31 ವರ್ಷಗಳ ಹಿಂದೆಯೇ ತರಂಗದಲ್ಲಿ “ಕೊರೊನಾ’ ಉಲ್ಲೇಖ


Team Udayavani, Mar 7, 2020, 3:06 AM IST

31varshagala

ಮಂಗಳೂರು: ಇಡೀ ಜಗತ್ತಿನಲ್ಲಿ ಮಾರಕ ಕೊರೊನಾ ವೈರಸ್‌ ವ್ಯಾಪಿಸುತ್ತಿದ್ದು, ಆ ಕುರಿತು “ಉದಯವಾಣಿ’ ಪತ್ರಿಕಾ ಬಳಗದ “ತರಂಗ’ ವಾರಪತ್ರಿಕೆಯಲ್ಲಿ 31 ವರ್ಷಗಳ ಹಿಂದೆಯೇ ಬರೆದಿದ್ದ ಲೇಖನ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

1989ರ ಜುಲೈ 16ರ “ತರಂಗ’ ವಾರಪತ್ರಿಕೆಯಲ್ಲಿ “ನೆಗಡಿ-ನಗಬೇಡಿ’ ಎನ್ನುವ ಶೀರ್ಷಿಕೆಯಲ್ಲಿ ಈ ಲೇಖನ ಪ್ರಕಟವಾಗಿತ್ತು. ನಾಲ್ಕು ಪುಟಗಳ ಈ ಲೇಖನವನ್ನು ಕೊಳ್ಳೆಗಾಲ ಮೂಲದ ಕಲ್ಯಾಣ ವೆಂಕಟ ಸುಬ್ರಹ್ಮಣ್ಯ ಶರ್ಮ (ಕೊಳ್ಳೆಗಾಲ ಶರ್ಮ) ಅವರು ಬರೆದಿದ್ದರು.

ಶರ್ಮ ಅವರು ತಮ್ಮ 28ನೇ ವಯಸ್ಸಿನಲ್ಲಿ ಮಣಿಪಾಲದಲ್ಲಿ ಪಿಎಚ್‌.ಡಿ.ಮಾಡುತ್ತಿದ್ದ ವೇಳೆ ಜನರಲ್ಲಿ ಸಾಮಾನ್ಯವಾಗಿ ಕಂಡು ಬರುವ ನೆಗಡಿ-ಶೀತದ ಕುರಿತಂತೆ ಈ ವಿಸ್ತೃತ ಲೇಖನವನ್ನು ಬರೆದಿದ್ದರು. 59ರ ಹರೆಯದ ಶರ್ಮ ಅವರು ಈಗ ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನ ಸಂಸ್ಥೆ (ಸಿಎಫ್‌ಟಿಆರ್‌ಐ)ಯಲ್ಲಿ ವಿಜ್ಞಾನಿಯಾಗಿ ಕೆಲಸ ಮಾಡುತ್ತಿದ್ದಾರೆ.

31 ವರ್ಷಗಳ ಹಿಂದಿನ “ತರಂಗ’ದಲ್ಲಿನ ಲೇಖನದ ತುಣುಕೊಂದು ಈಗ ಎಲ್ಲೆಡೆ ವೈರಲ್‌ ಆಗಿರುವುದು ಅವರ ಗಮನಕ್ಕೂ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು “ಉದಯವಾಣಿ’ಯೊಂದಿಗೆ ಮಾತನಾಡಿದ್ದು, ಬಹಳ ವರ್ಷಗಳ ಹಿಂದೆ “ತರಂಗ’ಕ್ಕೆ ಬರೆದಿದ್ದ ಲೇಖನ ಈಗ ವೈರಲ್‌ ಆಗುತ್ತಿದೆ. ಸಾಮಾನ್ಯವಾಗಿ ನಮಗೆ ವೈರಸ್‌ನಿಂದ ನೆಗಡಿ ಹೇಗೆ ಬರುತ್ತದೆ ಎನ್ನುವುದನ್ನು ಉಲ್ಲೇಖೀಸುವಾಗ ಕೊರೋನಾ ವೈರಸ್‌ ಬಗ್ಗೆ ಬರೆದಿದ್ದೆ.

ಕೊರೋನಾದಲ್ಲಿ ಹಲವು ಮಾದರಿಯ ವೈರಸ್‌ಗಳಿವೆ. ನೆಗಡಿ ಕೂಡ ಒಂದು ಗುಂಪಿನ ಕೊರೋನಾ ವೈರಸ್‌ನಿಂದಲೇ ಬರುವಂಥದ್ದು. ಎಷ್ಟೋ ಬಾರಿ ಪ್ರಾಣಿಗಳಲ್ಲಿಯೂ ಕೊರೋನಾ ವೈರಸ್‌ ಕಾಣಿಸಿಕೊಂಡು ಮನುಷ್ಯನಿಗೆ ಹರಡುತ್ತದೆ ಎಂದು ತಿಳಿಸಿದ್ದಾರೆ. ಕೊರೋನಾ ಕುರಿತಂತೆ “ತರಂಗ’ದಲ್ಲಿ 31 ವರ್ಷ ಗಳ ಹಿಂದೆ ಪ್ರಕಟವಾಗಿದ್ದ ಲೇಖನದ ತುಣುಕೊಂದನ್ನು ಮೊದಲಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು ಮುಕುಂದ ಚಿಪ್ಳೂಂಕರ್‌.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.