ಆರಗ ಕ್ಷೇತ್ರದ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರ : ರೋಗಿಗಳಿಗೆ ವೈದ್ಯರು ಸಿಕ್ಕರೆ ಅದೇ ಪುಣ್ಯ

ಸೂಕ್ತ ಚಿಕಿತ್ಸೆ ದೊರಕದೆ ಸಾರ್ವಜನಿಕರ ಆಕ್ರೋಶ !

Team Udayavani, May 5, 2022, 7:11 PM IST

ಗೃಹಸಚಿವರ ಸ್ವಕ್ಷೇತ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರ : ಸಾರ್ವಜನಿಕರ ಆಕ್ರೋಶ !

ತೀರ್ಥಹಳ್ಳಿ : ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಒಂದಲ್ಲ ಒಂದು ಸಮಸ್ಯೆ ಎದ್ದು ಕಾಣುತ್ತಿದೆ. ಸ್ಕ್ಯಾನಿಂಗ್ ಯಂತ್ರ ದೂಳು ಹಿಡಿದು ಕೂತಿರುವ ಬಗ್ಗೆ ಹಾಗೂ ಜಯಚಾಮರಾಜೇಂದ್ರ ಆಸ್ಪತ್ರೆಯ ಹೊರಾಂಗಣದಲ್ಲಿ ವಿದ್ಯುತ್ ದೀಪವಿಲ್ಲದೆ ಇರುವ ಬಗ್ಗೆ ಈಗಾಗಲೇ ಉದಯವಾಣಿ ಪತ್ರಿಕೆ ವರದಿ ಮಾಡಿತ್ತು. ಆದರೆ ಈಗ ಮತ್ತೊಂದು ಸಮಸ್ಯೆ ಕಾಡತೊಡಗಿದೆ.

ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯರುಗಳು ನೀಡುತ್ತಿಲ್ಲ ಎಂಬುದು ಸಾರ್ವಜನಿಕರಿಂದ  ದೂರು ಕೇಳಿಬರುತ್ತಿದೆ.

ಸುಸಜ್ಜಿತವಾದ ಕಟ್ಟಡ, ನೂರು ಬೆಡ್ ಗಳ ಅಸ್ಪತ್ರೆ ಉತ್ತಮ ವೈದ್ಯಕೀಯ ಸೌಲಭ್ಯ ಹೊಂದಿರುವ ಆಸ್ಪತ್ರೆ ಎಂದೆಲ್ಲ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಆಸ್ಪತ್ರೆಗೆ ಭೇಟಿ ನಿಡಿದಾಗೆಲ್ಲ ಹೇಳುತ್ತಿರುತ್ತಾರೆ.

ಸಚಿವರು ಬಂದಾಗ ಆಸ್ಪತ್ರೆಯ ತುಂಬಾ ಹಿಂದೆ ಮುಂದೆ ವೈದ್ಯೆರೇ ಇರುತ್ತಾರೆ. ಆದರೆ ಅನಾರೋಗ್ಯದಿಂದ ಬರುವ ರೋಗಿಗಳಿಗೆ ವೈದ್ಯರು ಸಿಕ್ಕಿದರೆ ಅದೇ ಅವರ ಪುಣ್ಯ.

ಹಿಂದೆ ಈ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರ ವಿಶೇಷ ಮುತುವರ್ಜಿಯಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಆಸ್ಪತ್ರೆಯ ವಾತಾವರಣವನ್ನು ಬಹಳ ಅಚ್ಚುಕಟ್ಟಾಗಿ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ನೋಡಿಕೊಳ್ಳುತ್ತಿದ್ದರು. ಹಾಗೂ ದಾನಿಗಳ ನೆರವಿನಿಂದ ಅಸ್ಪತ್ರೆಗೆ ಬೇಕಾದ ಅಗತ್ಯ ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆ ಕೊಠಡಿ, ಮತ್ತು ಪಾರ್ಕ್ , ಧ್ವಜದ ಕಟ್ಟೆ, ಪೀಠೋಪಕರಣ, ಡಯಾಲಿಸಿಸ್ ಮಿಷನ್ ,ಮಳೆಯಲ್ಲಿ ನೀರು ಸೊರದಂತೆ ಮೇಲ್ಛಾವಣಿ ಮಾಡು ಹಾಗೂ ಮತ್ತಿತರ ವಸ್ತುಗಳನ್ನು ಅಸ್ಪತ್ರೆಗೆ ಅಳವಡಿಸಿ ತಾಲೂಕು ಅಸ್ಪತ್ರೆಯಾದರೂ ಕೂಡ ರಾಜ್ಯದಲ್ಲಿ ಮಾದರಿ ಅಸ್ಪತ್ರೆ ಎನ್ನುವಂತೆ  ಮಾಡಿದ್ದರಲ್ಲದೆ ಬಡರೋಗಿಗಳ ಪಾಲಿಗೆ ಅಪಾತ್ಬಾಂದವರಾಗಿದ್ದರು. ಅವರು ವರ್ಗಾವಣೆ ಆದ ನಂತರ ಜೆ.ಸಿ ಆಸ್ಪತ್ರೆಗೆ ಗ್ರಹಣ ಒಕ್ಕರಿಸಿದೆ. ಈಗಿರುವ ಹಲವು ವೈದ್ಯರುಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೆಸರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಆದರೆ ಅವರು ಮಾಡುವುದು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಇದು ಈಗಿರುವ ವೈದ್ಯರ ಸಮಸ್ಯೆ.

ಇದನ್ನೂ ಓದಿ : ಬಜೆಟ್ ಅನುಷ್ಠಾನ : ಹೊಸ ಪರಂಪರೆ ಆರಂಭಿಸಿದ ಸಿಎಂ ಬೊಮ್ಮಾಯಿ

ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುವ ವೈದ್ಯರು ಸಮಯಕ್ಕೆ ಸರಿಯಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಇರದೇ  ಖಾಸಗಿ ಆಸ್ಪತ್ರೆಯಲ್ಲಿ ಕಾಣಸಿಗುತ್ತಾರೆ. ಇನ್ನು ಕೆಲವು ವೈದ್ಯಾಧಿಕಾರಿಗಳು ಆಸ್ಪತ್ರೆ ವೈದ್ಯರ ಕೊಠಡಿಯಲ್ಲೇ ಹಣ ಪೀಕುವ ಕೆಲಸಕ್ಕೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಬಡ ರೋಗಿಗಳ ಪಾಡು ಹೇಳತೀರದಾಗಿದೆ. ಜಯಚಾಮರಾಜೇಂದ್ರ ಆಸ್ಪತ್ರೆಯ ( ಹೆಸರು ಬೇಡ ) ವೈದ್ಯರು ಆಸ್ಪತ್ರೆಯ ಕೊಠಡಿಯಲ್ಲಿ ಕುಳಿತು ಬಡ ರೋಗಿಗಳಿಗೆ ಖಾಸಗಿ ನರ್ಸಿಂಗ್ ಹೋಂ ಗಳಲ್ಲಿ ಸಿಗುವ ಸೌಲಭ್ಯ ಮತ್ತು ಚಿಕಿತ್ಸೆ ಎಷ್ಟಾಗುತ್ತದೆ ಎಂಬ ಮಾಹಿತಿ ನೀಡಿ ನಂತರ ಡೀಲ್ ಕುದುರಿಸಿ ಬಡಪಾಯಿ ರೋಗಿಗಳನ್ನು ಖಾಸಗಿ ನರ್ಸಿಂಗ್ ಹೋಂ ಗಳಿಗೆ ಕಳುಹಿಸಿ ನಂತರ ಜೆ.ಸಿ ಆಸ್ಪತ್ರೆಯ ವೈದ್ಯರೇ ಹೋಗಿ ದುಬಾರಿ ವೆಚ್ಚದ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಮಾತು ಹಣ ಕಳೆದುಕೊಂಡ ರೋಗಿಯೊಬ್ಬರು ಉದಯವಾಣಿ ಪತ್ರಿಕೆಗೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಬಾರದು ಎಂಬ ಕಾನೂನು ಇದ್ದರೂ ಸಹ ತರಬೇತಿ ರೂಪದಲ್ಲಿ ಖಾಸಗಿ ಆಸ್ಪತ್ರೆಗೆ ಹೋಗಿ ಬಡ ರೋಗಿಗಳನ್ನು ಪಿಕುವುದು ಎಷ್ಟರ ಮಟ್ಟಿಗೆ ಸರಿ?  ಗೃಹಸಚಿವರು ಇದನ್ನು ತಕ್ಷಣ ಗಮನಿಸದೆ ಹೋಗದಿದ್ದರೆ  ಮಾತ್ರ ತೀರ್ಥಹಳ್ಳಿಯಲ್ಲಿ ಸರ್ಕಾರಿ ಆಸ್ಪತ್ರೆ ಹೆಸರಿಗಷ್ಟೇ ಇರಲಿದೆ ಎನ್ನುವುದು ಅಕ್ಷರಶಃ ಸತ್ಯ.

– ಶ್ರೀಕಾಂತ್ ವಿ ನಾಯಕ್ ತೀರ್ಥಹಳ್ಳಿ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.