124 ಸಿಬ್ಬಂದಿ ನೇಮಕ  ಪ್ರಕರಣ ರಂಗಪ್ಪಗೆ ಕಂಟಕ


Team Udayavani, Jun 27, 2018, 12:53 PM IST

rangappa.jpg

ಬೆಂಗಳೂರು: ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ ಉಲ್ಲಂಘಿಸಿ 124 ಬೋಧಕೇತರ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ಹಾಗೂ ಕುಲಸಚಿವರಾಗಿದ್ದ ಪ್ರೊ.ರಾಜಣ್ಣ , ಉಪಕುಲಸಚಿವ ಪ್ರೊ.ಎಂ.ವಿ.ವಿಷಕಂಠ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಜತೆಗೆ ಆಗ ನೇಮಕಗೊಂಡಿದ್ದ
ಎಲ್ಲ 124 ಸಿಬ್ಬಂದಿಯನ್ನೂ ಕೂಡಲೇ ಕೆಲಸದಿಂದ ತೆಗೆದುಹಾಕುವಂತೆಯೂ ಸೂಚನಾದೇಶ ನೀಡಲಾಗಿದೆ.

ರಾಜ್ಯಪಾಲರ ಸೂಚನೆಯಂತೆ ಉನ್ನತ ಶಿಕ್ಷಣ  ಇಲಾಖೆಯಿಂದ ಮೈಸೂರು ವಿವಿ ಕುಲಪತಿಗಳಿಗೆ ನಿರ್ದೇಶಿಸಲಾಗಿದೆ. ಡಾ. ಎಂ.ಆರ್‌.ನಿಂಬಾಳ್ಕರ್‌ ನೇತೃತ್ವದ ತನಿಖಾ ತಂಡವು ರಂಗಪ್ಪ ಅವರು, ಕುಲಪತಿಯಾಗಿದ್ದ ಕಡೇ ದಿನಗಳಲ್ಲಿ 124 ಸಿಬ್ಬಂದಿ ಯನ್ನು ಕಾನೂನು ಬಾಹಿರವಾಗಿ ನೇಮಕ ಮಾಡಿಕೊಂಡಿ ದ್ದಾರೆ ಎಂದು ಹೇಳಿದೆ. 

ಸಮ್ಮಿಶ್ರ ಸರ್ಕಾರದಲ್ಲಿ ರಂಗಪ್ಪ ಅವರು ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರ ರಾಗಬಹುದು ಎನ್ನಲಾ ಗಿತ್ತು. ಇದ ರಿಂದ ಹಿನ್ನಡೆ ಆಗಬಹುದು ಇದರಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಗಳ ವಿರುದ್ಧ ವಿರುದ್ಧ 30 ದಿನಗಳೊಳಗೆ ಕ್ರಿಮಿನಲ್‌ ಮೊಕದ್ದಮೆ ದಾಖ ಲಿಸಿ ಭ್ರಷ್ಟಾಚಾರ ಪ್ರತಿಬಂಧಕ
ಅಧಿನಿಯಮ ಪ್ರಕಾರ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್‌. ವೀರಬ್ರಹ್ಮಚಾರಿ ಮೈಸೂರು ವಿಶ್ವವಿದ್ಯಾಲಯದ ಕುಲಪತಿಗೆ ನಿರ್ದೇಶಿಸಿದ್ದಾರೆ. ಜತೆಗೆ ಅಕ್ರಮವಾಗಿ ನೇಮಕಗೊಂಡ “ಸಿ’ ಮತ್ತು “ಡಿ’ ಗ್ರೂಪ್‌ನ 124 ಬೋಧಕೇತರ ಸಿಬ್ಬಂದಿಗಳನ್ನು ಕೂಡಲೇ ಕೆಲಸದಿಂದ ತೆಗೆದು ಹಾಕುವಂತೆ ಸೂಚನಾದೇಶ ನೀಡಿದ್ದಾರೆ.

ಮೈಸೂರು ವಿವಿಗೆ ವಿವಿಧ ನೇಮಕಾತಿ ಮಾಡಿಕೊಳ್ಳುವ ಮುನ್ನ ಕಡ್ಡಾಯವಾಗಿ ನೇಮಕಾತಿ ನಿಯಮ, ಮಾರ್ಗಸೂಚಿ ಮತ್ತು ಮೀಸಲಾತಿ ಕಾರ್ಯಸೂಚಿಯನ್ನು ಪಾಲಿಸುವಂತೆ ತಿಳಿಸಿದ್ದಾರೆ. 

ಯಾವುದೇ ಮಾನದಂಡ ಅನುಸರಿಸಿಲ್ಲ: ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ವಿದ್ಯಾರ್ಹತೆ, ಮೀಸಲಾತಿ ಸೇರಿದಂತೆ ಯಾವುದೇ ಮಾನದಂಡವನ್ನು ಅನುಸರಿಸಿಲ್ಲ. ರಾಜ್ಯ ಸರ್ಕಾರ, ಆರ್ಥಿಕ ಇಲಾಖೆ, ವಿಶ್ವವಿದ್ಯಾಲಯದ ಸಿಂಡಿಕೇಟ್‌ ಅನುಮತಿ ಪಡೆದಿಲ್ಲ. ಹಾಗೆಯೇ ವಿವಿಯ
ನಿಯಮದ ಪ್ರಕಾರ ಬೋಧಕೇತರ ಸಿಬ್ಬಂದಿ ನೇಮಕ ಸಂದರ್ಭದಲ್ಲಿ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ನೀಡಬೇಕಿತ್ತು. ಅದನ್ನೂ ಮಾಡಿರಲಿಲ್ಲ. ಈ ನೇಮಕಾತಿ ಅಕ್ರಮವಾಗಿ ನಡೆದಿದೆ ಎಂದು ಮೈಸೂರು ವಿವಿಯ ಪ್ರಭಾರ ಕುಲಪತಿ ಪ್ರೊ.ಮಾನೆಯವರು ರಾಜ್ಯಪಾಲರಿಗೆ
ದೂರು ನೀಡಿದ್ದರು. ಅದರಂತೆ ರಾಜ್ಯಪಾಲರು 2017ರಲ್ಲಿ ನೇಮಕಾತಿಯ ಸಮಗ್ರ ತನಿಖೆಗೆ ಆದೇಶ ಹೊರಡಿಸಿದ್ದರು.

ವಿಶ್ವವಿದ್ಯಾಲಯದ ತನಿಖಾ ತಂಡದ ಅಧ್ಯಕ್ಷ ಡಾ.ಎಂ. ಆರ್‌.ನಿಂಬಾಲ್ಕರ್‌, ಸದಸ್ಯ ಡಾ.ಕಣುಬಾಯ್‌ ಗೋವಿಂದ್‌ ಜೀ ಮಾನವಿಯವರು 2017ರ ಜುಲೈ 28ರಂದು ಅಧಿಕಾರ ವಹಿಸಿಕೊಂಡು, ಕೂಲಂಕಷವಾಗಿ ಪ್ರಕರಣದ ತನಿಖೆ ನಡೆಸಿ. ಸಮಗ್ರ ವರದಿಯನ್ನು ರಾಜ್ಯಪಾಲರಿಗೆ ಒಪ್ಪಿಸಿದ್ದರು. ರಾಜ್ಯಪಾಲರ ಆದೇಶವನ್ನು ಉಲ್ಲಂಘಿಸಿ ಪ್ರೊ.ಕೆ.ಎಸ್‌. ರಂಗಪ್ಪ ಅವರು ಬೋಧಕೇತರ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜ್ಯಪಾಲರು ಯಾವ ರೀತಿಯ ಕ್ರಮ ಬೇಕಾದರೂ ತೆಗೆದುಕೊಳ್ಳಬಹುದು.

ವಿಶ್ವವಿದ್ಯಾಲಯದ ಕಾಯ್ದೆಯಂತೆ ಯಾವ ನಿಯಮವನ್ನು ಪಾಲಿಸದೇ ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಂಡಿದ್ದಾರೆ. ನೇಮಕವಾಗಬೇಕಿರುವ ಸಿಬ್ಬಂದಿಯ ವಿದ್ಯಾರ್ಹತೆ, ವರ್ಷ, ಸೇವಾನುಭವವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಕುಲಸಚಿವ ಪ್ರೊ.ಆರ್‌.ರಾಜಣ್ಣ ಅವರ ವಿರುದ್ಧವೂ ಸರ್ಕಾರ ಯಾವುದೇ ಕ್ರಮ ಬೇಕಾದರೂ ತೆಗೆದುಕೊಳ್ಳಬಹುದು ಎಂದು ಶಿಫಾರಸ್ಸು ಮಾಡಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.