ಔರಾದ್ಕರ್ ಸಮಿತಿ ವರದಿ ಕುರಿತು ಸಿಎಂ ಜತೆ ಚರ್ಚೆ: ಎಂ.ಬಿ.ಪಾಟೀಲ್
Team Udayavani, Jun 1, 2019, 3:06 AM IST
ಬೆಂಗಳೂರು: ಪೊಲೀಸರ ವೇತನ ಪರಿಷ್ಕರಣೆ ಕುರಿತ ಔರಾದ್ಕರ್ ವರದಿ ಬಗ್ಗೆ ಮುಖ್ಯಮಂತ್ರಿಯವರಿಗೆ ಸದ್ಯದಲ್ಲೇ ಮಾಹಿತಿ ನೀಡಲಿದ್ದೇನೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಪೊಲೀಸರ ವೇತನದಲ್ಲಿ ಆಗಿರುವ ತಾರತಮ್ಯ ನಿವಾರಿಸಲಾಗುವುದು. ಔರಾದ್ಕರ್ ವರದಿ ಬಗ್ಗೆ ನಾನು ಕನ್ವಿನ್ಸ್ ಆಗಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಡಲಿದ್ದೇನೆ ಎಂದು ಹೇಳಿದರು.
ಪೊಲೀಸರ ಸಂಬಳ ನನ್ನ ಅವಧಿಯಲ್ಲಿ ಹೆಚ್ಚಾಗಲಿ ಎಂಬ ಆಸೆ ನನಗೂ ಇದೆ. ಹೀಗಾಗಿ, ನಾನು ಆ ಬಗ್ಗೆ ವಿಶೇಷ ಕಾಳಜಿ ವಹಿಸಲಿದ್ದೇನೆ. ಹಣಕಾಸು ಇಲಾಖೆ ಅಡ್ಡಿ ಮಾಡುತ್ತದೆ. ಆದರೂ ಹಣಕಾಸು ಸಚಿವರು ಮುಖ್ಯಮಂತ್ರಿಯವರೇ ಆಗಿರುವುದರಿಂದ ಅವರ ಜತೆ ಮಾತನಾಡುತ್ತೇನೆ ಎಂದು ತಿಳಿಸಿದರು.
ಗೃಹ ಸಚಿವರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ತನಿಖೆ ನಡೆಯುತ್ತಿದೆ. ಮಾಜಿ ಸಚಿವ ಸುರೇಶ್ಕುಮಾರ್ ಅವರ ಬಗ್ಗೆ ನನಗೆ ಗೌರವವಿದೆ. ನಾಳೆ ಸುರೇಶ್ಕುಮಾರ್, ಶೋಭಾ ಕರಂದ್ಲಾಜೆಯವರ ಹೆಸರಿನಲ್ಲೇ ಈ ರೀತಿಯ ನಕಲಿ ಲೆಟರ್ ಹೆಡ್ ಮಾಡಿದರೆ ಸುಮ್ಮನಿರುತ್ತಾರಾ? ಆದರೆ, ಆ ವಿಚಾರದಲ್ಲಿ ಇಬ್ಬರೂ ಬೆಂಬಲ ನೀಡಿದ್ದು ವಿಪರ್ಯಾಸ ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಕುಮಾರಸ್ವಾಮಿಯವರು ಇನ್ನೂ ನಾಲ್ಕು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಆಪರೇಷನ್ ಕಮಲ ಆಪರೇಷನ್ ಕಮಲವಾಗಿಯೇ ಉಳಿಯಲಿದೆ. ಬಿಜೆಪಿಯು ಗೌರವಯುತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಇದ್ದರೆ ಒಳ್ಳೆಯದು
-ಎಂ.ಬಿ.ಪಾಟೀಲ್, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ