ಕೊಳವೆಬಾವಿಗಳ “ಲೈಫ್’ ತಿಳಿಸುವ ತಂತ್ರಜ್ಞಾನ ಅಭಿವೃದ್ಧಿ


Team Udayavani, Jun 8, 2019, 3:07 AM IST

kolave

ಬೆಂಗಳೂರು: ವ್ಯಕ್ತಿಯ ದೈಹಿಕ ಪರೀಕ್ಷೆಯಂತೆ ರೈತರ ಜಮೀನುಗಳಲ್ಲಿರುವ ಕೊಳವೆಬಾವಿಗಳ ಆರೋಗ್ಯ ಪರೀಕ್ಷೆಗೂ ತಂತ್ರಜ್ಞಾನವೊಂದು ಬರುತ್ತಿದೆ. ರಾಜ್ಯದಲ್ಲಿ ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿರುವುದರ ಜತೆಗೆ ಬತ್ತುತ್ತಿರುವ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆ ಕೊಳವೆಬಾವಿಗಳ ಸಾಮರ್ಥ್ಯ ಪರೀಕ್ಷಿಸುವ ಸೆನ್ಸರ್‌ ಆಧಾರಿತ ತಂತ್ರಜ್ಞಾನವನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸುತ್ತಿದ್ದಾರೆ.

ಇದರಿಂದ ಕೊಳವೆಬಾವಿಯ “ಲೈಫ್’ ಕೂಡ ತಿಳಿಯಬಹುದು. ದೇಶದಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ತಂತ್ರಜ್ಞಾನ ರೂಪುಗೊಳ್ಳುತ್ತಿದೆ. ರಾಜ್ಯದಲ್ಲಿ ಹೋಬಳಿ ಮಟ್ಟದಲ್ಲಿ ಮಳೆ ಮಾಪನಗಳನ್ನು ಅಳವಡಿಸುವ ಮೂಲಕ ಈ ಹಿಂದೆ ಗಮನಸೆಳೆದಿದ್ದ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಜಿ ನಿರ್ದೇಶಕ ವಿ.ಎಸ್‌. ಪ್ರಕಾಶ್‌ ಈ ವಿನೂತನ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದು, 2-3 ತಿಂಗಳಲ್ಲಿ ಇದರ ಪ್ರಯೋಗ ನಡೆಯಲಿದೆ.

“ಎಲ್ಲಿ ಕೊಳವೆಬಾವಿ ಕೊರೆಯಬಹುದು ಎಂಬುದನ್ನು ತಿಳಿಸುವ ತಂತ್ರಜ್ಞಾನ ನಮ್ಮಲ್ಲಿದೆ. ಆದರೆ, ರೈತರ ಜಮೀನುಗಳಲ್ಲಿರುವ ಕೊಳವೆಬಾವಿಗಳಲ್ಲಿ ನೀರಿನ ಲಭ್ಯತೆ ಎಷ್ಟಿದೆ? ವೋಲ್ಟೆàಜ್‌ ಎಷ್ಟಿದೆ? ಬತ್ತುವ ಸ್ಥಿತಿಯಲ್ಲಿದೆಯೇ? ಹಾಗಿದ್ದರೆ, ಅದಕ್ಕೆ ಪರ್ಯಾಯಗಳೇನು? ಇಂತಹ ಹಲವು ಮಾಹಿತಿಗಳನ್ನು ನೀಡುವಂತಹ ತಂತ್ರಜ್ಞಾನ ಲಭ್ಯವಿಲ್ಲ. ಈಗ ಅಭಿವೃದ್ಧಿಪಡಿಸಿರುವ ಸೆನ್ಸರ್‌ ಆಧಾರಿತ ತಂತ್ರಜ್ಞಾನ ಆ ಕೊರತೆ ನೀಗಿಸಲಿದೆ.

ಈ ಸಂಬಂಧದ ಎಲ್ಲ ರೂಪುರೇಷೆಗಳು ಸಿದ್ಧಪಡಿಸಲಾಗಿದೆ. ಶೀಘ್ರ ಇದರ ಪ್ರಯೋಗವೂ ನಡೆಯಲಿದೆ’ ಎಂದು ವಿ.ಎಸ್‌. ಪ್ರಕಾಶ್‌ “ಉದಯವಾಣಿ’ಗೆ ಮಾಹಿತಿ ನೀಡಿದರು. ರೈತರಿಗೆ ಏನು ಅನುಕೂಲ?: ರೈತರಿಗೆ ಮುಂಚಿತವಾಗಿಯೇ ತನ್ನ ಜಮೀನಿನಲ್ಲಿರುವ ಕೊಳವೆಬಾವಿಯಲ್ಲಿರುವ ನೀರಿನ ಲಭ್ಯತೆ ಹಾಗೂ ಬತ್ತುವ ಮುನ್ಸೂಚನೆ ದೊರೆತರೆ, ಅದಕ್ಕೆ ತಕ್ಕಂತೆ ಆತ ಬೆಳೆಗಳನ್ನು ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಅನಗತ್ಯ ವೆಚ್ಚ ಮತ್ತು ಶ್ರಮ ತಪ್ಪಲಿದೆ. ಪ್ರಸ್ತುತ ರೈತರು ಬೇಕಾಬಿಟ್ಟಿ ಕೊಳವೆಬಾವಿಗಳನ್ನು ಕೊರೆಸುತ್ತಾರೆ.

ಒಂದು ಫೇಲಾದರೆ ಮತ್ತೂಂದು. ಅದೂ ಕೈಕೊಟ್ಟರೆ ಮೊಗದೊಂದು. ಹೀಗೆ ಕೇವಲ ಅರ್ಧ ಎಕರೆಯಲ್ಲಿ 50 ಕೊಳವೆಬಾವಿಗಳನ್ನು ಕೊರೆದ ಉದಾಹರಣೆಗಳಿವೆ. ಲಕ್ಷಾಂತರ ರೂ.ಇದಕ್ಕಾಗಿಯೇ ಸುರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೂ ತಂತ್ರಜ್ಞಾನ ರೈತರ ನೆರವಿಗೆ ಬರಲಿದೆ. ಸದ್ಯಕ್ಕೆ ತಂತ್ರಜ್ಞಾನದ ಹೆಸರು ಗೌಪ್ಯವಾಗಿಡಲಾಗಿದೆ. ಶೀಘ್ರದಲ್ಲೇ ಇದನ್ನು ಬಹಿರಂಗಗೊಳಿಸಲಾಗುವುದು ಎಂದು ಅವರು ಹೇಳಿದರು.

ಅಂದಹಾಗೆ, ಪ್ರಕಾಶ್‌ ಅವರು ಈ ಹಿಂದೆ ಕೇಂದ್ರೀಯ ಅಂತರ್ಜಲ ಮಂಡಳಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕೆಎಸ್‌ಎನ್‌ಡಿಎಂಸಿ ಸಂಸ್ಥಾಪಕರೂ ಹೌದು. 2017ರಲ್ಲಿ ರಾಜ್ಯದಲ್ಲಿ ನಡೆದ ಯಶಸ್ವಿ ಮೋಡಬಿತ್ತನೆ ಮಾಡಿದ ವಿಜ್ಞಾನಿಗಳ ತಂಡದಲ್ಲಿ ಪ್ರಕಾಶ್‌ ಕೂಡ ಇದ್ದರು.

ಪ್ರಸ್ತುತ ತಂತ್ರಜ್ಞಾನಗಳಿವು: “ಪ್ರಸ್ತುತ ಕೊಳವೆಬಾವಿಗಳಿಂದ ನೀರನ್ನು ಪಂಪ್‌ ಮಾಡಿ ಹೊರತೆಗೆದ ನಂತರ ಉಕ್ಕುವ “ರಿಕವರಿ’ ಹಾಗೂ ಅದಕ್ಕಾಗಿ ತೆಗೆದುಕೊಂಡ ಸಮಯ, ಜಲಧಾರೆಗಳನ್ನು ಲೆಕ್ಕಹಾಕಿ ಕೊಳವೆಬಾವಿಯಲ್ಲಿರುವ ನೀರಿನ ಇಳುವರಿ ಅಳೆಯುವ ವ್ಯವಸ್ಥೆಯಿದೆ. ಇದಲ್ಲದೆ, ಕ್ಯಾಮೆರಾವನ್ನು ಕೊಳವೆಬಾವಿಗಳಲ್ಲಿ ಬಿಟ್ಟು ಅದು ನೀಡುವ ಚಿತ್ರಗಳಿಂದ ಅಂತರ್ಜಲ ಮಟ್ಟ, ಮಣ್ಣಿನ ಗುಣಲಕ್ಷಣ, ಕೊಳವೆಬಾವಿ ಕೊರೆಯಲು ಇರುವ ಅಡತಡೆಗಳನ್ನು ಪತ್ತೆಹಚ್ಚುವ ವ್ಯವಸ್ಥೆ ಇದೆ. ಆದರೆ, ಸೆನ್ಸರ್‌ ಆಧಾರಿತ ಉಪಕರಣಗಳನ್ನು ಅಳವಡಿಸಿ, ಕೊಳವೆಬಾವಿಗಳ ಸಾಮರ್ಥ್ಯ ಕಂಡುಹಿಡಿಯುವ ತಂತ್ರಜ್ಞಾನ ಇದುವರೆಗೆ ಇಲ್ಲ’ ಎಂದು ಕೇಂದ್ರೀಯ ಅಂತರ್ಜಲ ಮಂಡಳಿ ವಿಜ್ಞಾನಿ ಡಾ.ಅನಂತಕುಮಾರ್‌ ಅರಸ್‌ ಸ್ಪಷ್ಟಪಡಿಸುತ್ತಾರೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.