ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ
Team Udayavani, Apr 9, 2020, 8:37 PM IST
ಬೆಂಗಳೂರು: ಕೋವಿಡ್ ಸಂಬಂಧಿತ ಲಾಕ್ ಡೌನ್ ವಿಶೇಷ ಕರ್ತವ್ಯದಲ್ಲಿದ್ದ ತಮಿಳುನಾಡು ಪೊಲೀಸರು ತಮ್ಮ ರಾಜ್ಯದ ವ್ಯಾಪ್ತಿ ಪ್ರದೇಶವನ್ನು ಮೀರಿ ಕರ್ನಾಟಕದ ವ್ಯಾಪ್ತಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವಿಚಾರ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ನಗರ ರೌಂಡ್ಸ್ ಸಂದರ್ಭದಲ್ಲಿ ಬಯಲಾಗಿದೆ.
ತಮಿಳುನಾಡು ಕರ್ನಾಟಕ ರಾಜ್ಯಗಳ ಗಡಿ ಪ್ರದೇಶವಾಗಿರುವ ಅತ್ತಿಬೆಲೆಯಲ್ಲಿ ತಮಿಳುನಾಡು ಪೊಲೀಸರು ಮಫ್ತಿಯಲ್ಲಿ ವಾಹನಗಳ ತಪಾಸಣೆ ನಡೆಸ್ತಾ ಇದ್ರು. ಅತ್ತಿಬೆಲೆ ಕರ್ನಾಟಕ ರಾಜ್ಯದ ವ್ಯಾಪ್ತಿಯೊಳಗೆ ಬರುವುದರಿಂದ ತಮಿಳಿನಾಡು ಪೊಲೀಸರು ನಿಯಮ ಉಲ್ಲಂಘಿಸಿ ಈ ತಪಾಸಣೆಯನ್ನು ನಡೆಸುತ್ತಿದ್ದರು.
ತಮಿಳುನಾಡು ಪೊಲೀಸರ ಈ ಕ್ರಮವನ್ನು ಕಂಡರೂ ಇಲ್ಲಿನ ಅಧಿಕಾರಿಗಳು ಸುಮ್ಮನಿದ್ದರು. ಇದೇ ಸಮಯದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸಿಟಿ ರೌಂಡ್ಸ್ ನಡೆಸುತ್ತಿದ್ದ ಸಂದರ್ಭದಲ್ಲಿ ಈ ವಿಚಾರ ಬಹಿರಂಗಗೊಂಡಿದೆ.
ಈ ವಿಚಾರ ಗೃಹಸಚಿವರ ಗಮನಕ್ಕೆ ಬರುತ್ತಿದ್ದಂತೆ ಕರ್ನಾಟಕದ ನೆಲದಿಂದ ತಮಿಳುನಾಡು ಪೊಲೀಸರನ್ನು ಗೃಹಸಚಿವರು ರಾಜ್ಯದ ಗಡಿಯಿಂದ ಹೊರಗೆ ಕಳುಹಿಸದ ಘಟನೆ ನಡೆದಿದೆ. ಹೀಗೆ ಕರ್ನಾಟಕದ ಗೃಹಸಚಿವರು ರಾಂಗ್ ಆಗ್ತಾ ಇದ್ದ ಹಾಗೆ ತಮಿಳುನಾಡು ಪೊಲೀಸರು ಸೈಲೆಂಟಾಗಿ ಜಾಗ ಖಾಲಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ