ಬಿಜೆಪಿಯಿಂದ ಅವಳಿ ರಣತಂತ್ರ, ಇಬ್ಬಗೆಯ ಪ್ರಚಾರಕ್ಕೆ ಟೀಂ ರೆಡಿ
Team Udayavani, Sep 23, 2017, 11:52 AM IST
ಬೆಂಗಳೂರು : ಚುನಾವಣೆ ಹೊಸ್ತಿಲಲ್ಲಿ ಮಿಷನ್ 150 ಗುರಿಯೊಂದಿಗೆ ಮತ್ತೆ ಅಧಿಕಾರ ಹಿಡಿಯಲು ಭಾರೀ ತಂತ್ರಗಳನ್ನು ಹಣೆಯುತ್ತಿರುವ ಬಿಜೆಪಿ 2 ಮಾದರಿಯಲ್ಲಿ ಪ್ರಚಾರ ಸಮಿತಿಗಳನ್ನು ರಚಿಸಿದೆ. ಪಕ್ಷವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ಪ್ರಚಾರ ಸಮಿತಿಗಳನ್ನು ರಚಿಸಿ ಭರ್ಜರಿ ಪ್ರಚಾರ ನಡೆಸಲು ಮುಂದಾಗಿದ್ದಾರೆ.
30 ಸದಸ್ಯರ ತಂಡಗಳಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಸಾಂಪ್ರದಾಯಿಕ ಪ್ರಚಾರ ಸಮಿತಿ ಯ ಅಧ್ಯಕ್ಷರಾದರೆ, ಅಸಾಂಪ್ರದಾಯಿಕ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಸಂಸದ ಪ್ರಹ್ಲಾದ್ ಜೋಷಿ ಅವರನ್ನು ನೇಮಿಸಲಾಗಿದೆ.
ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ, ಸಂಸದರಾದ ಪ್ರತಾಪ್ ಸಿಂಹ, ಭಗವಂತ್ ಖೂಬಾ, ಎಸ್ಎಂ ಕೃಷ್ಣ, ಶಾಸಕ ಸುರೇಶ್ ಕುಮಾರ್ ,ಭಾರತಿ ಶೆಟ್ಟಿ ಸೇರಿ 30 ಜನ ಮುಖಂಡರ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗಿದೆ.
ಸಾಂಪ್ರದಾಯಿಕ ಸಮಿತಿ ಎಂದಿನಂತೆ ಸಮಾವೇಶಗಳು, ಸಭೆಗಳಲ್ಲಿ ಪ್ರಚಾರ ನಡೆಸಿದರೆ, ಅಸಾಂಪ್ರದಾಯಿಕ ಪ್ರಚಾರ ಸಮಿತಿ ಸಾಮಾಜಿಕ ತಾಣಗಳ ಮೂಲಕ ಪ್ರಚಾರ ನಡೆಸಲಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್