ಮನೆಗೆ ಶ್ರೀಕೃಷ್ಣ ಮಠ, ಶ್ರೀ ಚಾಮುಂಡೇಶ್ವರಿ ಪ್ರಸಾದ


Team Udayavani, Apr 23, 2021, 6:34 AM IST

ಮನೆಗೆ ಶ್ರೀಕೃಷ್ಣ ಮಠ, ಶ್ರೀ ಚಾಮುಂಡೇಶ್ವರಿ ಪ್ರಸಾದ

ಬೆಂಗಳೂರು: ಕೋವಿಡ್ ಕಾಲದಲ್ಲಿ ಭಾರತೀಯ ಅಂಚೆ ಇಲಾಖೆ ಭಿನ್ನ ಸೇವೆಗೆ ಕೈ ಹಾಕಿದೆ. ಈಗಾಗಲೇ ಮಾವಿನ ಹಣ್ಣನ್ನು ಅಂಚೆಯ ಮೂಲಕ ತಲುಪಿಸುವಲ್ಲಿ ಯಶಸ್ವಿ ಆಗಿರುವ ಅದು, ಈಗ ಉಡುಪಿಯ ಶ್ರೀಕೃಷ್ಣ ಮಠ ಮತ್ತು ಮೈಸೂರಿನ ಶ್ರೀಚಾಮುಂಡೇಶ್ವರಿ ದೇವಸ್ಥಾನಗಳ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ರೂಪಿಸಿದೆ.

ಕೊರೊನಾ ಸೋಂಕು ಹೆಚ್ಚಿರುವ ಈ ಸಮಯದಲ್ಲಿ ಭಕ್ತರಿಗೆ ದೇವಸ್ಥಾನಗಳಿಗೆ ಭೇಟಿ ನೀಡಲು ಆಗುತ್ತಿಲ್ಲ. ಅಂತಹವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಭಾರತೀಯ ಅಂಚೆ ಇಲಾಖೆಯ ಕರ್ನಾಟಕ ವೃತ್ತ ಈ ಕಾರ್ಯಕ್ಕೆ ಮುಂದಾಗಿದೆ.

ಇಲಾಖೆಯ ಕರ್ನಾಟಕ ವಿಭಾಗದ ಹಿರಿಯ ಅಧಿಕಾರಿಗಳು ಉಡುಪಿ ಶ್ರೀಕೃಷ್ಣ ಮಠ ಮತ್ತು ಮೈಸೂರಿನ ಶ್ರೀಚಾಮುಂಡೇಶ್ವರಿ ದೇವಾಲಯದ ಆಡಳಿತ ಮಂಡಳಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯುವ ಸಾಧ್ಯತೆಯಿದೆ ಎಂದು ಕರ್ನಾಟಕ ವೃತ್ತದ ಸಹಾಯಕ ಪೋಸ್ಟ್‌ ಮಾಸ್ಟರ್‌ ಜನರಲ್‌ ವಿ. ತಾರಾ ಹೇಳಿದ್ದಾರೆ.

16,346 ಬಾಟಲಿ ಗಂಗಾಜಲ ವಿತರಣೆ :

ಅಂಚೆ ಇಲಾಖೆಯ ಕರ್ನಾಟಕ ವೃತ್ತ ಈಗಾಗಲೇ ಗಂಗಾಜಲ ವಿತರಣೆ ಸೇವೆಯನ್ನೂ ಆರಂಭಿಸಿದೆ. ಇದಕ್ಕಾಗಿ ಸುಮಾರು 337 ಅಂಚೆ ಕಚೇರಿಗಳನ್ನು ಮೀಸಲಿರಿಸಿದೆ. ಈ ಆರ್ಥಿಕ ವರ್ಷದಲ್ಲಿ 250 ಮಿ.ಲೀ.ನ 16,346 ಬಾಟಲಿ ಗಂಗಾಜಲವನ್ನು ಭಕ್ತರ ಮನೆಗೆ ತಲುಪಿಸಲಾಗಿದೆ.

ಇಸ್ಕಾನ್‌ ಜತೆಗೂ ಮಾತುಕತೆ :

ಅಂಚೆ ಇಲಾಖೆ ಈಗಾಗಲೇ ಉ.ಪ್ರದೇಶದ ಕಾಶಿ ವಿಶ್ವನಾಥ ದೇಗುಲದ ಪ್ರಸಾದ ಮತ್ತು ಶಬರಿಮಲೆ ದೇಗುಲದ ಪ್ರಸಾದವನ್ನು ಅಂಚೆ ಮೂಲಕ ಕರ್ನಾಟಕದ ಭಕ್ತರಿಗೆ ತಲುಪಿ ಸುವಲ್ಲಿ ಯಶಸ್ವಿ ಆಗಿದೆ. ಇಸ್ಕಾನ್‌ ಮತ್ತು ತಮಿಳುನಾಡಿನ ಪಳನಿ ಮುರುಗನ್‌ ಸ್ವಾಮಿ ದೇವಾಲಯಗಳ ಪ್ರಸಾದವನ್ನು ತಲುಪಿಸುವ ನಿಟ್ಟಿನಲ್ಲಿಯೂ ಮಾತುಕತೆ ನಡೆಯುತ್ತಿದೆ.

ಅಂಚೆ ಇಲಾಖೆ ಎಲ್ಲ ರೀತಿಯ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುತ್ತಿದೆ. ಜನರು ಬಯಸಿದ ದೇವಾಲಯಗಳ ಪ್ರಸಾದವನ್ನು ಅವರ ಮನೆಬಾಗಿಲಿಗೆ ತಲುಪಿಸಲಾಗುವುದು. -ಶಾರದಾ ಸಂಪತ್‌, ಕರ್ನಾಟಕ ವೃತ್ತದ ಚೀಫ್‌ ಪೋಸ್ಟ್‌ ಮಾಸ್ಟರ್‌ ಜನರಲ್‌

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.