ಖಂಡ್ರೆ ರಾಜೀನಾಮೆ ಕೊಡ್ತೇನೆ ಅಂದ್ರೆ, ವಿ. ಸೋಮಣ್ಣ ನೇಣು ಹಾಕಿಕೊಳ್ತೇನೆ ಅಂದ್ರು

ವಿಧಾನಸಭೆಯಲ್ಲಿ ಸವಾಲ್‌ಗೆ ಪ್ರತಿ ಸವಾಲ್‌

Team Udayavani, Feb 5, 2021, 8:39 AM IST

talk fight between v somanna and Eshwar khandre

ಬೆಂಗಳೂರು: ವಸತಿ ಯೋಜನೆ ವಿಚಾರದಲ್ಲಿ ವಸತಿ ಸಚಿವ ವಿ.ಸೋಮಣ್ಣ ಹಾಗೂ ಭಾಲ್ಕಿ ಕಾಂಗ್ರೆಸ್‌ ಶಾಸಕ ಈಶ್ವರ ಖಂಡ್ರೆ ನಡುವೆ ಮಾತಿನ ಸಮರ ಹಾಗೂ ವೈಯಕ್ತಿಕ ಟೀಕೆಗಳ ಜಟಾಪಟಿಗೆ ಗುರುವಾರ ಸದನ ಸಾಕ್ಷಿಯಾಯಿತು.

ಒಂದು ಹಂತದಲ್ಲಿ ವಿ.ಸೋಮಣ್ಣ ನನ್ನಿಂದ ತಪ್ಪಾಗಿದ್ದರೆ ವಿಧಾನಸೌಧದ ಮುಂದೆ ನೇಣು ಹಾಕಿಕೊಳ್ಳಲು ಸಿದ್ಧ ಎಂದು ಸವಾಲು ಹಾಕಿದರು. ಆಗ, ಈಶ್ವರ್‌ ಖಂಡ್ರೆ ನಾನು ತಪ್ಪು ಮಾಡಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರತಿ ಸವಾಲು ಹಾಕಿದರು.

ಇದರ ನಡುವೆ ನಾನು ಟೋಪಿ ಹಾಕಿ ಗೋಲ್‌ ಮಾಲ್‌ ಮಾಡಿ ಬಂದವನಲ್ಲ ಎಂದು ಸೋಮಣ್ಣ ಹೇಳಿದಾಗ, ನಾನು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದಿದ್ದೇನೆ. ನಿಮ್ಮ ಹಿನ್ನೆಲೆ ಏನು ಎಂದು ಈಶ್ವರ್‌ ಖಂಡ್ರೆ ಪ್ರಶ್ನಿಸಿದರು. ಇದು ಸದನದಲ್ಲಿ ಕೆಲಹೊತ್ತು ಬಿಸಿ ವಾತಾವರಣಕ್ಕೂ ಕಾರಣವಾಯಿತು. ಇಬ್ಬರನ್ನೂ ಸಮಾಧಾನಪಡಿಸುವಷ್ಟರಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಅವರಿಗೆ ಸಾಕು ಸಾಕಾಯಿತು.

ಇದನ್ನೂ ಓದಿ:ರಾಜ್ಯದಲ್ಲಿ 2 ಹಂತಗಳ ಪಂಚಾಯತ್‌ ವ್ಯವಸ್ಥೆ ಜಾರಿಗೆ ಬರುವ ದಿನ ಹತ್ತಿರವಾಗುತ್ತಿವೆ :ಈಶ್ವರಪ್ಪ

ಆಗಿದ್ದೇನು? ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಈಶ್ವರ್‌ ಖಂಡ್ರೆ, ಹಿಂದಿನ ಸರ್ಕಾರದಲ್ಲಿ ಮಂಜೂರಾದ ಮನೆಗಳು ಪೂರ್ಣಗೊಳ್ಳಲು ಹಣ ಪಾವತಿ ಮಾಡಿಲ್ಲ ಎಂದರು. ಇದಕ್ಕೆ ವಸತಿ ಸಚಿವ ವಿ.ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿ ಹಿಂದಿನ ಸರ್ಕಾರದಲ್ಲಿ ಆಗಿದ್ದ ಅಕ್ರಮ ಸರಿಪಡಿಸಿದ್ದೇವೆ. ಭಾಲ್ಕಿಯಲ್ಲಿ 17 ಸಾವಿರ ಮನೆಗಳು ಮಂಜೂರಾಗಿದ್ದು ಶೇ.43 ರಷ್ಟು ಬೋಗಸ್‌ ಆಗಿವೆ. ಶಾಸಕರೇ ಆದೇಶ ಪತ್ರ ಕೊಟ್ಟಿದ್ದಾರೆ ಎಂದು ದೂರಿದರು.

ಇದರಿಂದ ಕುಪಿತಗೊಂಡ ಈಶ್ವರ್‌ ಖಂಡ್ರೆ, ನಾನು ಆದೇಶ ಪತ್ರ ಕೊಟ್ಟಿಲ್ಲ. ಒಂದು ಕರಪತ್ರ ಹೊರಡಿಸಿದ್ದೇನೆ ಎಂದು ಹೇಳಿದರು. ಆದರೂ ಸೋಮಣ್ಣ ಆದೇಶ ಪತ್ರ ಕೊಟ್ಟಿದ್ದೀರಿ, ಈಗಾಗಲೇ ಪ್ರಕರಣ ತನಿಖೆಯಾಗುತ್ತಿದೆ. ಆರು ಪಿಡಿಒಗಳು ಅಮಾನತುಗೊಂಡಿದ್ದಾರೆ ಎಂದರು.

ಇದರಿಂದ ಮತ್ತಷ್ಟು ಕೆರಳಿದ ಈಶ್ವರ್‌ ಖಂಡ್ರೆ, ತನಿಖೆಯ ವರದಿ ನನ್ನ ಬಳಿ ಇದೆ. ನೀವು ವಸತಿ ಇಲಾಖೆಯಲ್ಲಿ ಬಡವರ ಮನೆ ಪೂರ್ಣಗೊಳ್ಳಲು ಹಣ ಕೊಡುವುದಿಲ್ಲ. ಬೆಂಗಳೂರಿನಲ್ಲಿ 1 ಲಕ್ಷ ಮನೆ ಕಟ್ಟುವ ಯೋಜನೆಗೆ 600 ಕೋಟಿ ರೂ. ಮುಂಗಡ ಪಾವತಿಸಿದ್ದೀರಿ. ಭ್ರಷ್ಟ ಅಧಿಕಾರಿಯನ್ನು ಇಟ್ಟುಕೊಂಡು ರಾಜಕೀಯ ವಿರೋಧಿಗಳ ಮಾತು ಕೇಳಿ ವಿನಾಕಾರಣ ತನಿಖೆ ಮಾಡಿಸಿದ್ದೀರಿ ಎಂದು ಆರೋಪಿಸಿದರು. ಸೋಮಣ್ಣ ಪರ ಮಾದುಸ್ವಾಮಿ ನಿಂತು, ಆದೇಶ ಪತ್ರ ಕೊಡುವುದು ಶಾಸಕರ ವ್ಯಾಪ್ತಿಗೆ ಬರುವುದಾ? ಎಂದು ಪ್ರಶ್ನಿಸಿದರು.

ಈಶ್ವರ್‌ ಖಂಡ್ರೆ ಪರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿಂತು, ಆದೇಶ ಪತ್ರ ಶಾಸಕರು ಕೊಡಲು ಸಾಧ್ಯವೇ? ಎಂದರು. ಈ ವೇಳೆ ವಾದ- ಪ್ರತಿವಾದ ಮುಂದುವರಿದು ಪರಸ್ಪರ ಸಾವಾಲು ಹಾಕಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.