ಹತ್ತು ಗಿಗಾ ವ್ಯಾಟ್‌ ಹಸುರು ಇಂಧನ ಉತ್ಪಾದನೆ: ಸುನಿಲ್‌ ಕುಮಾರ್‌


Team Udayavani, May 19, 2022, 9:01 PM IST

ಹತ್ತು ಗಿಗಾ ವ್ಯಾಟ್‌ ಹಸುರು ಇಂಧನ ಉತ್ಪಾದನೆ: ಸುನಿಲ್‌ ಕುಮಾರ್‌

ಬೆಂಗಳೂರು: ಗ್ರೀನ್‌ ಎನರ್ಜಿ ಪಥದಲ್ಲಿ ಹೆಜ್ಜೆ ಇಟ್ಟಿರುವ ರಾಜ್ಯ ಸರಕಾರ ಮುಂದಿನ ಐದು ವರ್ಷದ ಅವಧಿಯಲ್ಲಿ ಹತ್ತು ಗಿಗಾ ವ್ಯಾಟ್‌ ಹಸುರು ಇಂಧನ ಉತ್ಪಾದನೆಯ ಗುರಿ ಹಾಕಿಕೊಂಡಿದೆ ಎಂದು ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಹೈಬ್ರಿಡ್‌ ವಿದ್ಯುತ್‌ ಪಾರ್ಕ್‌ ನಿರ್ಮಾಣ ನಮ್ಮ ಆದ್ಯತೆಯಾಗಿದೆ. ಗ್ರೀನ್‌ ಎನರ್ಜಿ ಕ್ಷೇತ್ರವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸ್ಟೋರೇಜ್‌ ಕೇಂದ್ರ ಸ್ಥಾಪನೆ :

ಈ ಗುರಿ ಸಾಧನೆಯ ಭಾಗವಾಗಿ ಹತ್ತು ಸಾವಿರ ಮೆಗಾ ವ್ಯಾಟ್‌ ಸಾಮರ್ಥ್ಯದ ಹೈಬ್ರಿಡ್‌ ಪಾರ್ಕ್‌ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಸೌರ ಹಾಗೂ ಪವನ ವಿದ್ಯುತ್‌ ಉತ್ಪಾದನೆಯ ಜತೆಗೆ ಸ್ಟೋರೇಜ್‌ ಸೌಲಭ್ಯವನ್ನೂ ಈ ಪಾರ್ಕ್‌ ಹೊಂದಿರುತ್ತದೆ. ಪಾವಗಡ ಸೋಲಾರ್‌ ಪಾರ್ಕ್‌ನಲ್ಲಿ ಸದ್ಯಕ್ಕೆ ಪ್ರಾಯೋಗಿಕವಾಗಿ ಈಗ 50 ಮೆಗಾ ವ್ಯಾಟ್‌ ಸ್ಟೋರೇಜ್‌ ಕೇಂದ್ರ ಪ್ರಾರಂಭಿಸುತ್ತೇವೆ ಎಂದು ಹೇಳಿದರು. ಭವಿಷ್ಯದಲ್ಲಿ ಸೋಲಾರ್‌ ಪಾರ್ಕ್‌ ಮಾಡಲು ಮುಂದೆ ಬರುವ ಖಾಸಗಿಯವರಿಗೆ ಸ್ಟೋರೇಜ್‌ ವ್ಯವಸ್ಥೆ ಕಡ್ಡಾಯಗೊಳಿಸುತ್ತೇವೆ. ತುಮಕೂರು, ದಾವಣಗೆರೆ, ಚಿತ್ರದುರ್ಗ, ಗದಗ, ಬಾಗಲಕೋಟೆ, ಹಾವೇರಿ, ವಿಜಯಪುರದಲ್ಲಿ ಹೈಬ್ರಿಡ್‌ ಪಾರ್ಕ್‌ ಸ್ಥಾಪನೆ ಮಾಡಲಾಗುವುದು ಎಂದರು.

ಕಲ್ಲಿದ್ದಲು ಸಮಸ್ಯೆಯೇ ಇಲ್ಲ :

ರಾಜ್ಯದಲ್ಲಿ ಕಲ್ಲಿದ್ದಲು ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಇದೆ. ಮಾರ್ಚ್‌ ತಿಂಗಳಲ್ಲಿ ಅತೀ ಹೆಚ್ಚು 14,800 ಮೆಗಾ ವ್ಯಾಟ್‌ ವಿದ್ಯುತ್‌ ಬೇಡಿಕೆ ಬಂದಿತ್ತು.ಅದನ್ನು ಸಮಸ್ಯೆಯಾಗದ ರೀತಿಯಲ್ಲಿ ನಿರ್ವಹಣೆ ಮಾಡಲಾಗಿದೆ. ಆರು ವರ್ಷದ ಬಳಿಕ ಎಲ್ಲ ಥರ್ಮಲ್‌ ಯುನಿಟ್‌ಗಳು ಕೆಲಸ ಮಾಡಿವೆ. ಕಲ್ಲಿದ್ದಲಿನ ಸಮಸ್ಯೆ ಆಗದಂತೆ ಕೇಂದ್ರ ಸರಕಾರದ ಜತೆ ಸಂಪರ್ಕ ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.

1.80 ಲಕ್ಷ ಟ್ರಾನ್ಸ್‌ಫಾರ್ಮರ್‌ ನಿರ್ವಹಣೆ :

ಟ್ರಾನ್ಸ್‌ ಫಾರ್ಮರ್‌ ನಿರ್ವಹಣ ಅಭಿಯಾನದಲ್ಲಿ ಈವರೆಗೆ 1,80,000 ಟ್ರಾನ್ಸ್‌ಫಾರ್ಮರ್ ಗಳನ್ನು ನಿರ್ವಹಣೆ ಮಾಡಲಾಗಿದೆ. ಅಭಿಯಾನ ಮೇ 20ಕ್ಕೆ ಮುಕ್ತಾಯಗೊಳ್ಳುತ್ತದೆಯಾದರೂ ನಿರ್ವಹಣೆ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಹೇಳಿದರು.

ಶಾಲಾ ಪಠ್ಯಪುಸ್ತಕದಿಂದ ನಾರಾಯಣ ಗುರು, ಭಗತ್‌ ಸಿಂಗ್‌ ಅವರ ಪಠ್ಯ ತೆಗೆದು ಹಾಕಿಲ್ಲ. ಈ ಬಗ್ಗೆ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಪಠ್ಯದಲ್ಲಿ ಕೇಶವ ಬಲಿರಾಮ ಹೆಡ್ಗೆವಾರ್‌ ಅವರ ಭಾಷಣ ಸೇರಿಸಿದರೆ ತಪ್ಪೇನು? ಅಷ್ಟಕ್ಕೂ ಕಾಂಗ್ರೆಸ್‌ಗೆ ಹೆಡೆYವಾರ್‌ ಕಂಡರೆ ಅಷ್ಟೇಕೆ ಭಯ? ಚಕ್ರವರ್ತಿ ಸೂಲಿಬೆಲೆ ಅವರ ತಾಯಿ ಭಾರತಿಗೆ ವಂದಿಸುವೆ ಎನ್ನುವ ಪಾಠವನ್ನು ಪಠ್ಯದಲ್ಲಿ ಅಳವಡಿಸಲಾಗಿದೆ. ಇದನ್ನು ವಿರೋಧಿಸುವ ಕಾಂಗ್ರೆಸಿಗರು ಯಾರನ್ನು ವಂದಿಸುತ್ತಾರೆ?– ವಿ. ಸುನಿಲ್‌ ಕುಮಾರ್‌, ಇಂಧನ ಸಚಿವರು

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.