಧ್ಯ ಪ್ರವೇಶಿಸಿ ಶಾಸಕರಿಗೆ ರೌಡಿ ಪಟ್ಟಿಯನ್ನ ಒದಗಿಸಲಾಗುವುದು. ರೌಡಿ ಪಟ್ಟಿಗೆ ಹೆಸರು ಸೇರಿಸುವಾಗ ರಾಜಕೀಯ ವಾಗಿ ರೌಡಿ ಶೀಟರ್‌ ಮಾಡುವುದಿಲ್ಲವೆಂದು ಸ್ಪಷ್ಟಪಡಿಸಿ ದರು. ಅಮಾಯಕರ ಹೆಸರನ್ನು ಸೇರಿಸಿದ್ದರೆ ಅವರ ಹೆಸರನ್ನು ಕೈಬಿಡಲಾಗುವುದೆಂದು ಭರವಸೆ ನೀಡಿದರು. ಒಂದು ಹಂತದಲ್ಲಿ ಸಿಎಂ ಅವರು ರೌಡಿ ಪಟ್ಟಿಯಲ್ಲಿರುವವರೆಲ್ಲಾ ಬಿಜೆಪಿಯವರೇ? ಎಂದು ಕಾಲೆಳೆದಾಗ
ಬಿಜೆಪಿ ಶಾಸಕರು ತೀವ್ರ ಪ್ರತಿರೋಧ ತೋರಿದರು. 

ಶೆಟ್ಟರ್‌, ಸಚಿವ ಖಾದರ್‌ ವಾಗ್ವಾದ 
ರೌಡಿಶೀಟರ್‌ ಪಟ್ಟಿ ಚರ್ಚೆವೇಳೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌, ಸಚಿವ ಯು.ಟಿ.ಖಾದರ್‌ ಜತೆ ರೌಡಿ ಪಟ್ಟಿಯಲ್ಲಿದ್ದವರ ಫೋಟೊ ಇರುವುದನ್ನು ಪ್ರಸ್ತಾಪಿಸಿದರು. ಇದರಿಂದ ಸಿಟ್ಟಿಗೆದ್ದ ಸಚಿವ ಖಾದರ್‌ ಪ್ರಧಾನಿ ಜೊತೆ ರೌಡಿಶೀಟರ್‌ ಇರುವ ಫೋಟೊ ಸಹ ತಮ್ಮ ಬಳಿ ಇದೆಯೆಂದು ಹೇಳಿದಾಗ ಸದನದಲ್ಲಿ ಮತ್ತೆ ಕೋಲಾಹಲ ಉಂಟಾಯಿತು. ನಂತರ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಪ್ರಧಾನಿ ಬಗ್ಗೆ ಬಳಸಿದ ಪದಗಳನ್ನು ಕಡತದಿಂದ ತೆಗೆಸಿ ಚರ್ಚೆಗೆ ನಾಂದಿ ಹಾಡಿದರು.

ಮಾರ್ಷಲ್‌ ಕರೆದ ಸ್ಪೀಕರ್‌
ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ರೌಡಿಶೀಟರ್‌ ವಿಷಯದಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದ್ದಾಗ ಜೆಡಿಎಸ್‌ ಬಂಡಾಯ ಶಾಸಕ ಜಮೀರ್‌
ಅಹ್ಮದ್‌ ರೌಡಿ ಪಟ್ಟಿ ಬಿಜೆಪಿ ಶಾಸಕರಿಗೆ ಯಾಕೆ ಬೇಕೆಂದು ಪ್ರಶ್ನಿಸಿ ಮಾತನಾಡಿದರು. ಆಗ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದಾಗ ಕೋಲಾಹಲದ ವಾತಾವರಣ ಉಂಟಾಯಿತು. ಸ್ಪೀಕರ್‌ ಅವರು ಜಮೀರ್‌ಗೆ ಕುಳಿತುಕೊಳ್ಳಲು ತಿಳಿಸಿದರು. ಸಭಾಧ್ಯಕ್ಷರ ಸೂಚನೆ ಗಮನಿಸದೇ ಜಮೀರ್‌ ಮಾತು ಮುಂದು ವರಿಸಿದಾಗ ಸಿಟ್ಟಿಗೆದ್ದ ಸ್ಪೀಕರ್‌, ಮಾರ್ಷಲ್‌ ಅವರನ್ನು ಕರೆದು ಜಮೀರ್‌ಗೆ ಕೂರಿಸುವಂತೆ ಹೇಳಿದ್ದನ್ನು ಗಮನಿಸಿದ ಜಮೀರ್‌ ಮಾತು ನಿಲ್ಲಿಸಿ ತಣ್ಣಗೆ ಆಸೀನರಾದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.